AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಬೇಟೆ: ಬಸವನಗುಡಿಯಲ್ಲಿ ಶಂಕಿತ ಉಗ್ರನ ಅರೆಸ್ಟ್, ದೆಹಲಿ ಕೋರ್ಟ್ ಮೂಲಕ NIA ವಶಕ್ಕೆ

ಬೆಂಗಳೂರು: ನಗರದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನ ರಾಷ್ಟ್ರೀಯ ತನಿಖಾ ದಳವು ಬಸವನಗುಡಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ರೆಹಮಾನ್ ಸಿರಿಯಾ ಮೂಲದ ಉಗ್ರರ ಜತೆ ಸಂಪರ್ಕದಲ್ಲಿದ್ದ ಹಾಗೂ ಟೆರರ್ ದಾಳಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಂಡು ಸಹಕಾರ ನೀಡ್ತಿದ್ದ ಎಂದು ತಿಳಿದುಬಂದಿದೆ. ISKP ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅಬ್ದುಲ್ ರೆಹಮಾನ್ ಬೆಂಗಳೂರು, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ದಾಳಿಗೆ ಸಂಚು ಮಾಡಿದ್ದನಂತೆ. ISIS ಜೊತೆ ಸಂಪರ್ಕ, ತಪ್ಪೊಪ್ಪಿಕೊಂಡ ಬಂಧಿತ ಆರೋಪಿ […]

ಭರ್ಜರಿ ಬೇಟೆ: ಬಸವನಗುಡಿಯಲ್ಲಿ ಶಂಕಿತ ಉಗ್ರನ ಅರೆಸ್ಟ್, ದೆಹಲಿ ಕೋರ್ಟ್ ಮೂಲಕ NIA ವಶಕ್ಕೆ
ಪ್ರಾತಿನಿಧಿಕ ಚಿತ್ರ
KUSHAL V
| Updated By: ಸಾಧು ಶ್ರೀನಾಥ್​|

Updated on: Aug 18, 2020 | 5:13 PM

Share

ಬೆಂಗಳೂರು: ನಗರದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನ ರಾಷ್ಟ್ರೀಯ ತನಿಖಾ ದಳವು ಬಸವನಗುಡಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.

ರೆಹಮಾನ್ ಸಿರಿಯಾ ಮೂಲದ ಉಗ್ರರ ಜತೆ ಸಂಪರ್ಕದಲ್ಲಿದ್ದ ಹಾಗೂ ಟೆರರ್ ದಾಳಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಂಡು ಸಹಕಾರ ನೀಡ್ತಿದ್ದ ಎಂದು ತಿಳಿದುಬಂದಿದೆ. ISKP ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅಬ್ದುಲ್ ರೆಹಮಾನ್ ಬೆಂಗಳೂರು, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ದಾಳಿಗೆ ಸಂಚು ಮಾಡಿದ್ದನಂತೆ.

ISIS ಜೊತೆ ಸಂಪರ್ಕ, ತಪ್ಪೊಪ್ಪಿಕೊಂಡ ಬಂಧಿತ ಆರೋಪಿ ಇದಲ್ಲದೆ, ಬಾಂಗ್ಲಾ ಮೂಲದ ನಿಷೇಧಿತ ಉಗ್ರ ಸಂಘಟನೆಯ ಸದಸ್ಯ ಸಹ ಆಗಿದ್ದ. ತಿಹಾರ್ ಜೈಲಿನಲ್ಲಿರುವ ಅಬ್ದುಲ್ ಬಸೀತ್ ಜೊತೆ ಸಂಪರ್ಕ ಹೊಂದಿದ್ದು ಸಿಎಎ ಪ್ರತಿಭಟನೆ ವೇಳೆ ಗಲಭೆಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ. ಇದೀಗ, ತಾನು ISIS ಜೊತೆ ಸಂಪರ್ಕ ಹೊಂದಿದ್ದೆ ಎಂದು  ಬಂಧಿತ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ MS ರಾಮಯ್ಯ ಆಸ್ಪತ್ರೆಯಲ್ಲಿ ನೇತ್ರ ವೈದ್ಯ ಆರೋಪಿ MS ರಾಮಯ್ಯ ಆಸ್ಪತ್ರೆಯಲ್ಲಿ ನೇತ್ರ ವೈದ್ಯನಾಗಿ ಸೇವೆ ಸಲ್ಲಿಸಿದ್ದ ಎಂದು ಹೇಳಿಲಾಗಿದೆ. 2014ರಲ್ಲಿ ಸಿರಿಯಾದ ಐಸಿಸ್‌ ಕ್ಯಾಂಪ್‌ಗೆ ಭೇಟಿ ನೀಡಿದ್ದ ರೆಹಮಾನ್​ ಐಸಿಸ್ ಕ್ಯಾಂಪ್‌ನಲ್ಲಿ ಗಾಯಗೊಂಡ ಉಗ್ರರಿಗೆ ಚಿಕಿತ್ಸೆ ನೀಡಿದ್ದ ಎಂದೂ ತಿಳಿದುಬಂದಿದೆ.

10 ದಿನ ಐಸಿಸ್ ಕ್ಯಾಂಪ್‌ನಲ್ಲಿದ್ದು ವಾಪಸ್ ಬಂದಿದ್ದ ಶಂಕಿತ ಉಗ್ರನ ಲ್ಯಾಪ್​ಟಾಪ್, ಮೊಬೈಲ್‌ ಮತ್ತು ಇತರೆ ಡಿಜಿಟಲ್ ಪರಿಕರಗಳಿಂದ ಸಾಕ್ಷ್ಯ ಸಂಗ್ರಹಿಸಿ ದೆಹಲಿಯ ಎನ್ಐಎ ಕೋರ್ಟ್‌ಗೆ ಈತನನ್ನ ಹಾಜರುಪಡಿಸಿ ವಶಕ್ಕೆ ಪಡೆಯಲಾಗಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!