AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ವೈದ್ಯ ಸಾವು

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ರೋಗಿಗಳಂತೆ ಬಂದಿದ್ದ ಇಬ್ಬರು ಕಾಲಿಗಾಗಿರುವ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಬಂದು ವೈದ್ಯ ಜಾವೇದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ವೈದ್ಯ ಸಾವು
ವೈದ್ಯ
ನಯನಾ ರಾಜೀವ್
|

Updated on: Oct 03, 2024 | 9:04 AM

Share

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ರೋಗಿಗಳಂತೆ ಬಂದಿದ್ದ ಇಬ್ಬರು ಕಾಲಿಗಾಗಿರುವ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಬಂದು ವೈದ್ಯ ಜಾವೇದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆ ಕುರಿತು ಆಸ್ಪತ್ರೆ ಸಿಬ್ಬಂದಿ ಮಾತನಾಡಿ, ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದರು, ಚಿಕಿತ್ಸೆ ಪಡೆದ ಬಳಿಕ ವೈದ್ಯರನ್ನು ಭೇಟಿಯಾಗಲೇಬೇಕು ಎಂದು ಮನವಿ ಮಾಡಿದರು, ವೈದ್ಯರ ಕ್ಯಾಬಿನ್​ಗೆ ಪ್ರವೇಶಿಸಿದಾಗ ವೈದ್ಯರನ್ನು ಹತ್ಯೆ ಮಾಡಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ವೈದ್ಯರು ತಮ್ಮ ಸುರಕ್ಷತೆ ಮತ್ತು ಭದ್ರತೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಘಟನೆ ವರದಿಯಾಗಿದೆ.

ಮತ್ತಷ್ಟು ಓದಿ: ಮುಂಬೈ: ಆಸ್ಪತ್ರೆಯಲ್ಲಿ ಕುಡುಕ ರೋಗಿಯಿಂದ ವೈದ್ಯೆ ಮೇಲೆ ಹಲ್ಲೆ

ಮತ್ತೊಂದು ಘಟನೆ

ಪಾದರಕ್ಷೆ ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಹಲ್ಲೆ: ಮೂವರ ಬಂಧನ ಗುಜರಾತಿನ ಭಾವನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ತುರ್ತು ಚಿಕಿತ್ಸಾ ಕೊಠಡಿಗೆ ಪ್ರವೇಶಿಸುವ ಮುನ್ನ ಪಾದರಕ್ಷೆಗಳನ್ನು ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಹೋರ್‌ ನಗರದ ಶ್ರೇಯಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವೈದ್ಯರ ಮೇಲೆ ಹಲ್ಲೆ ನಡೆಸಿದ ಮೂವರನ್ನು  ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಸೆಪ್ಟೆಂಬರ್‌ 12ರಂದು ತಲೆಗೆ ಪೆಟ್ಟಾಗಿದ್ದ ಮಹಿಳೆಯನ್ನು ಆರೋಪಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯನ್ನು ಪ್ರವೇಶಿಸುವಾಗ ಪಾದರಕ್ಷೆಗಳನ್ನು ತೆಗೆಯುವಂತೆ ವೈದ್ಯರು ಹೇಳಿದ್ದಾರೆ. ಇದನ್ನು ವಿರೋಧಿಸಿದ ಆರೋಪಿಗಳು ವೈದ್ಯರು ಮತ್ತು ನರ್ಸಿಂಗ್‌ ಸಿಬ್ಬಂದಿಯನ್ನು ನಿಂದಿಸಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?