AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳ: ಗೂಗಲ್​ ಮ್ಯಾಪ್ ಆನ್​ ಇತ್ತು, ಎಡ ತಿರುವು ಬಿಟ್ಟು ನೇರವಾಗಿ ಹೋದ ಕಾರು ನಿಯಂತ್ರಣ ತಪ್ಪಿ ನದಿಗೆ ಬಿದ್ದು ಇಬ್ಬರು ವೈದ್ಯರ ಸಾವು

ಕೇರಳದ ಕೊಚ್ಚಿಯಲ್ಲಿ ಕಾರೊಂದು ಪೆರಿಯಾರ್ ನದಿಗೆ ಬಿದ್ದಿದೆ, ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವೈದ್ಯರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಇನ್ನೂ ಮೂವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಹೆಸರು ಅದ್ವೈತ್ (29) ಮತ್ತು ಅಜ್ಮಲ್ (29). ಖಾಸಗಿ ಆಸ್ಪತ್ರೆಯ ವೈದ್ಯರಾಗಿದ್ದರು. ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಕೇರಳ: ಗೂಗಲ್​ ಮ್ಯಾಪ್ ಆನ್​ ಇತ್ತು, ಎಡ ತಿರುವು ಬಿಟ್ಟು ನೇರವಾಗಿ ಹೋದ ಕಾರು ನಿಯಂತ್ರಣ ತಪ್ಪಿ ನದಿಗೆ ಬಿದ್ದು ಇಬ್ಬರು ವೈದ್ಯರ ಸಾವು
ಕೇರಳ ವೈದ್ಯರ ಕಾರುImage Credit source: Etv Bharat
ನಯನಾ ರಾಜೀವ್
|

Updated on: Oct 02, 2023 | 10:23 AM

Share

ಕೇರಳದ ಕೊಚ್ಚಿಯಲ್ಲಿ ಕಾರೊಂದು ಪೆರಿಯಾರ್ ನದಿಗೆ ಬಿದ್ದಿದೆ, ಈ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ವೈದ್ಯರು ಸಾವನ್ನಪ್ಪಿದ್ದಾರೆ. ಇದೇ ವೇಳೆ ಇನ್ನೂ ಮೂವರು ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರ ಹೆಸರು ಅದ್ವೈತ್ (29) ಮತ್ತು ಅಜ್ಮಲ್ (29). ಖಾಸಗಿ ಆಸ್ಪತ್ರೆಯ ವೈದ್ಯರಾಗಿದ್ದರು. ಡಾ.ಅದ್ವೈತ್ ಕಾರು ಚಾಲನೆ ಮಾಡುತ್ತಿದ್ದು, ಮೊಬೈಲ್ ನ ಗೂಗಲ್ ಮ್ಯಾಪ್ ಆನ್ ಮಾಡಿದ್ದರು ಎಂದು ಹೇಳಲಾಗುತ್ತಿದೆ.

ಶನಿವಾರ ತಡರಾತ್ರಿ ಈ ಘಟನೆ ನಡೆದಿದೆ. ಅದೇ ಸಮಯದಲ್ಲಿ, ಗೋತುರುತ್‌ನಲ್ಲಿ ಭಾರೀ ಮಳೆಯಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಗೋಚರತೆ ಕೂಡ ತುಂಬಾ ಕಡಿಮೆ ಇತ್ತು. ಕಾರು ಚಲಾಯಿಸುತ್ತಿದ್ದ ಯುವಕ ಗೂಗಲ್ ಮ್ಯಾಪ್ ತೋರಿಸಿದ ಮಾರ್ಗದಲ್ಲಿ ಹೋಗುತ್ತಿದ್ದ. ಎಡ ತಿರುವಿನಲ್ಲಿ ಕಾರನ್ನು ತಿರುಗಿಸಬೇಕಾಗಿದ್ದರೂ ಆಕಸ್ಮಿಕವಾಗಿ ಮುಂದೆ ಹೋಗಿದ್ದರಿಂದ ಕಾರು ನದಿಗೆ ಬಿದ್ದಿದೆ.

ಅಪಘಾತವನ್ನು ಕಂಡ ಸ್ಥಳೀಯರು ತಕ್ಷಣ ಸ್ಥಳದಲ್ಲಿ ಜಮಾಯಿಸಿದರು. ಅಲ್ಲಿದ್ದ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ಮಾಹಿತಿ ನೀಡಿದ್ದಾರೆ. ಟೈಮ್ಸ್ ಆಫ್ ಇಂಡಿಯಾದ ಪ್ರಕಾರ, ಶನಿವಾರ ಡಾ.ಅದ್ವೈತ್ ಅವರ ಜನ್ಮದಿನವಾಗಿತ್ತು. ಕಾರಿನಲ್ಲಿ ಅದ್ವೈತ್ ಜೊತೆಗೆ ನಾಲ್ವರು ಇದ್ದರು. ಐವರೂ ಕೊಚ್ಚಿಯಿಂದ ಕೊಡಂಗಲ್ಲೂರಿಗೆ ಹಿಂತಿರುಗುತ್ತಿದ್ದರು. ಅದ್ವೈತ್ ಹುಟ್ಟುಹಬ್ಬದ ನಿಮಿತ್ತ ಈ ಮಂದಿ ಶಾಪಿಂಗ್‌ಗೆ ತೆರಳಿದ್ದರು ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ಶಿವಮೊಗ್ಗ: 2 ಬೈಕ್ ಡಿಕ್ಕಿಯಾಗಿ ರಸ್ತೆ ಮೇಲೆ ಬಿದ್ದಿದ್ದ ಸವಾರರ ಮೇಲೆ ಹರಿದ ಲಾರಿ, ಸ್ಥಳದಲ್ಲೇ ಮೂವರು ಸಾವು

ಇದೇ ವೇಳೆ ಅಪಘಾತದಿಂದ ಬದುಕುಳಿದಿರುವ ಡಾ.ಗಾಜಿಕ್ ತಬ್ಸಿರ್, ಜಿಪಿಎಸ್ ನೆರವಿನಿಂದ ಮುಂದೆ ಹೋಗುತ್ತಿದ್ದೆವು ಎಂದು ತಿಳಿಸಿದರು. ನಾನು ಕಾರನ್ನು ಓಡಿಸುತ್ತಿರಲಿಲ್ಲ. ಗೂಗಲ್ ಮ್ಯಾಪ್ ನೀಡಿದ ತಪ್ಪು ನಿರ್ದೇಶನದಿಂದ ಅಥವಾ ವಾಹನದ ನಿಯಂತ್ರಣ ತಪ್ಪಿ ಅಪಘಾತ ಸಂಭವಿಸಿದೆಯೇ ಎಂಬ ಬಗ್ಗೆ ನಾವು ಯಾವುದೇ ನಿಖರವಾದ ಉತ್ತರವನ್ನು ನೀಡಲು ಸಾಧ್ಯವಿಲ್ಲ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಪೊಲೀಸರು ಅಪಘಾತದ ತನಿಖೆಯಲ್ಲಿ ನಿರತರಾಗಿದ್ದಾರೆ. ಇಬ್ಬರ ಮೃತದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತ ದೇಹಗಳ ಮರಣೋತ್ತರ ಪರೀಕ್ಷೆ ನಡೆಯಲಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?