ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ವೈದ್ಯ ಸಾವು

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ರೋಗಿಗಳಂತೆ ಬಂದಿದ್ದ ಇಬ್ಬರು ಕಾಲಿಗಾಗಿರುವ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಬಂದು ವೈದ್ಯ ಜಾವೇದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ವೈದ್ಯ ಸಾವು
ವೈದ್ಯ
Follow us
|

Updated on: Oct 03, 2024 | 9:04 AM

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ರೋಗಿಗಳಂತೆ ಬಂದಿದ್ದ ಇಬ್ಬರು ಕಾಲಿಗಾಗಿರುವ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಬಂದು ವೈದ್ಯ ಜಾವೇದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆ ಕುರಿತು ಆಸ್ಪತ್ರೆ ಸಿಬ್ಬಂದಿ ಮಾತನಾಡಿ, ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದರು, ಚಿಕಿತ್ಸೆ ಪಡೆದ ಬಳಿಕ ವೈದ್ಯರನ್ನು ಭೇಟಿಯಾಗಲೇಬೇಕು ಎಂದು ಮನವಿ ಮಾಡಿದರು, ವೈದ್ಯರ ಕ್ಯಾಬಿನ್​ಗೆ ಪ್ರವೇಶಿಸಿದಾಗ ವೈದ್ಯರನ್ನು ಹತ್ಯೆ ಮಾಡಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ವೈದ್ಯರು ತಮ್ಮ ಸುರಕ್ಷತೆ ಮತ್ತು ಭದ್ರತೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಘಟನೆ ವರದಿಯಾಗಿದೆ.

ಮತ್ತಷ್ಟು ಓದಿ: ಮುಂಬೈ: ಆಸ್ಪತ್ರೆಯಲ್ಲಿ ಕುಡುಕ ರೋಗಿಯಿಂದ ವೈದ್ಯೆ ಮೇಲೆ ಹಲ್ಲೆ

ಮತ್ತೊಂದು ಘಟನೆ

ಪಾದರಕ್ಷೆ ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಹಲ್ಲೆ: ಮೂವರ ಬಂಧನ ಗುಜರಾತಿನ ಭಾವನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ತುರ್ತು ಚಿಕಿತ್ಸಾ ಕೊಠಡಿಗೆ ಪ್ರವೇಶಿಸುವ ಮುನ್ನ ಪಾದರಕ್ಷೆಗಳನ್ನು ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಹೋರ್‌ ನಗರದ ಶ್ರೇಯಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವೈದ್ಯರ ಮೇಲೆ ಹಲ್ಲೆ ನಡೆಸಿದ ಮೂವರನ್ನು  ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಸೆಪ್ಟೆಂಬರ್‌ 12ರಂದು ತಲೆಗೆ ಪೆಟ್ಟಾಗಿದ್ದ ಮಹಿಳೆಯನ್ನು ಆರೋಪಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯನ್ನು ಪ್ರವೇಶಿಸುವಾಗ ಪಾದರಕ್ಷೆಗಳನ್ನು ತೆಗೆಯುವಂತೆ ವೈದ್ಯರು ಹೇಳಿದ್ದಾರೆ. ಇದನ್ನು ವಿರೋಧಿಸಿದ ಆರೋಪಿಗಳು ವೈದ್ಯರು ಮತ್ತು ನರ್ಸಿಂಗ್‌ ಸಿಬ್ಬಂದಿಯನ್ನು ನಿಂದಿಸಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮಾಂಗಲ್ಯದೊಂದಿಗೆ ಧರಿಸುವ ಕರಿಮಣಿಯ ಮಹತ್ವವೇನು? ತಿಳಿಯಿರಿ
ಮಾಂಗಲ್ಯದೊಂದಿಗೆ ಧರಿಸುವ ಕರಿಮಣಿಯ ಮಹತ್ವವೇನು? ತಿಳಿಯಿರಿ
ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
ನವರಾತ್ರಿಯ ಮೊದಲ ದಿನವಾದ ಇಂದು ನಿಮ್ಮ ರಾಶಿ ಭವಿಷ್ಯ ಹೇಗಿದೆ? ತಿಳಿಯಿರಿ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
Bengaluru Rains: ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆ; ರಸ್ತೆಗಳು ಜಲಾವೃತ
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ವರ್ತೂರು-ತನಿಷಾ ಕುಪ್ಪಂಡ ಮದುವೆ ಆಗ್ತಾರಾ? ನೇರವಾಗಿ ಉತ್ತರಿಸಿದ ಸಂತೋಷ್
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಧ್ವಜ ಹಿಡಿದ ಕೈಯಲ್ಲೇ ಸಿದ್ದರಾಮಯ್ಯನ ಶೂ ಬಿಚ್ಚಿದ ಕಾಂಗ್ರೆಸ್ ಕಾರ್ಯಕರ್ತ
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
ಮಾರ್ಟಿನ್ ರಿಲೀಸ್ ಹೊಸ್ತಿಲಲ್ಲಿ ಚಿತ್ರತಂಡದ ಸುದ್ದಿಗೋಷ್ಠಿ; ಲೈವ್ ನೋಡಿ..
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
‘ನಾನೇ ಬಿಗ್ ಬಾಸ್’: ಶಾಕಿಂಗ್ ಹೇಳಿಕೆ ನೀಡಿ ಹೊರಗೆ ಬರಲು ಸಿದ್ಧವಾದ ಜಗದೀಶ್​
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಧಾರವಾಡ: ಧಾರ್ಮಿಕ ಧ್ವಜದ ಕೆಳಗೆ ರಾಷ್ಟ್ರಧ್ವಜ ಅಳವಡಿಕೆ ಮಾಡಿ ಅಪಮಾನ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!