ಸೋಂಕಿತರ ಸಾವನ್ನು ನೋಡಲು ಕಷ್ಟವಾಗುತ್ತಿದೆ; ಕೊರೊನಾ ಪರಿಸ್ಥಿತಿ ವಿವರಿಸುತ್ತಾ ಕಣ್ಣೀರು ಹಾಕಿದ ವೈದ್ಯ

| Updated By: ganapathi bhat

Updated on: Aug 23, 2021 | 12:33 PM

ಜನಸಾಮಾನ್ಯರಿಂದ ಹಿಡಿದು ಗಣ್ಯಾತಿಗಣ್ಯರ ತನಕ ಎಲ್ಲರೂ ಕೊರೊನಾ ಮುಂದೆ ಸಮಾನಾಗಿದ್ದು, ಎಷ್ಟೇ ಪ್ರಭಾವವಿದ್ದರೂ ಜೀವ ಉಳಿಸಿಕೊಳ್ಳಲಾಗುತ್ತಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ.

ಸೋಂಕಿತರ ಸಾವನ್ನು ನೋಡಲು ಕಷ್ಟವಾಗುತ್ತಿದೆ; ಕೊರೊನಾ ಪರಿಸ್ಥಿತಿ ವಿವರಿಸುತ್ತಾ ಕಣ್ಣೀರು ಹಾಕಿದ ವೈದ್ಯ
ಕೊರೊನಾ ಬಗ್ಗೆ ಮಾತನಾಡುತ್ಥಾ ಅತ್ತ ವೈದ್ಯ
Follow us on

ಕೋಲ್ಕತ್ತಾ: ಕೊರೊನಾ ಸೋಂಕಿನ ಬಗ್ಗೆ ಫೇಸ್ಬುಕ್ ಲೈವ್​ನಲ್ಲಿ ಮಾತನಾಡುವಾಗ, ಜನರ ಜೀವವನ್ನು ಉಳಿಸಲಾಗುತ್ತಿಲ್ಲ ಎಂದು ವೈದ್ಯರೊಬ್ಬರು ಭಾವುಕರಾದ ಘಟನೆ ನಡೆದಿದೆ. ಪಶ್ಚಿಮ ಬಂಗಾಳದ ಬರ್ಧಮಾನ್ ಎಂಬಲ್ಲಿನ ವೈದ್ಯ ಡಾ. ಅನಿರ್​ಬಾನ್ ಬಿಸ್ವಾಸ್ ಕೊವಿಡ್-19 ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದರು. ಆ ವೇಳೆ ಹಾಸಿಗೆ ಕೊರತೆ, ಕೊರೊನಾ ಸೋಂಕಿತರ ಚಿಕಿತ್ಸೆಯ ಬಗ್ಗೆ ಮಾತನಾಡುತ್ತಿದ್ದರು. ಕೊವಿಡ್ ಸೋಂಕಿತರಿಗೆ ಹಾಸಿಗೆಯನ್ನು 100ರಿಂದ 10,000ಕ್ಕೆ ಏರಿಕೆ ಮಾಡುವುದು ಯಾವುದೇ ಆಸ್ಪತ್ರೆಗೂ ಸುಲಭ ಸಾಧ್ಯವಲ್ಲ. ಸೋಂಕಿತರು ನಮ್ಮ ಕಣ್ಣಮುಂದೆ ಸಾವನ್ನಪ್ಪುವುದನ್ನು ನೋಡುವುದಕ್ಕೆ ಬಹಳ ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ. ಈ ವೇಳೆ ಕಷ್ಟ ನೆನೆದು ಅವರು ಭಾವುಕರಾಗಿದ್ದಾರೆ.

ದೇಶದಲ್ಲಿ ಕೊರೊನಾ ಸೋಂಕಿನ ಎರಡನೇ ಅಲೆ ಆರಂಭವಾದ ನಂತರ ಹಿರಿಯರು, ಕಿರಿಯರು, ಬಡವ, ಶ್ರೀಮಂತ ಎಂಬ ಭೇದಭಾವ ಇಲ್ಲದೇ ಅನೇಕರು ಮರಣ ಹೊಂದುತ್ತಿದ್ದಾರೆ. ಜನಸಾಮಾನ್ಯರಿಂದ ಹಿಡಿದು ಗಣ್ಯಾತಿಗಣ್ಯರ ತನಕ ಎಲ್ಲರೂ ಕೊರೊನಾ ಮುಂದೆ ಸಮಾನಾಗಿದ್ದು, ಎಷ್ಟೇ ಪ್ರಭಾವವಿದ್ದರೂ ಜೀವ ಉಳಿಸಿಕೊಳ್ಳಲಾಗುತ್ತಿಲ್ಲ ಎಂಬ ಸ್ಥಿತಿ ನಿರ್ಮಾಣವಾಗಿದೆ. ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಕಿರಿಯ ಸಹೋದರ ಆಶಿಮ್ ಬ್ಯಾನರ್ಜಿ ಕೂಡ ಕೊರೊನಾ ಸೋಂಕಿಗೆ ತುತ್ತಾಗಿ ನಿಧನರಾಗಿದ್ದಾರೆ. ಆಶಿಮ್ ಬ್ಯಾನರ್ಜಿ ಅವರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಕೋಲ್ಕತ್ತಾದ ಮೆಡಿಕಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಖ್ಯಸ್ಥ ಡಾ.ಅಲೋಕ್ ರಾಯ್ ತಿಳಿಸಿದ್ದಾರೆ.

ಆಶಿಮ್ ಬ್ಯಾನರ್ಜಿ ಅವರಿಗೆ ಕೊರೊನಾ ಸೋಂಕು ತಗುಲಿ ಅನೇಕ ದಿನಗಳಾಗಿದ್ದು, ಸುಮಾರು ಒಂದು ತಿಂಗಳಿನಿಂದ ಚಿಕಿತ್ಸೆ ನೀಡಲಾಗುತ್ತಿತ್ತು. ನಿರಂತರ ಚಿಕಿತ್ಸೆ ನೀಡಿದರೂ ಅವರ ದೇಹದಲ್ಲಿ ಆಮ್ಲಜನಕದ ಪ್ರಮಾಣ ಕಡಿಮೆಯಾಗುತ್ತಾ ಬಂದ ಕಾರಣ ಉಳಿಸಿಕೊಳ್ಳುವುದು ಅಸಾಧ್ಯವಾಗಿದೆ. ಇದೀಗ ಮೃತರ ಅಂತ್ಯಸಂಸ್ಕಾರವನ್ನು ಕೊರೊನಾ ನಿಯಮಾವಳಿಗಳ ಪ್ರಕಾರವೇ ಮಾಡಲಾಗುತ್ತದೆ ಎಂದು ಮಾಹಿತಿ ಬಂದಿದೆ.

ಪಶ್ಚಿಮ ಬಂಗಾಳ ಕೊರೊನಾ ಪ್ರಕರಣಗಳು 
ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣಾ ಸಂದರ್ಭದಿಂದಲೂ ಕೊರೊನಾ ಪ್ರಕರಣಗಳು ಏರುಗತಿಯಲ್ಲಿ ಸಾಗುತ್ತಿದ್ದು, ಸೋಂಕು ಹಬ್ಬುವಿಕೆಯಲ್ಲಿ ಚುನಾವಣೆ ಪ್ರಮುಖ ಪಾತ್ರ ವಹಿಸಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ಧಾರೆ. ಸರ್ಕಾರಿ ಅಂಕಿ ಅಂಶಗಳ ಪ್ರಕಾರ ಪಶ್ಚಿಮ ಬಂಗಾಳದಲ್ಲಿ ಕಳೆದ 24 ಗಂಟೆ ಅವಧಿಯಲ್ಲಿ ಸುಮಾರು 20,478 ಜನರಲ್ಲಿ ಸೋಂಕು ಪತ್ತೆಯಾಗಿದ್ದು, ಸದ್ಯ ಒಂದೂವರೆ ಲಕ್ಷಕ್ಕೂ ಅಧಿಕ ಜನ ಸೋಂಕಿತರು ರಾಜ್ಯದಲ್ಲಿದ್ದಾರೆ ಎಂದು ತಿಳಿದುಬಂದಿದೆ. ಕಳೆದ 11 ದಿನಗಳಿಂದ ಪ್ರತಿನಿತ್ಯ 100ಕ್ಕೂ ಹೆಚ್ಚು ಮಂದಿ ಕೊರೊನಾ ಸೋಂಕಿನಿಂದ ಮೃತರಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 138 ಜನ ಕೊನೆಯುಸಿರೆಳೆದಿದ್ದಾರೆ.

ಇದನ್ನೂ ಓದಿ: ಮಕ್ಕಳಲ್ಲಿ ಕೊರೊನಾ ಸೋಂಕು: ಲಕ್ಷಣಗಳೇನು? ಯಾವ ಹಂತದಲ್ಲಿ ಎಂಥಾ ಚಿಕಿತ್ಸೆ?-ಸ್ಪಷ್ಟವಾಗಿ ವಿವರಿಸಿದ ಆರೋಗ್ಯ ಇಲಾಖೆ

DCM Ashwath Narayan Press Meet ಕೊರೊನಾ ಮಾರಿಯನ್ನು ನಿಯಂತ್ರಿಸಲು ರಾಜ್ಯ ಕೊವಿಡ್‌ ಟಾಸ್ಕ್ ಫೋರ್ಸ್ ತೆಗೆದುಕೊಂಡಿದೆ ಅನೇಕ ಪ್ರಮುಖ ತೀರ್ಮಾನಗಳು, ಏನವು? ಇಲ್ಲಿದೆ ವಿವರ

Published On - 5:07 pm, Sat, 15 May 21