AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಯುಷ್ ವಿಮರ್ಶಕ ಡಾ ಅಬಿ ಫಿಲಿಪ್ಸ್ ಅವರ ‘ದಿ ಲಿವರ್ ಡಾಕ್’ ಎಂಬ X ಖಾತೆ ರದ್ದು

ಫಿಲಿಪ್ಸ್ ಕೇರಳದವರು. ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಯೂಟ್ಯೂಬ್  ವಿಡಿಯೊಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರು ಹುಸಿ ವಿಜ್ಞಾನವನ್ನು ಬಯಲು ಮಾಡುತಿದ್ದು ಮನೆಮದ್ದುಗಳ ಬಗ್ಗೆ ಪ್ರಚಲಿತದಲ್ಲಿರುವ ರೀತಿಗಳನ್ನು ತಿರಸ್ಕರಿಸುತ್ತಾರೆ. ಸ್ವಲ್ಪ ಸಮಯದಿಂದ ಇವರು ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿಯಂತಹ ಪರ್ಯಾಯ ಔಷಧಗಳು ಮತ್ತು ಚಿಕಿತ್ಸಾ ವಿಧಾನಗಳ ಬಗ್ಗೆ ಸುಳ್ಳುಗಳನ್ನು ಭೇದಿಸುತ್ತಿದ್ದಾರೆ

ಆಯುಷ್ ವಿಮರ್ಶಕ ಡಾ ಅಬಿ ಫಿಲಿಪ್ಸ್ ಅವರ ‘ದಿ ಲಿವರ್ ಡಾಕ್’ ಎಂಬ X ಖಾತೆ ರದ್ದು
ಡಾ ಅಬಿ ಫಿಲಿಪ್ಸ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Sep 28, 2023 | 6:21 PM

Share

ದೆಹಲಿ ಸೆಪ್ಟೆಂಬರ 28: ತನ್ನ ನಿಯಮಿತ ಪೋಸ್ಟ್‌ಗಳ ಮೂಲಕ ಹುಸಿ ವಿಜ್ಞಾನವನ್ನು ಭೇದಿಸಲು ಹೆಸರಾದ ವೈದ್ಯರ ಖಾತೆಯನ್ನು ರದ್ದುಗೊಳಿಸುವಂತೆ ಬೆಂಗಳೂರು ಸಿವಿಲ್  ನ್ಯಾಯಾಲಯವು (Bengaluru Civil Court )ಗುರುವಾರ ಸಾಮಾಜಿಕ ಮಾಧ್ಯಮ ಕಂಪನಿ Xಗೆ ಹೇಳಿದೆ . ಎಕ್ಸ್​​ನಲ್ಲಿ ದಿ ಲಿವರ್ ಡಾಕ್   (The Liver Doc) ಎಂಬ ಖಾತೆಯಿಂದ ಚಿರಪರಿತರಾಗಿರುವ  ಹೆಪಟೊಲೊಜಿಸ್ಟ್ ಡಾ ಸಿರಿಯಾಕ್ ಅಬಿ ಫಿಲಿಪ್ಸ್ (Dr Abby Philips) ಅವರು ತಮ್ಮ ಕಂಪನಿಯ ವಿರುದ್ಧ ಮಾನಹಾನಿಕರ ಆರೋಪ ಮಾಡಿದ್ದಾರೆ ಎಂದು ಆರೋಪಿಸಿ ಹಿಮಾಲಯ ವೆಲ್ ನೆಸ್ ಕಾರ್ಪೊರೇಷನ್ ಸಲ್ಲಿಸಿದ ಮೊಕದ್ದಮೆಯಲ್ಲಿ ಬೆಂಗಳೂರು ಸಿವಿಲ್ ಕೋರ್ಟ್ ಈ ಆದೇಶ ನೀಡಿದೆ ಎಂದು ಲೈವ್ ಲಾ ವರದಿ ಮಾಡಿದೆ.

ಬೆಂಗಳೂರು ಮೂಲದ ಹರ್ಬಲ್ ಹೆಲ್ತ್ ಮತ್ತು ಪರ್ಸನಲ್ ಕೇರ್ ಕಂಪನಿ ಎಂದು ವಿವರಿಸುವ ಹಿಮಾಲಯ ವೆಲ್ನೆಸ್ ಕಾರ್ಪೊರೇಷನ್ ಪ್ರಕರಣವನ್ನು ದಾಖಲಿಸಿದ ನಂತರ ಡಾ ಫಿಲಿಪ್ಸ್ ಅವರ X  ಖಾತೆ ರದ್ದು ಮಾಡಲಾಗಿದೆ. ಲೈವ್ ಲಾ ವರದಿಯ ಪ್ರಕಾರ, ಡಾ ಫಿಲಿಪ್ಸ್ ಅವರು ತಮ್ಮ ಕಂಪನಿಯ ಉತ್ಪನ್ನಗಳ ವಿರುದ್ಧ ಅವಹೇಳನಕಾರಿ ಹೇಳಿಕೆಗಳನ್ನು ಪೋಸ್ಟ್ ಮಾಡುತ್ತಿದ್ದು, ಇದು ವ್ಯಾಪಾರ ಕುಸಿತಕ್ಕೆ ಕಾರಣವಾಗಿದೆ ಎಂದು ಹಿಮಾಲಯ ವೆಲ್ ನೆಸ್ ಕಾರ್ಪೊರೇಷನ್ ಹೇಳಿದೆ. “ಕಾನೂನು ಬೇಡಿಕೆಗೆ ಪ್ರತಿಕ್ರಿಯೆಯಾಗಿ @theliverdr ಅನ್ನು ತಡೆಹಿಡಿಯಲಾಗಿದೆ.” ಎಂದು ಎಕ್ಸ್ ಹೇಳಿದೆ.

ಡಾ ಸಿರಿಯಾಕ್ ಅಬಿ ಫಿಲಿಪ್ಸ್ ಯಾರು?

ಫಿಲಿಪ್ಸ್ ಕೇರಳದವರು. ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ಮತ್ತು ಯೂಟ್ಯೂಬ್  ವಿಡಿಯೊಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರು ಹುಸಿ ವಿಜ್ಞಾನವನ್ನು ಬಯಲು ಮಾಡುತಿದ್ದು ಮನೆಮದ್ದುಗಳ ಬಗ್ಗೆ ಪ್ರಚಲಿತದಲ್ಲಿರುವ ರೀತಿಗಳನ್ನು ತಿರಸ್ಕರಿಸುತ್ತಾರೆ. ಸ್ವಲ್ಪ ಸಮಯದಿಂದ ಇವರು ಆಯುರ್ವೇದ, ಯೋಗ ಮತ್ತು ನ್ಯಾಚುರೋಪತಿ, ಯುನಾನಿ, ಸಿದ್ಧ ಮತ್ತು ಹೋಮಿಯೋಪತಿಯಂತಹ ಪರ್ಯಾಯ ಔಷಧಗಳು ಮತ್ತು ಚಿಕಿತ್ಸಾ ವಿಧಾನಗಳ ಬಗ್ಗೆ ಸುಳ್ಳುಗಳನ್ನು ಭೇದಿಸುತ್ತಿದ್ದಾರೆ. ಪ್ರತ್ಯೇಕ ಆಯುಷ್ ಸಚಿವಾಲಯದೊಂದಿಗೆ ಪರ್ಯಾಯ ಔಷಧಗಳಿಗೆ ಸರ್ಕಾರವು ಒತ್ತಾಯಿಸುತ್ತಿರುವ ಸಮಯದಲ್ಲಿ, ಫಿಲಿಪ್ಸ್ ಈ ಔಷಧಿಗಳು ಮತ್ತು ಚಿಕಿತ್ಸೆಗಳು ವೈಜ್ಞಾನಿಕ ಆಧಾರವನ್ನು ಹೊಂದಿಲ್ಲ ಮತ್ತು ರೋಗಿಗಳಿಗೆ ಹಾನಿಯನ್ನುಂಟುಮಾಡುತ್ತವೆ ಎಂದು ವಾದಿಸುತ್ತಾರೆ.

ಈ ಉದಾಹರಣೆಯನ್ನು ತೆಗೆದುಕೊಳ್ಳಿ. ಈ ವರ್ಷದ ಆರಂಭದಲ್ಲಿ ಫಿಲಿಪ್ಸ್ ಕೆಲವು ಹೋಮಿಯೋಪತಿ ಔಷಧಿಗಳಲ್ಲಿ ಬಳಸಲಾದ ಆಲ್ಕೋಹಾಲ್ ಪ್ರಮಾಣವನ್ನು ಕುರಿತು ಕಳವಳ ವ್ಯಕ್ತಪಡಿಸಿದರು. ಹೋಮಿಯೋಪತಿಯು “ನೈಜ ಆಲ್ಕೋಹಾಲ್ ಲಾಬಿಯ ವಿರುದ್ಧ ಕೇವಲ ಪ್ರತಿಸ್ಪರ್ಧಿ ವ್ಯಾಪಾರವಾಗಿದೆ” ಎಂದು ಆರೋಪಿಸಿದರು. ಆಯಾಸಕ್ಕೆ ಚಿಕಿತ್ಸೆ ನೀಡಲು ಆಗಾಗ್ಗೆ ಶಿಫಾರಸು ಮಾಡಲಾದ ಹೋಮಿಯೋಪತಿ ಔಷಧವಾದ ಸಟಿವೋಲ್ 40% ರಷ್ಟು ಪ್ರಮಾಣಿತ ಆಲ್ಕೋಹಾಲ್ ಸಾಂದ್ರತೆಯನ್ನು ಹೊಂದಿದೆ ಎಂದು ಅವರು ವಾದಿಸಿದ್ದಾರೆ.

ದಿ ಪ್ರಿಂಟ್ ಪ್ರಕಾರ, ಫಿಲಿಪ್ಸ್ ಅವರ ಪರ್ಯಾಯ ಔಷಧಿಗಳ ವಿರುದ್ಧ ಹೋರಾಟವು 2017 ರಲ್ಲಿ ಪ್ರಾರಂಭವಾಯಿತು, ಅವರು ಆಯುರ್ವೇದ ಮಾತ್ರೆಗಳ ಬಳಕೆಯಿಂದ ಯಕೃತ್ತಿನ ವೈಫಲ್ಯದಿಂದ ಬಳಲುತ್ತಿರುವ ರೋಗಿ ಬಗ್ಗೆ ಹೇಳಿದ್ದರು. ತನ್ನ ಟ್ವಿಟರ್ ಖಾತೆಯಲ್ಲಿ ಅವರು ತಪ್ಪುದಾರಿಗೆಳೆಯುವ ಜಾಹೀರಾತುಗಳನ್ನು ಟೀಕಿಸುತ್ತಾರೆ ಮತ್ತು ಆಯುರ್ವೇದ ಮತ್ತು ಹೋಮಿಯೋಪತಿಯ ಪರಿಣಾಮಕಾರಿತ್ವವನ್ನು ಪ್ರಶ್ನಿಸುತ್ತಾರೆ.

ಇದನ್ನೂ ಓದಿ: ರಾಜಸ್ಥಾನದ ಭಿಲ್ವಾರ ದೇವಸ್ಥಾನದ ಕಾಣಿಕೆ ಡಬ್ಬಿಗೆ ಮೋದಿ ಹಾಕಿದ ಹಣವೆಷ್ಟು? ಇಲ್ಲಿದೆ ನಿಜ ಸಂಗತಿ

ಮಲಯಾಳಂ ಯೂಟ್ಯೂಬ್ ಚಾನೆಲ್‌ಗೆ ನೀಡಿದ ಸಂದರ್ಶನದಲ್ಲಿ ಆಯುರ್ವೇದದಲ್ಲಿ ವ್ಯಾಪಕವಾಗಿ ಬಳಸಲಾಗುವ ಗಿಡಮೂಲಿಕೆಯಾದ ಗಿಲೋಯ್ (ಟಿನೋಸ್ಪೊರಾ ಕಾರ್ಡಿಫೋಲಿಯಾ) ಕುರಿತು ಮಾಡಿದ ಟೀಕೆಗಳಿಗಾಗಿ ಆಯುಷ್ ಸಚಿವಾಲಯವು ವೈದ್ಯರಿಗೆ ಮಾನನಷ್ಟ ಬೆದರಿಕೆ ಹಾಕಿದೆ. ಫೆಬ್ರವರಿ 2022 ರಲ್ಲಿ ಅವರಿಗೆ ಕೇರಳ ಸ್ಟೇಟ್ ಮೆಡಿಕಲ್ ಕೌನ್ಸಿಲ್ ಫಾರ್ ಇಂಡಿಯನ್ ಸಿಸ್ಟಮ್ಸ್ ಆಫ್ ಮೆಡಿಸಿನ್‌ನಿಂದ ನೋಟಿಸ್ ನೀಡಲಾಯಿತು. ಅಕ್ಟೋಬರ್‌ನಲ್ಲಿ ಎಲ್ಲಾ ಆರೋಪಗಳಿಂದ ತೆರವುಗೊಳಿಸಲಾಯಿತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಭಟ್ಕಳದಲ್ಲಿ ಮತ್ತೆ ಕೊಮು ಸಂಘರ್ಷ: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ಪರಿಷತ್ 5 ಸ್ಥಾನ ಗೆಲ್ಲಲು ಬಿಗ್ ಪ್ಲಾನ್, ಡಿಕೆಶಿ ತಂತ್ರಗಾರಿಕೆ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ವಿಧಾನಪರಿಷತ್ ಎಲೆಕ್ಷನ್: ಎಚ್​​​ಡಿಕೆ, ಡಿಕೆ ನಂಬರ್ ಗೇಮ್ ಹೇಗಿದೆ?
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಈ ವರ್ಷದ ಬಿಗ್ ಬಾಸ್ ಟಿಆರ್​ಪಿ ಬಗ್ಗೆ ನನಗೆ ಭಯ ಶುರು ಆಗಿದೆ: ತುಕಾಲಿ ಸಂತು
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಕಾಶ್ಮೀರದಲ್ಲಿ ಭೀಕರ ಮೇಘಸ್ಫೋಟ; ಹತ್ತಾರು ಮನೆಗಳಿಗೆ ಹಾನಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!