AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ವೈದ್ಯ ಸಾವು

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ರೋಗಿಗಳಂತೆ ಬಂದಿದ್ದ ಇಬ್ಬರು ಕಾಲಿಗಾಗಿರುವ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಬಂದು ವೈದ್ಯ ಜಾವೇದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ದೆಹಲಿಯ ಆಸ್ಪತ್ರೆಯಲ್ಲಿ ಅಪರಿಚಿತರಿಂದ ಗುಂಡಿನ ದಾಳಿ, ವೈದ್ಯ ಸಾವು
ವೈದ್ಯ
ನಯನಾ ರಾಜೀವ್
|

Updated on: Oct 03, 2024 | 9:04 AM

Share

ದೆಹಲಿಯ ನಿಮಾ ಆಸ್ಪತ್ರೆಯಲ್ಲಿ ಅಪರಿಚಿತರು ನಡೆಸಿದ ಗುಂಡಿನ ದಾಳಿಯಲ್ಲಿ ವೈದ್ಯರೊಬ್ಬರು ಸಾವನ್ನಪ್ಪಿದ್ದಾರೆ. ರೋಗಿಗಳಂತೆ ಬಂದಿದ್ದ ಇಬ್ಬರು ಕಾಲಿಗಾಗಿರುವ ಗಾಯಕ್ಕೆ ಚಿಕಿತ್ಸೆ ಪಡೆಯಲೆಂದು ಬಂದು ವೈದ್ಯ ಜಾವೇದ್ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.

ಘಟನೆ ಕುರಿತು ಆಸ್ಪತ್ರೆ ಸಿಬ್ಬಂದಿ ಮಾತನಾಡಿ, ಇಬ್ಬರು ಯುವಕರು ಗಾಯಗೊಂಡು ಆಸ್ಪತ್ರೆಗೆ ಬಂದಿದ್ದರು, ಚಿಕಿತ್ಸೆ ಪಡೆದ ಬಳಿಕ ವೈದ್ಯರನ್ನು ಭೇಟಿಯಾಗಲೇಬೇಕು ಎಂದು ಮನವಿ ಮಾಡಿದರು, ವೈದ್ಯರ ಕ್ಯಾಬಿನ್​ಗೆ ಪ್ರವೇಶಿಸಿದಾಗ ವೈದ್ಯರನ್ನು ಹತ್ಯೆ ಮಾಡಿದ್ದಾರೆ.

ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಟ್ರೈನಿ ವೈದ್ಯೆಯ ಅತ್ಯಾಚಾರ ಮತ್ತು ಹತ್ಯೆಯ ನಂತರ ವೈದ್ಯರು ತಮ್ಮ ಸುರಕ್ಷತೆ ಮತ್ತು ಭದ್ರತೆಗೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ ಈ ಘಟನೆ ವರದಿಯಾಗಿದೆ.

ಮತ್ತಷ್ಟು ಓದಿ: ಮುಂಬೈ: ಆಸ್ಪತ್ರೆಯಲ್ಲಿ ಕುಡುಕ ರೋಗಿಯಿಂದ ವೈದ್ಯೆ ಮೇಲೆ ಹಲ್ಲೆ

ಮತ್ತೊಂದು ಘಟನೆ

ಪಾದರಕ್ಷೆ ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಹಲ್ಲೆ: ಮೂವರ ಬಂಧನ ಗುಜರಾತಿನ ಭಾವನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ತುರ್ತು ಚಿಕಿತ್ಸಾ ಕೊಠಡಿಗೆ ಪ್ರವೇಶಿಸುವ ಮುನ್ನ ಪಾದರಕ್ಷೆಗಳನ್ನು ತೆಗೆಯುವಂತೆ ಹೇಳಿದ ವೈದ್ಯರ ಮೇಲೆ ಮೂವರು ವ್ಯಕ್ತಿಗಳು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಹೋರ್‌ ನಗರದ ಶ್ರೇಯಾ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ವೈದ್ಯರ ಮೇಲೆ ಹಲ್ಲೆ ನಡೆಸಿದ ಮೂವರನ್ನು  ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ.

‘ಸೆಪ್ಟೆಂಬರ್‌ 12ರಂದು ತಲೆಗೆ ಪೆಟ್ಟಾಗಿದ್ದ ಮಹಿಳೆಯನ್ನು ಆರೋಪಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆತಂದಿದ್ದಾರೆ. ತುರ್ತು ಚಿಕಿತ್ಸಾ ಕೊಠಡಿಯನ್ನು ಪ್ರವೇಶಿಸುವಾಗ ಪಾದರಕ್ಷೆಗಳನ್ನು ತೆಗೆಯುವಂತೆ ವೈದ್ಯರು ಹೇಳಿದ್ದಾರೆ. ಇದನ್ನು ವಿರೋಧಿಸಿದ ಆರೋಪಿಗಳು ವೈದ್ಯರು ಮತ್ತು ನರ್ಸಿಂಗ್‌ ಸಿಬ್ಬಂದಿಯನ್ನು ನಿಂದಿಸಿದ್ದಾರೆ’ ಎಂದು ಎಫ್‌ಐಆರ್‌ನಲ್ಲಿ ತಿಳಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ