AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೋಗಿಯ ಮಿದುಳಲ್ಲಿದ್ದ ಬ್ಲ್ಯಾಕ್ ಫಂಗಸ್​ ಹೊರತೆಗೆದ ವೈದ್ಯರು; ಅದರ ಅಳತೆ ನೋಡಿ ಕಂಗಾಲು

ರೋಗಿಯ ಹೆಸರು ಅನಿಲ್​ ಕುಮಾರ್​. ಜಮುಯಿಯ ನಿವಾಸಿಯಾಗಿದ್ದಾರೆ. ಇವರಿಗೆ ತಲೆ ಸುತ್ತುತ್ತಿತ್ತು.. ಹಾಗೂ ಪದೇಪದೆ ಎಚ್ಚರತಪ್ಪಿ ಬೀಳುತ್ತಿದ್ದರು. ದಿನದಿನಕ್ಕೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿತ್ತು.

ರೋಗಿಯ ಮಿದುಳಲ್ಲಿದ್ದ ಬ್ಲ್ಯಾಕ್ ಫಂಗಸ್​ ಹೊರತೆಗೆದ ವೈದ್ಯರು; ಅದರ ಅಳತೆ ನೋಡಿ ಕಂಗಾಲು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Jun 13, 2021 | 9:17 AM

Share

ದೆಹಲಿ: ದೇಶದಲ್ಲಿ ಕೊವಿಡ್ 2ನೇ ಅಲೆಯ ಅಬ್ಬರವಿನ್ನೂ ಕಡಿಮೆಯಾಗಿಲ್ಲ. ಆದರೆ ಈ ಬಾರಿ ಕೊರೊನಾದೊಟ್ಟಿಗೆ ಬ್ಲ್ಯಾಕ್​ಫಂಗಸ್ (ಕಪ್ಪುಶಿಲೀಂದ್ರ) ಕಾಟವೂ ಶುರುವಾಗಿದೆ. ದೇಶದ ಎಲ್ಲ ಭಾಗಗಳಲ್ಲೂ ಕೊರೊನಾದಿಂದ ಗುಣಮುಖರಾದ ಕೆಲವರು ಈ ಬ್ಲ್ಯಾಕ್​ ಫಂಗಸ್​​ಗೆ ಒಳಗಾಗುತ್ತಿದ್ದಾರೆ. ಅದರಲ್ಲೀಗ ಪಾಟ್ನಾದ ಇಂದಿರಾ ಗಾಂಧಿ ಇನ್​ಸ್ಟಿಟ್ಯೂಟ್​ ಆಫ್​ ಮೆಡಿಕಲ್​ ಸೈನ್ಸ್​ (ಐಜಿಐಎಂಎಸ್​) ನ ವೈದ್ಯರು 60 ವರ್ಷದ ವ್ಯಕ್ತಿಯ ಮಿದುಳಿನಿಂದ ಕ್ರಿಕೆಟ್ ಚೆಂಡಿನ ಅಳತೆಯ ಬ್ಲ್ಯಾಕ್​ ಫಂಗಸ್​​​ ನ್ನು ಹೊರತೆಗೆದಿದ್ದಾರೆ.

ಕಪ್ಪುಶಿಲೀಂದ್ರದ  ಅಳತೆಯನ್ನು ನೋಡಿ ವೈದ್ಯರೇ ಶಾಕ್​ ಆಗಿದ್ದಾರೆ. ಸುಮಾರು 3 ತಾಸುಗಳ ಸರ್ಜರಿಯ ಬಳಿಕ ಈ ಗಡ್ಡೆ ಹೊರತೆಗೆಯಲಾಗಿದೆ. ಸದ್ಯ ರೋಗಿಯ ಸ್ಥಿತಿ ಸ್ಥಿರವಾಗಿದೆ. ಬಿಹಾರದ ಈ ಆಸ್ಪತ್ರೆಯಲ್ಲಿ ಹಲವರಿಗೆ ಬ್ಲ್ಯಾಕ್​ಫಂಗಸ್​​​ಗೆ ಯಶಸ್ವಿಯಾಗಿ ಚಿಕಿತ್ಸೆ ನೀಡಲಾಗಿದೆ. ಆದರೆ ಇದು ಮಾತ್ರ ತುಂಬ ಸವಾಲಿನಿಂದ ಕೂಡಿತ್ತು. ಮಿದುಳಿಗೆ ಹರಡಿದ್ದರಿಂದ ಸರ್ಜರಿ ಸಮಯದಲ್ಲಿ ರೋಗಿಯು ಕಣ್ಣು ಕಳೆದುಕೊಳ್ಳುವಂತೆ ನೋಡಿಕೊಳ್ಳುವುದು ಸಾಹಸವಾಗಿತ್ತು ಎಂದು ಇಲ್ಲಿನ ವೈದ್ಯರು ಹೇಳಿದ್ದಾರೆ.

ಈ ರೋಗಿಯ ಹೆಸರು ಅನಿಲ್​ ಕುಮಾರ್​. ಜಮುಯಿಯ ನಿವಾಸಿಯಾಗಿದ್ದಾರೆ. ಇವರಿಗೆ ತಲೆ ಸುತ್ತುತ್ತಿತ್ತು.. ಹಾಗೂ ಪದೇಪದೆ ಎಚ್ಚರತಪ್ಪಿ ಬೀಳುತ್ತಿದ್ದರು. ದಿನದಿನಕ್ಕೂ ಅವರ ಆರೋಗ್ಯ ಸ್ಥಿತಿ ಗಂಭೀರವಾಗುತ್ತಿತ್ತು. ಮಿದುಳಿನಲ್ಲಿದ್ದ ಬ್ಲ್ಯಾಕ್​ ಫಂಗಸ್​ ಗಡ್ಡೆಯನ್ನು ಡಾ. ಬ್ರಜೇಶ್​ ಕುಮಾರ್​ ಮತ್ತು ಅವರ ತಂಡ ಯಶಸ್ವಿಯಾಗಿ ತೆಗೆದುಹಾಕಿದೆ ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಮನೀಶ್​ ಮಂಡಲ್​ ತಿಳಿಸಿದ್ದಾರೆ.

ಇದನ್ನೂ ಓದಿ: karnataka unlock 60 ದಿನಗಳ ಲಾಕ್​ಡೌನ್ ಗ್ರಹಣಕ್ಕೆ ನಾಳೆಯಿಂದ ಅರ್ಧ ಮುಕ್ತಿ.. ಆದರೆ ಷರತ್ತುಗಳು ಅನ್ವಯ

Doctors Remove Cricket Ball Sized Black Fungus From Brain of 60 Year Old Man In Bihar

Follow Us
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಮನೆಗೆ ಬಂದು ಕಣ್ಣೀರು ಹಾಕಿದ್ರಲ್ಲ: ಸಿಎಂಗೆ ಹಳೆಯ ದಿನಗಳನ್ನ ನೆನಪಿಸಿದ HDK
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಸಿಎಂ ಸಿದ್ದರಾಮಯ್ಯಗೆ ಕುಮಾರಸ್ವಾಮಿ ಓಪನ್ ಚಾಲೆಂಜ್
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ಶ್ರೀನಂದಾ ಸಾವು ಕಾಲು ಜಾರಿ ಬಿದ್ದಿದ್ದಾ ಅಥವಾ ಕೊಲೆಯೇ?
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್
ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ ಬಿಹಾರ ಸಿಎಂ ನಿತೀಶ್ ಕುಮಾರ್