AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಮಿದುಳಲ್ಲಿದ್ದ ಬ್ಲ್ಯಾಕ್ ಫಂಗಸ್​ ಹೊರತೆಗೆದ ವೈದ್ಯರು; ಅದರ ಅಳತೆ ನೋಡಿ ಕಂಗಾಲು

ರೋಗಿಯ ಹೆಸರು ಅನಿಲ್​ ಕುಮಾರ್​. ಜಮುಯಿಯ ನಿವಾಸಿಯಾಗಿದ್ದಾರೆ. ಇವರಿಗೆ ತಲೆ ಸುತ್ತುತ್ತಿತ್ತು.. ಹಾಗೂ ಪದೇಪದೆ ಎಚ್ಚರತಪ್ಪಿ ಬೀಳುತ್ತಿದ್ದರು. ದಿನದಿನಕ್ಕೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿತ್ತು.

ರೋಗಿಯ ಮಿದುಳಲ್ಲಿದ್ದ ಬ್ಲ್ಯಾಕ್ ಫಂಗಸ್​ ಹೊರತೆಗೆದ ವೈದ್ಯರು; ಅದರ ಅಳತೆ ನೋಡಿ ಕಂಗಾಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 13, 2021 | 9:17 AM

Share

ದೆಹಲಿ: ದೇಶದಲ್ಲಿ ಕೊವಿಡ್ 2ನೇ ಅಲೆಯ ಅಬ್ಬರವಿನ್ನೂ ಕಡಿಮೆಯಾಗಿಲ್ಲ. ಆದರೆ ಈ ಬಾರಿ ಕೊರೊನಾದೊಟ್ಟಿಗೆ ಬ್ಲ್ಯಾಕ್​ಫಂಗಸ್ (ಕಪ್ಪುಶಿಲೀಂದ್ರ) ಕಾಟವೂ ಶುರುವಾಗಿದೆ. ದೇಶದ ಎಲ್ಲ ಭಾಗಗಳಲ್ಲೂ ಕೊರೊನಾದಿಂದ ಗುಣಮುಖರಾದ ಕೆಲವರು ಈ ಬ್ಲ್ಯಾಕ್​ ಫಂಗಸ್​​ಗೆ ಒಳಗಾಗುತ್ತಿದ್ದಾರೆ. ಅದರಲ್ಲೀಗ ಪಾಟ್ನಾದ ಇಂದಿರಾ ಗಾಂಧಿ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸ್​ (ಐಜಿಐಎಂಎಸ್​) ನ ವೈದ್ಯರು 60 ವರ್ಷದ ವ್ಯಕ್ತಿಯ ಮಿದುಳಿನಿಂದ ಕ್ರಿಕೆಟ್ ಚೆಂಡಿನ ಅಳತೆಯ ಬ್ಲ್ಯಾಕ್​ ಫಂಗಸ್​​​ ನ್ನು ಹೊರತೆಗೆದಿದ್ದಾರೆ.

ಕಪ್ಪುಶಿಲೀಂದ್ರದ  ಅಳತೆಯನ್ನು ನೋಡಿ ವೈದ್ಯರೇ ಶಾಕ್​ ಆಗಿದ್ದಾರೆ. ಸುಮಾರು 3 ತಾಸುಗಳ ಸರ್ಜರಿಯ ಬಳಿಕ ಈ ಗಡ್ಡೆ ಹೊರತೆಗೆಯಲಾಗಿದೆ. ಸದ್ಯ ರೋಗಿಯ ಸ್ಥಿತಿ ಸ್ಥಿರವಾಗಿದೆ. ಬಿಹಾರದ ಈ ಆಸ್ಪತ್ರೆಯಲ್ಲಿ ಹಲವರಿಗೆ ಬ್ಲ್ಯಾಕ್​ಫಂಗಸ್​​​ಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಆದರೆ ಇದು ಮಾತ್ರ ತುಂಬ ಸವಾಲಿನಿಂದ ಕೂಡಿತ್ತು. ಮಿದುಳಿಗೆ ಹರಡಿದ್ದರಿಂದ ಸರ್ಜರಿ ಸಮಯದಲ್ಲಿ ರೋಗಿಯು ಕಣ್ಣು ಕಳೆದುಕೊಳ್ಳುವಂತೆ ನೋಡಿಕೊಳ್ಳುವುದು ಸಾಹಸವಾಗಿತ್ತು ಎಂದು ಇಲ್ಲಿನ ವೈದ್ಯರು ಹೇಳಿದ್ದಾರೆ.

ಈ ರೋಗಿಯ ಹೆಸರು ಅನಿಲ್​ ಕುಮಾರ್​. ಜಮುಯಿಯ ನಿವಾಸಿಯಾಗಿದ್ದಾರೆ. ಇವರಿಗೆ ತಲೆ ಸುತ್ತುತ್ತಿತ್ತು.. ಹಾಗೂ ಪದೇಪದೆ ಎಚ್ಚರತಪ್ಪಿ ಬೀಳುತ್ತಿದ್ದರು. ದಿನದಿನಕ್ಕೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿತ್ತು. ಮಿದುಳಿನಲ್ಲಿದ್ದ ಬ್ಲ್ಯಾಕ್​ ಫಂಗಸ್​ ಗಡ್ಡೆಯನ್ನು ಡಾ. ಬ್ರಜೇಶ್​ ಕುಮಾರ್​ ಮತ್ತು ಅವರ ತಂಡ ಯಶಸ್ವಿಯಾಗಿ ತೆಗೆದುಹಾಕಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಮನೀಶ್​ ಮಂಡಲ್​ ತಿಳಿಸಿದ್ದಾರೆ.

ಇದನ್ನೂ ಓದಿ: karnataka unlock 60 ದಿನಗಳ ಲಾಕ್​ಡೌನ್ ಗ್ರಹಣಕ್ಕೆ ನಾಳೆಯಿಂದ ಅರ್ಧ ಮುಕ್ತಿ.. ಆದರೆ ಷರತ್ತುಗಳು ಅನ್ವಯ

Doctors Remove Cricket Ball Sized Black Fungus From Brain of 60 Year Old Man In Bihar

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?