AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭರ್ಜರಿ ಬೇಟೆ: ಬಸವನಗುಡಿಯಲ್ಲಿ ಶಂಕಿತ ಉಗ್ರನ ಅರೆಸ್ಟ್, ದೆಹಲಿ ಕೋರ್ಟ್ ಮೂಲಕ NIA ವಶಕ್ಕೆ

ಬೆಂಗಳೂರು: ನಗರದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನ ರಾಷ್ಟ್ರೀಯ ತನಿಖಾ ದಳವು ಬಸವನಗುಡಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ. ರೆಹಮಾನ್ ಸಿರಿಯಾ ಮೂಲದ ಉಗ್ರರ ಜತೆ ಸಂಪರ್ಕದಲ್ಲಿದ್ದ ಹಾಗೂ ಟೆರರ್ ದಾಳಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಂಡು ಸಹಕಾರ ನೀಡ್ತಿದ್ದ ಎಂದು ತಿಳಿದುಬಂದಿದೆ. ISKP ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅಬ್ದುಲ್ ರೆಹಮಾನ್ ಬೆಂಗಳೂರು, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ದಾಳಿಗೆ ಸಂಚು ಮಾಡಿದ್ದನಂತೆ. ISIS ಜೊತೆ ಸಂಪರ್ಕ, ತಪ್ಪೊಪ್ಪಿಕೊಂಡ ಬಂಧಿತ ಆರೋಪಿ […]

ಭರ್ಜರಿ ಬೇಟೆ: ಬಸವನಗುಡಿಯಲ್ಲಿ ಶಂಕಿತ ಉಗ್ರನ ಅರೆಸ್ಟ್, ದೆಹಲಿ ಕೋರ್ಟ್ ಮೂಲಕ NIA ವಶಕ್ಕೆ
ಪ್ರಾತಿನಿಧಿಕ ಚಿತ್ರ
KUSHAL V
| Edited By: ಸಾಧು ಶ್ರೀನಾಥ್​|

Updated on: Aug 18, 2020 | 5:13 PM

Share

ಬೆಂಗಳೂರು: ನಗರದಲ್ಲಿ ದಾಳಿಗೆ ಸಂಚು ರೂಪಿಸಿದ್ದ ಶಂಕಿತ ಉಗ್ರನನ್ನ ರಾಷ್ಟ್ರೀಯ ತನಿಖಾ ದಳವು ಬಸವನಗುಡಿಯಲ್ಲಿ ಬಂಧಿಸಿದೆ. ಬಂಧಿತ ಆರೋಪಿಯನ್ನ ಅಬ್ದುಲ್ ರೆಹಮಾನ್ ಎಂದು ಗುರುತಿಸಲಾಗಿದೆ.

ರೆಹಮಾನ್ ಸಿರಿಯಾ ಮೂಲದ ಉಗ್ರರ ಜತೆ ಸಂಪರ್ಕದಲ್ಲಿದ್ದ ಹಾಗೂ ಟೆರರ್ ದಾಳಿಗೆ ವ್ಯವಸ್ಥಿತವಾಗಿ ಸಿದ್ಧತೆ ಮಾಡಿಕೊಂಡು ಸಹಕಾರ ನೀಡ್ತಿದ್ದ ಎಂದು ತಿಳಿದುಬಂದಿದೆ. ISKP ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದ ಅಬ್ದುಲ್ ರೆಹಮಾನ್ ಬೆಂಗಳೂರು, ದೆಹಲಿ ಸೇರಿದಂತೆ ಪ್ರಮುಖ ನಗರಗಳಲ್ಲಿ ದಾಳಿಗೆ ಸಂಚು ಮಾಡಿದ್ದನಂತೆ.

ISIS ಜೊತೆ ಸಂಪರ್ಕ, ತಪ್ಪೊಪ್ಪಿಕೊಂಡ ಬಂಧಿತ ಆರೋಪಿ ಇದಲ್ಲದೆ, ಬಾಂಗ್ಲಾ ಮೂಲದ ನಿಷೇಧಿತ ಉಗ್ರ ಸಂಘಟನೆಯ ಸದಸ್ಯ ಸಹ ಆಗಿದ್ದ. ತಿಹಾರ್ ಜೈಲಿನಲ್ಲಿರುವ ಅಬ್ದುಲ್ ಬಸೀತ್ ಜೊತೆ ಸಂಪರ್ಕ ಹೊಂದಿದ್ದು ಸಿಎಎ ಪ್ರತಿಭಟನೆ ವೇಳೆ ಗಲಭೆಗೆ ಸಂಚು ರೂಪಿಸಿದ್ದ ಎಂದು ತಿಳಿದುಬಂದಿದೆ. ಇದೀಗ, ತಾನು ISIS ಜೊತೆ ಸಂಪರ್ಕ ಹೊಂದಿದ್ದೆ ಎಂದು  ಬಂಧಿತ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.

ಆರೋಪಿ MS ರಾಮಯ್ಯ ಆಸ್ಪತ್ರೆಯಲ್ಲಿ ನೇತ್ರ ವೈದ್ಯ ಆರೋಪಿ MS ರಾಮಯ್ಯ ಆಸ್ಪತ್ರೆಯಲ್ಲಿ ನೇತ್ರ ವೈದ್ಯನಾಗಿ ಸೇವೆ ಸಲ್ಲಿಸಿದ್ದ ಎಂದು ಹೇಳಿಲಾಗಿದೆ. 2014ರಲ್ಲಿ ಸಿರಿಯಾದ ಐಸಿಸ್‌ ಕ್ಯಾಂಪ್‌ಗೆ ಭೇಟಿ ನೀಡಿದ್ದ ರೆಹಮಾನ್​ ಐಸಿಸ್ ಕ್ಯಾಂಪ್‌ನಲ್ಲಿ ಗಾಯಗೊಂಡ ಉಗ್ರರಿಗೆ ಚಿಕಿತ್ಸೆ ನೀಡಿದ್ದ ಎಂದೂ ತಿಳಿದುಬಂದಿದೆ.

10 ದಿನ ಐಸಿಸ್ ಕ್ಯಾಂಪ್‌ನಲ್ಲಿದ್ದು ವಾಪಸ್ ಬಂದಿದ್ದ ಶಂಕಿತ ಉಗ್ರನ ಲ್ಯಾಪ್​ಟಾಪ್, ಮೊಬೈಲ್‌ ಮತ್ತು ಇತರೆ ಡಿಜಿಟಲ್ ಪರಿಕರಗಳಿಂದ ಸಾಕ್ಷ್ಯ ಸಂಗ್ರಹಿಸಿ ದೆಹಲಿಯ ಎನ್ಐಎ ಕೋರ್ಟ್‌ಗೆ ಈತನನ್ನ ಹಾಜರುಪಡಿಸಿ ವಶಕ್ಕೆ ಪಡೆಯಲಾಗಿದೆ.

Follow Us
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು