AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಮಿದುಳಲ್ಲಿದ್ದ ಬ್ಲ್ಯಾಕ್ ಫಂಗಸ್​ ಹೊರತೆಗೆದ ವೈದ್ಯರು; ಅದರ ಅಳತೆ ನೋಡಿ ಕಂಗಾಲು

ರೋಗಿಯ ಹೆಸರು ಅನಿಲ್​ ಕುಮಾರ್​. ಜಮುಯಿಯ ನಿವಾಸಿಯಾಗಿದ್ದಾರೆ. ಇವರಿಗೆ ತಲೆ ಸುತ್ತುತ್ತಿತ್ತು.. ಹಾಗೂ ಪದೇಪದೆ ಎಚ್ಚರತಪ್ಪಿ ಬೀಳುತ್ತಿದ್ದರು. ದಿನದಿನಕ್ಕೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿತ್ತು.

ರೋಗಿಯ ಮಿದುಳಲ್ಲಿದ್ದ ಬ್ಲ್ಯಾಕ್ ಫಂಗಸ್​ ಹೊರತೆಗೆದ ವೈದ್ಯರು; ಅದರ ಅಳತೆ ನೋಡಿ ಕಂಗಾಲು
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 13, 2021 | 9:17 AM

ದೆಹಲಿ: ದೇಶದಲ್ಲಿ ಕೊವಿಡ್ 2ನೇ ಅಲೆಯ ಅಬ್ಬರವಿನ್ನೂ ಕಡಿಮೆಯಾಗಿಲ್ಲ. ಆದರೆ ಈ ಬಾರಿ ಕೊರೊನಾದೊಟ್ಟಿಗೆ ಬ್ಲ್ಯಾಕ್​ಫಂಗಸ್ (ಕಪ್ಪುಶಿಲೀಂದ್ರ) ಕಾಟವೂ ಶುರುವಾಗಿದೆ. ದೇಶದ ಎಲ್ಲ ಭಾಗಗಳಲ್ಲೂ ಕೊರೊನಾದಿಂದ ಗುಣಮುಖರಾದ ಕೆಲವರು ಈ ಬ್ಲ್ಯಾಕ್​ ಫಂಗಸ್​​ಗೆ ಒಳಗಾಗುತ್ತಿದ್ದಾರೆ. ಅದರಲ್ಲೀಗ ಪಾಟ್ನಾದ ಇಂದಿರಾ ಗಾಂಧಿ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸ್​ (ಐಜಿಐಎಂಎಸ್​) ನ ವೈದ್ಯರು 60 ವರ್ಷದ ವ್ಯಕ್ತಿಯ ಮಿದುಳಿನಿಂದ ಕ್ರಿಕೆಟ್ ಚೆಂಡಿನ ಅಳತೆಯ ಬ್ಲ್ಯಾಕ್​ ಫಂಗಸ್​​​ ನ್ನು ಹೊರತೆಗೆದಿದ್ದಾರೆ.

ಕಪ್ಪುಶಿಲೀಂದ್ರದ  ಅಳತೆಯನ್ನು ನೋಡಿ ವೈದ್ಯರೇ ಶಾಕ್​ ಆಗಿದ್ದಾರೆ. ಸುಮಾರು 3 ತಾಸುಗಳ ಸರ್ಜರಿಯ ಬಳಿಕ ಈ ಗಡ್ಡೆ ಹೊರತೆಗೆಯಲಾಗಿದೆ. ಸದ್ಯ ರೋಗಿಯ ಸ್ಥಿತಿ ಸ್ಥಿರವಾಗಿದೆ. ಬಿಹಾರದ ಈ ಆಸ್ಪತ್ರೆಯಲ್ಲಿ ಹಲವರಿಗೆ ಬ್ಲ್ಯಾಕ್​ಫಂಗಸ್​​​ಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಆದರೆ ಇದು ಮಾತ್ರ ತುಂಬ ಸವಾಲಿನಿಂದ ಕೂಡಿತ್ತು. ಮಿದುಳಿಗೆ ಹರಡಿದ್ದರಿಂದ ಸರ್ಜರಿ ಸಮಯದಲ್ಲಿ ರೋಗಿಯು ಕಣ್ಣು ಕಳೆದುಕೊಳ್ಳುವಂತೆ ನೋಡಿಕೊಳ್ಳುವುದು ಸಾಹಸವಾಗಿತ್ತು ಎಂದು ಇಲ್ಲಿನ ವೈದ್ಯರು ಹೇಳಿದ್ದಾರೆ.

ಈ ರೋಗಿಯ ಹೆಸರು ಅನಿಲ್​ ಕುಮಾರ್​. ಜಮುಯಿಯ ನಿವಾಸಿಯಾಗಿದ್ದಾರೆ. ಇವರಿಗೆ ತಲೆ ಸುತ್ತುತ್ತಿತ್ತು.. ಹಾಗೂ ಪದೇಪದೆ ಎಚ್ಚರತಪ್ಪಿ ಬೀಳುತ್ತಿದ್ದರು. ದಿನದಿನಕ್ಕೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿತ್ತು. ಮಿದುಳಿನಲ್ಲಿದ್ದ ಬ್ಲ್ಯಾಕ್​ ಫಂಗಸ್​ ಗಡ್ಡೆಯನ್ನು ಡಾ. ಬ್ರಜೇಶ್​ ಕುಮಾರ್​ ಮತ್ತು ಅವರ ತಂಡ ಯಶಸ್ವಿಯಾಗಿ ತೆಗೆದುಹಾಕಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಮನೀಶ್​ ಮಂಡಲ್​ ತಿಳಿಸಿದ್ದಾರೆ.

ಇದನ್ನೂ ಓದಿ: karnataka unlock 60 ದಿನಗಳ ಲಾಕ್​ಡೌನ್ ಗ್ರಹಣಕ್ಕೆ ನಾಳೆಯಿಂದ ಅರ್ಧ ಮುಕ್ತಿ.. ಆದರೆ ಷರತ್ತುಗಳು ಅನ್ವಯ

Doctors Remove Cricket Ball Sized Black Fungus From Brain of 60 Year Old Man In Bihar

ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಅರವಿಂದ ಲಿಂಬಾವಳಿ ಮತ್ತು ಜಿಎಂ ಸಿದ್ದೇಶ್ವರ ಸಭೆಗೆ ಗೈರು
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಮುನಿರತ್ನ ಮೇಲಿರೋದು ಆರೋಪಗಳಲ್ಲ, ಎಫ್​ಐಅರ್ ಆಗಿದೆ: ಖರ್ಗೆ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ಪರೀಕ್ಷೆ ಬರೆಯುವ ಆಸೆಗೆ ಪೋಷಕ ಮತ್ತು ಪತಿ ಮನೆಯವರಿಂದ ಆಕ್ಷೇಪಣೆ ಇಲ್ಲ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ತಾಳಿ ಕಟ್ಟಿದ ಮರುಕ್ಷಣವೇ ಪರೀಕ್ಷೆಗೆ ಹಾಜರಾದ ನವವಧು: ವಿಡಿಯೋ ನೋಡಿ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಒಡೆತನದ ಶಿಕ್ಷಣ ಸಂಸ್ಥೆ ಸಮೂಹದ ಮೇಲೆ ಈಡಿ ದಾಳಿ ನಡೆದಿದೆ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪರಮೇಶ್ವರ್ ಸಂಸ್ಥೆಗಳ ಮೇಲೆ ಇಡಿ ದಾಳಿ: ಡಿಸಿಎಂ ಡಿಕೆಶಿ ಹೇಳಿದ್ದೇನು ನೋಡಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
ಪುನರಾಭಿವೃದ್ಧಿಗೊಂಡ 103 ರೈಲ್ವೆ ನಿಲ್ದಾಣಗಳ ಉದ್ಘಾಟಿಸಿದ ಪ್ರಧಾನಿ ಮೋದಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
Video: ಪಾಕಿಸ್ತಾನದ ಗೃಹ ಸಚಿವ ಹಸನ್ ಮನೆಗೆ ಬೆಂಕಿ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಪೊಲೀಸ್ ಉನ್ನತ ಹುದ್ದೆಗೆ ನೇಮಕಗೊಂಡವರು ಹೆಚ್​ಎಂ ಭೇಟಿಯಾಗೋದು ಶಿಷ್ಟಾಚಾರ
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್
ಒಳ್ಳೆಯ ಕೆಲಸ ಮಾಡಿದವರನ್ನು ಅಭಿನಂದಿಸಲೇಬೇಕು: ಬಸನಗೌಡ ಯತ್ನಾಳ್