AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಮಿದುಳಲ್ಲಿದ್ದ ಬ್ಲ್ಯಾಕ್ ಫಂಗಸ್​ ಹೊರತೆಗೆದ ವೈದ್ಯರು; ಅದರ ಅಳತೆ ನೋಡಿ ಕಂಗಾಲು

ರೋಗಿಯ ಹೆಸರು ಅನಿಲ್​ ಕುಮಾರ್​. ಜಮುಯಿಯ ನಿವಾಸಿಯಾಗಿದ್ದಾರೆ. ಇವರಿಗೆ ತಲೆ ಸುತ್ತುತ್ತಿತ್ತು.. ಹಾಗೂ ಪದೇಪದೆ ಎಚ್ಚರತಪ್ಪಿ ಬೀಳುತ್ತಿದ್ದರು. ದಿನದಿನಕ್ಕೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿತ್ತು.

ರೋಗಿಯ ಮಿದುಳಲ್ಲಿದ್ದ ಬ್ಲ್ಯಾಕ್ ಫಂಗಸ್​ ಹೊರತೆಗೆದ ವೈದ್ಯರು; ಅದರ ಅಳತೆ ನೋಡಿ ಕಂಗಾಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 13, 2021 | 9:17 AM

Share

ದೆಹಲಿ: ದೇಶದಲ್ಲಿ ಕೊವಿಡ್ 2ನೇ ಅಲೆಯ ಅಬ್ಬರವಿನ್ನೂ ಕಡಿಮೆಯಾಗಿಲ್ಲ. ಆದರೆ ಈ ಬಾರಿ ಕೊರೊನಾದೊಟ್ಟಿಗೆ ಬ್ಲ್ಯಾಕ್​ಫಂಗಸ್ (ಕಪ್ಪುಶಿಲೀಂದ್ರ) ಕಾಟವೂ ಶುರುವಾಗಿದೆ. ದೇಶದ ಎಲ್ಲ ಭಾಗಗಳಲ್ಲೂ ಕೊರೊನಾದಿಂದ ಗುಣಮುಖರಾದ ಕೆಲವರು ಈ ಬ್ಲ್ಯಾಕ್​ ಫಂಗಸ್​​ಗೆ ಒಳಗಾಗುತ್ತಿದ್ದಾರೆ. ಅದರಲ್ಲೀಗ ಪಾಟ್ನಾದ ಇಂದಿರಾ ಗಾಂಧಿ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸ್​ (ಐಜಿಐಎಂಎಸ್​) ನ ವೈದ್ಯರು 60 ವರ್ಷದ ವ್ಯಕ್ತಿಯ ಮಿದುಳಿನಿಂದ ಕ್ರಿಕೆಟ್ ಚೆಂಡಿನ ಅಳತೆಯ ಬ್ಲ್ಯಾಕ್​ ಫಂಗಸ್​​​ ನ್ನು ಹೊರತೆಗೆದಿದ್ದಾರೆ.

ಕಪ್ಪುಶಿಲೀಂದ್ರದ  ಅಳತೆಯನ್ನು ನೋಡಿ ವೈದ್ಯರೇ ಶಾಕ್​ ಆಗಿದ್ದಾರೆ. ಸುಮಾರು 3 ತಾಸುಗಳ ಸರ್ಜರಿಯ ಬಳಿಕ ಈ ಗಡ್ಡೆ ಹೊರತೆಗೆಯಲಾಗಿದೆ. ಸದ್ಯ ರೋಗಿಯ ಸ್ಥಿತಿ ಸ್ಥಿರವಾಗಿದೆ. ಬಿಹಾರದ ಈ ಆಸ್ಪತ್ರೆಯಲ್ಲಿ ಹಲವರಿಗೆ ಬ್ಲ್ಯಾಕ್​ಫಂಗಸ್​​​ಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಆದರೆ ಇದು ಮಾತ್ರ ತುಂಬ ಸವಾಲಿನಿಂದ ಕೂಡಿತ್ತು. ಮಿದುಳಿಗೆ ಹರಡಿದ್ದರಿಂದ ಸರ್ಜರಿ ಸಮಯದಲ್ಲಿ ರೋಗಿಯು ಕಣ್ಣು ಕಳೆದುಕೊಳ್ಳುವಂತೆ ನೋಡಿಕೊಳ್ಳುವುದು ಸಾಹಸವಾಗಿತ್ತು ಎಂದು ಇಲ್ಲಿನ ವೈದ್ಯರು ಹೇಳಿದ್ದಾರೆ.

ಈ ರೋಗಿಯ ಹೆಸರು ಅನಿಲ್​ ಕುಮಾರ್​. ಜಮುಯಿಯ ನಿವಾಸಿಯಾಗಿದ್ದಾರೆ. ಇವರಿಗೆ ತಲೆ ಸುತ್ತುತ್ತಿತ್ತು.. ಹಾಗೂ ಪದೇಪದೆ ಎಚ್ಚರತಪ್ಪಿ ಬೀಳುತ್ತಿದ್ದರು. ದಿನದಿನಕ್ಕೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿತ್ತು. ಮಿದುಳಿನಲ್ಲಿದ್ದ ಬ್ಲ್ಯಾಕ್​ ಫಂಗಸ್​ ಗಡ್ಡೆಯನ್ನು ಡಾ. ಬ್ರಜೇಶ್​ ಕುಮಾರ್​ ಮತ್ತು ಅವರ ತಂಡ ಯಶಸ್ವಿಯಾಗಿ ತೆಗೆದುಹಾಕಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಮನೀಶ್​ ಮಂಡಲ್​ ತಿಳಿಸಿದ್ದಾರೆ.

ಇದನ್ನೂ ಓದಿ: karnataka unlock 60 ದಿನಗಳ ಲಾಕ್​ಡೌನ್ ಗ್ರಹಣಕ್ಕೆ ನಾಳೆಯಿಂದ ಅರ್ಧ ಮುಕ್ತಿ.. ಆದರೆ ಷರತ್ತುಗಳು ಅನ್ವಯ

Doctors Remove Cricket Ball Sized Black Fungus From Brain of 60 Year Old Man In Bihar

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ