AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಬೇಟೆ: ಬಸವನಗುಡಿಯಲ್ಲಿ ಶಂಕಿತ ಉಗ್ರನ ಅರೆಸ್ಟ್, ದೆಹಲಿ ಕೋರ್ಟ್ ಮೂಲಕ NIA ವಶಕ್ಕೆ

ಬೆಂಗಳೂರು: ನಗರದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನ ರಾಷ್ಟ್ರೀಯ ತನಿಖಾ ದಳವು ಬಸವನಗುಡಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ರೆಹಮಾನ್ ಸಿರಿಯಾ ಮೂಲದ ಉಗ್ರರ ಜತೆ ಸಂಪರ್ಕದಲ್ಲಿದ್ದ ಹಾಗೂ ಟೆರರ್ ದಾಳಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಂಡು ಸಹಕಾರ ನೀಡ್ತಿದ್ದ ಎಂದು ತಿಳಿದುಬಂದಿದೆ. ISKP ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅಬ್ದುಲ್ ರೆಹಮಾನ್ ಬೆಂಗಳೂರು, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ದಾಳಿಗೆ ಸಂಚು ಮಾಡಿದ್ದನಂತೆ. ISIS ಜೊತೆ ಸಂಪರ್ಕ, ತಪ್ಪೊಪ್ಪಿಕೊಂಡ ಬಂಧಿತ ಆರೋಪಿ […]

ಭರ್ಜರಿ ಬೇಟೆ: ಬಸವನಗುಡಿಯಲ್ಲಿ ಶಂಕಿತ ಉಗ್ರನ ಅರೆಸ್ಟ್, ದೆಹಲಿ ಕೋರ್ಟ್ ಮೂಲಕ NIA ವಶಕ್ಕೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: |

Updated on: Aug 18, 2020 | 5:13 PM

Share

ಬೆಂಗಳೂರು: ನಗರದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನ ರಾಷ್ಟ್ರೀಯ ತನಿಖಾ ದಳವು ಬಸವನಗುಡಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.

ರೆಹಮಾನ್ ಸಿರಿಯಾ ಮೂಲದ ಉಗ್ರರ ಜತೆ ಸಂಪರ್ಕದಲ್ಲಿದ್ದ ಹಾಗೂ ಟೆರರ್ ದಾಳಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಂಡು ಸಹಕಾರ ನೀಡ್ತಿದ್ದ ಎಂದು ತಿಳಿದುಬಂದಿದೆ. ISKP ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅಬ್ದುಲ್ ರೆಹಮಾನ್ ಬೆಂಗಳೂರು, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ದಾಳಿಗೆ ಸಂಚು ಮಾಡಿದ್ದನಂತೆ.

ISIS ಜೊತೆ ಸಂಪರ್ಕ, ತಪ್ಪೊಪ್ಪಿಕೊಂಡ ಬಂಧಿತ ಆರೋಪಿ ಇದಲ್ಲದೆ, ಬಾಂಗ್ಲಾ ಮೂಲದ ನಿಷೇಧಿತ ಉಗ್ರ ಸಂಘಟನೆಯ ಸದಸ್ಯ ಸಹ ಆಗಿದ್ದ. ತಿಹಾರ್ ಜೈಲಿನಲ್ಲಿರುವ ಅಬ್ದುಲ್ ಬಸೀತ್ ಜೊತೆ ಸಂಪರ್ಕ ಹೊಂದಿದ್ದು ಸಿಎಎ ಪ್ರತಿಭಟನೆ ವೇಳೆ ಗಲಭೆಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ. ಇದೀಗ, ತಾನು ISIS ಜೊತೆ ಸಂಪರ್ಕ ಹೊಂದಿದ್ದೆ ಎಂದು  ಬಂಧಿತ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ MS ರಾಮಯ್ಯ ಆಸ್ಪತ್ರೆಯಲ್ಲಿ ನೇತ್ರ ವೈದ್ಯ ಆರೋಪಿ MS ರಾಮಯ್ಯ ಆಸ್ಪತ್ರೆಯಲ್ಲಿ ನೇತ್ರ ವೈದ್ಯನಾಗಿ ಸೇವೆ ಸಲ್ಲಿಸಿದ್ದ ಎಂದು ಹೇಳಿಲಾಗಿದೆ. 2014ರಲ್ಲಿ ಸಿರಿಯಾದ ಐಸಿಸ್‌ ಕ್ಯಾಂಪ್‌ಗೆ ಭೇಟಿ ನೀಡಿದ್ದ ರೆಹಮಾನ್​ ಐಸಿಸ್ ಕ್ಯಾಂಪ್‌ನಲ್ಲಿ ಗಾಯಗೊಂಡ ಉಗ್ರರಿಗೆ ಚಿಕಿತ್ಸೆ ನೀಡಿದ್ದ ಎಂದೂ ತಿಳಿದುಬಂದಿದೆ.

10 ದಿನ ಐಸಿಸ್ ಕ್ಯಾಂಪ್‌ನಲ್ಲಿದ್ದು ವಾಪಸ್ ಬಂದಿದ್ದ ಶಂಕಿತ ಉಗ್ರನ ಲ್ಯಾಪ್​ಟಾಪ್, ಮೊಬೈಲ್‌ ಮತ್ತು ಇತರೆ ಡಿಜಿಟಲ್ ಪರಿಕರಗಳಿಂದ ಸಾಕ್ಷ್ಯ ಸಂಗ್ರಹಿಸಿ ದೆಹಲಿಯ ಎನ್ಐಎ ಕೋರ್ಟ್‌ಗೆ ಈತನನ್ನ ಹಾಜರುಪಡಿಸಿ ವಶಕ್ಕೆ ಪಡೆಯಲಾಗಿದೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ