AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲಂಗಾಣದ ಕಾಳೇಶ್ವರಂ ಪ್ರಾಜೆಕ್ಟ್​ ಕುರಿತು ಜೂನ್ 25ಕ್ಕೆ ಡಿಸ್ಕವರಿ ಚಾನೆಲ್ ಸಾಕ್ಷ್ಯಚಿತ್ರ

ಇದು ವಿಶ್ವದ ಅತ್ಯಂತ ದೊಡ್ಡ ಏತ ನೀರಾವರಿ ಯೋಜನೆ ಎಂದು ಪ್ರೊಮೊ ವಿವರಿಸಿದೆ. ಇಷ್ಟು ಬೃಹತ್ ಸಾಮರ್ಥ್ಯದ ಪಂಪ್​ಗಳನ್ನು ಬೇರೆಲ್ಲೂ ಸ್ಥಾಪಿಸಿಲ್ಲ ಅಥವಾ ಕಾರ್ಯನಿರ್ವಹಿಸಲು ಅಳವಡಿಸಿಲ್ಲ ಎಂದು ಪ್ರೊಮೊ ಹೇಳುತ್ತದೆ.

ತೆಲಂಗಾಣದ ಕಾಳೇಶ್ವರಂ ಪ್ರಾಜೆಕ್ಟ್​ ಕುರಿತು ಜೂನ್ 25ಕ್ಕೆ ಡಿಸ್ಕವರಿ ಚಾನೆಲ್ ಸಾಕ್ಷ್ಯಚಿತ್ರ
ತೆಲಂಗಾಣದ ಕಾಳೇಶ್ವರಂ ಏತ ನೀರಾವರಿ ಯೋಜನೆಯ ವಿಹಂಗಮ ನೋಟ.
TV9 Web
| Edited By: |

Updated on:Jun 20, 2021 | 7:42 PM

Share

ಹೈದರಾಬಾದ್: ‘ಮ್ಯಾನ್ ಅಂಡ್ ಮಿಷಿನ್ ಜಾಯಿನ್ ಫೋರ್ಸಸ್’ ಶೀರ್ಷಿಕೆಯ ಸಾಕ್ಷ್ಯಚಿತ್ರದ 30 ಸೆಕೆಂಡ್​ಗಳ ಪ್ರೊಮೊ ತೆಲಂಗಾಣದಲ್ಲಿ ಕುತೂಹಲ ಉಂಟು ಮಾಡಿದೆ. ಗೋದಾವರಿ ನದಿ ನೀರಿನ ಸದುಪಯೋಗಕ್ಕಾಗಿ ರೂಪಿಸಿರುವ ಕಾಳೇಶ್ವರಂ ಏತ ನೀರಾವರಿ ಯೋಜನೆ (Kaleshwaram Lift Irrigation Scheme – KLIS) ಕುರಿತ ಈ ಪ್ರೊಮೊ ಹಲವು ಸಾಮಾಜಿಕ ವೇದಿಕೆಗಳಲ್ಲಿ ವ್ಯಾಪಕವಾಗಿ ಶೇರ್ ಆಗಿದ್ದು, ವೈರಲ್ ಆಗಿದೆ.

ಜೂನ್ 25ರಂದು ರಾತ್ರಿ 8 ಗಂಟೆಗೆ ಈ ಸಾಕ್ಷ್ಯಚಿತ್ರವು ಡಿಸ್ಕವರಿ ಸಮೂಹದ ಚಾನೆಲ್​ಗಳಲ್ಲಿ ಪ್ರಸಾರವಾಗಲಿದೆ. ಇದು ವಿಶ್ವದ ಅತ್ಯಂತ ದೊಡ್ಡ ಏತ ನೀರಾವರಿ ಯೋಜನೆ ಎಂದು ಪ್ರೊಮೊ ವಿವರಿಸಿದೆ. ಇಷ್ಟು ಬೃಹತ್ ಸಾಮರ್ಥ್ಯದ ಪಂಪ್​ಗಳನ್ನು ಬೇರೆಲ್ಲೂ ಸ್ಥಾಪಿಸಿಲ್ಲ ಅಥವಾ ಕಾರ್ಯನಿರ್ವಹಿಸಲು ಅಳವಡಿಸಿಲ್ಲ ಎಂದು ಪ್ರೊಮೊ ಹೇಳುತ್ತದೆ. ಮುಖ್ಯಮಂತ್ರಿ ಕೆ.ಚಂದ್ರಶೇಖರ್​ರಾವ್ ಈ ಯೋಜನೆಯನ್ನು ಜೂನ್ 21, 2019ರಂದು ದೇಶಕ್ಕೆ ಸಮರ್ಪಿಸಿದ್ದರು.

ತೆಲಂಗಾಣದ ನೀರಾವರಿ ಇಲಾಖೆ ಅಧಿಕಾರಿಗಳಲ್ಲಿ ಈ ಪ್ರೊಮೊ ಕುತೂಹಲ ಹುಟ್ಟುಹಾಕಿದೆ. ರಾಜ್ಯದ ಮುಖ್ಯ ಎಂಜಿನಿಯರ್​ರಿಂದ ಅಸಿಸ್ಟೆಂಟ್ ಎಕ್ಸಿಕ್ಯುಟಿವ್ ಎಂಜಿನಿಯರ್​ವರೆಗೂ ಹಲವು ಹಂತದ ಸಿಬ್ಬಂದಿ ಈ ಪ್ರೊಮೊ ಲಿಂಕ್​ ಫಾರ್ವರ್ಡ್ ಮಾಡುತ್ತಿದ್ದಾರೆ. ಸಾಕ್ಷ್ಯಚಿತ್ರ ನೋಡಲು ತಮ್ಮ ಆತ್ಮೀಯರನ್ನು ವಿನಂತಿಸುತ್ತಿದ್ದಾರೆ.

ನನಗೆ ನಿನ್ನೆಯಿಂದಲೂ ವಾಟ್ಸ್ಯಾಪ್​ನಲ್ಲಿ ಸಾಕಷ್ಟು ಮೆಸೇಜ್​ಗಳು ಬರುತ್ತಿವೆ. ನಾವೂ ಈ ಶುಕ್ರವಾರ ಸಾಕ್ಷ್ಯಚಿತ್ರ ನೋಡಲು ಉತ್ಸುಕರಾಗಿದ್ದೇವೆ. ಈ ಯೋಜನೆಯನ್ನು ಕಾರ್ಯಗತಗೊಳಿಸಲು ನೀರಾವರಿ ಇಲಾಖೆ ಸಿಬ್ಬಂದಿ ಎಷ್ಟು ಕಷ್ಟಪಟ್ಟಿದ್ದಾರೆ ಎನ್ನುವುದನ್ನು ಈ ಸಾಕ್ಷ್ಯಚಿತ್ರ ಸಾರಿಹೇಳಲಿದೆ ಎಂದು ಹೆಸರು ಹೇಳಲು ಇಚ್ಛಿಸದ ನೀರಾವರಿ ಇಲಾಖೆಯ ಅಧಿಕಾರಿಯೊಬ್ಬರು ಹೇಳಿದರು.

ಈ ಸಾಕ್ಷ್ಯಚಿತ್ರ ರೂಪಿಸುವ ಕೆಲಸವನ್ನು ಡಿಸ್ಕವರಿ ಚಾನೆಲ್ ಕಳೆದ 2017ರಿಂದಲೇ ಆರಂಭಿಸಿತ್ತು. ಯೋಜನೆಯ ಹಲವು ಸ್ಥಳಗಳಲ್ಲಿ ಚಾನೆಲ್​ನ ಸಿಬ್ಬಂದಿ ಶೂಟಿಂಗ್ ನಡೆಸಿದರು. ತೆಲಂಗಾಣಕ್ಕೆ ಈ ಯೋಜನೆಯ ಪ್ರಾಮುಖ್ಯತೆ ಏನು ಎಂಬ ಬಗ್ಗೆ ನೀರಾವರಿ ವಿಭಾಗದ ಮುಖ್ಯ ಎಂಜಿನಿಯರ್ ರಾಮಗುಂಡಮ್ ನಲ್ಲಾ ವೆಂಕಟೇಶ್ವರಲು ವಿವರಿಸಿದ್ದರು. ಸಾಕ್ಷ್ಯಚಿತ್ರ ನೋಡಲು ನನಗೂ ಕುತೂಹಲವಿದೆ ಎಂದು ವೆಂಕಟೇಶ್ವರು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ.

ಈ ಬಾರಿ ಮಹಾರಾಷ್ಟ್ರ ಸೇರಿದಂತೆ ದಕ್ಷಿಣ ಭಾರತದಲ್ಲಿ ಉತ್ತಮ ಮಳೆಯಾಗುತ್ತಿದೆ. ಕಾಳೇಶ್ವರಂ ಯೋಜನೆ ಮೊದಲ ನಿರ್ಮಾಣವಾದ ಲಕ್ಷ್ಮೀ (ಮಾದಿಗಡ್ಡ) ಬ್ಯಾರೇಜ್​ಗೆ ಪ್ರಾಣಿಹಿತಾ ನದಿಯಿಂದ ಬರುತ್ತಿರುವ ಒಳಹರಿವಿನ ಪ್ರಮಾಣ ಹೆಚ್ಚಾಗಿದೆ. ಈ ನದಿಯಲ್ಲಿ ಜುಲೈ ತಿಂಗಳಲ್ಲಿ ನೀರಿನ ಹರಿವು ಹೆಚ್ಚಾಗುವುದು ವಾಡಿಕೆ.

Kaleshwaram-Project

ಕಾಳೇಶ್ವರಂ ಪ್ರಾಜೆಕ್ಟ್​ನ ವಿಹಂಗಮ ನೋಟ

ಜೂನ್ 25ಕ್ಕೆ ಪ್ರಸಾರ ವಿಶ್ವವಿಖ್ಯಾತ ಫಿಲಂ ಮೇಕರ್ ರಾಜೇಂದ್ರ ಕೊಂಡಪಲ್ಲಿ ರೂಪಿಸಿರುವ ಚಿತ್ರ ಜೂನ್ 25ರ ಶುಕ್ರವಾರ ರಾತ್ರಿ 8 ಗಂಟೆಗೆ ಡಿಸ್ಕವರಿ ಚಾನೆಲ್​ನಲ್ಲಿ ಪ್ರಸಾರವಾಗಲಿದೆ. ಯೋಜನೆಯ ವಿವರಗಳೊಂದಿಗೆ ಜನರಿಗೆ ಈ ಯೋಜನೆ ಎಷ್ಟು ಉಪಯುಕ್ತ ಎಂಬ ಮಾಹಿತಿಯನ್ನೂ ಈ ಸಾಕ್ಷ್ಯಚಿತ್ರ ಪ್ರಸ್ತುತಪಡಿಸಲಿದೆ. ಇಂಗ್ಲಿಷ್ ಮತ್ತು ಇತರ 6 ಭಾರತೀಯ ಭಾಷೆಗಳಲ್ಲಿ ಸಾಕ್ಷ್ಯಚಿತ್ರ ಪ್ರಸಾರಗೊಳ್ಳಲಿದೆ.

ಮೇಘಾ ಎಂಜಿನಿಯರಿಂಗ್ ಅಂಡ್ ಇನ್​ಫ್ರಾಸ್ಟ್ರಕ್ಚರ್​ ಲಿಮಿಟೆಡ್ ಕಂಪನಿಯು ‘ಎಂಜಿನಿಯರಿಂಗ್​ ಮಾರ್ವೆಲ್’ ಎನಿಸಿದ ಈ ಯೋಜನೆಯನ್ನು ಕಾರ್ಯಗತಗೊಳಿಸಿದೆ.

(Documentary on Kaleshwaram project to be aired on Discovery Channel)

ಇದನ್ನೂ ಓದಿ: ತೆಲಂಗಾಣದ 135 ವರ್ಷ ಹಳೆಯ ಜೈಲು ಖಾಲಿ, ಇಲ್ಲಿ ತಲೆ ಎತ್ತಲಿದೆ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ

ಇದನ್ನೂ ಓದಿ: ಕೊವಿಡ್ 19 ಲಸಿಕೆ ತಯಾರಿಕೆಗಾಗಿ ತೆಲಂಗಾಣ ಮೂಲದ ಕಂಪನಿಯೊಂದಿಗೆ ಕೈಜೋಡಿಸಿದ ಜಾನ್ಸನ್ ಆ್ಯಂಡ್​ ಜಾನ್ಸನ್​..

Published On - 5:02 pm, Sun, 20 June 21

ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಮಂಗಳೂರಿನ ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಭಕ್ತರ ದಂಡು
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಪುಟಿನ್ ರಹಸ್ಯ ನಿವಾಸದ ಮೇಲೆ ಉಕ್ರೇನ್ ಡ್ರೋನ್ ದಾಳಿ
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ಕಾರ್ಮಿಕರ ಮೇಲೆ ಹಲ್ಲೆ ಮಾಡಿ ಚಹಾ ಅಂಗಡಿ ಧ್ವಂಸಗೊಳಿಸಿದ ಪೊಲೀಸಪ್ಪ!
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ದೊಡ್ಡ ಗಣಪತಿ ದೇವಸ್ಥಾನದಲ್ಲಿ ಮೋದಿ ಹೆಸರಿನಲ್ಲಿ ವಿಶೇಷ ಪೂಜೆ, ಅಭಿಷೇಕ
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಬಾಯಿ ಮುಚ್ಕೊಂಡು ಕೂತ್ಗೊ; ಕಾವ್ಯಾಗೆ ಅವಾಜ್ ಹಾಕಿದ ಧ್ರುವಂತ್
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಅಕ್ರಮವಾಗಿ ಪಾರ್ಟಿ ಮಾಡುತ್ತಿದ್ದವರಿಗೆ ಶಾಕ್, ಫಾರ್ಮ್​ಹೌಸ್ ಮೇಲೆ ದಾಳಿ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಸಂಜಯ್ ರಾವತ್ ಮನೆ ಮುಂದೆ ಬಾಂಬ್ ಬೆದರಿಕೆ ಸಂದೇಶವಿರುವ ಕಾರು ಪತ್ತೆ
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?
ಅಯ್ಯಪ್ಪ ಸ್ವಾಮಿಯ ಫೋಟೋವನ್ನು ಮನೆಯಲ್ಲಿ ಇಡುವುದರಿಂದ ಆಗುವ ಲಾಭಗಳೇನು?