AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಳಿಯನಿಗೆ ಮಾವನ ಆಸ್ತಿ ಮೇಲೆ ಹಕ್ಕಿದೆಯೇ?; ಹೈಕೋರ್ಟ್​ ಮಹತ್ವದ ತೀರ್ಪು

ಮಧ್ಯಪ್ರದೇಶದ ಹೈಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆಯ ಸಮಯದಲ್ಲಿ ನ್ಯಾಯಾಧೀಶರು ಒಂದು ಪ್ರಮುಖ ತೀರ್ಪನ್ನು ನೀಡಿದ್ದಾರೆ. ಈ ಪ್ರಕರಣದಲ್ಲಿ ಅಳಿಯನಿಗೆ ತನ್ನ ಮಾವನ ಮನೆಯನ್ನು ತಕ್ಷಣವೇ ಖಾಲಿ ಮಾಡುವಂತೆ ನಿರ್ದೇಶಿಸಲಾಗಿದೆ. ಅಳಿಯ ತನ್ನ ಮಾವನ ಮನೆಯಲ್ಲಿ ವಾಸಿಸುತ್ತಿದ್ದ. ಆದರೆ, ಅವನ ಮಾವ ಅಳಿಯನಿಗೆ ಮನೆಯಿಂದ ಹೊರಹೋಗುವಂತೆ ಕೇಳಿದಾಗ ಅವನು ಆ ಮನೆಯ ಮೇಲೆ ತನಗೂ ಹಕ್ಕಿದೆ ಎಂದು ಹೇಳಲಾರಂಭಿಸಿದನು.

ಅಳಿಯನಿಗೆ ಮಾವನ ಆಸ್ತಿ ಮೇಲೆ ಹಕ್ಕಿದೆಯೇ?; ಹೈಕೋರ್ಟ್​ ಮಹತ್ವದ ತೀರ್ಪು
Court Order
ಸುಷ್ಮಾ ಚಕ್ರೆ
|

Updated on:Feb 01, 2025 | 5:36 PM

Share

ನವದೆಹಲಿ: ಮಧ್ಯಪ್ರದೇಶ ಹೈಕೋರ್ಟ್ ತನ್ನ ಮಾವನ ಆಸ್ತಿಯ ಮೇಲೆ ಅಳಿಯನಿಗೆ ಹಕ್ಕುಗಳು ಇದೆಯೇ ಎಂಬ ಬಗ್ಗೆ ಪ್ರಕರಣದ ವಿಚಾರಣೆ ನಡೆಸುವಾಗ ಒಂದು ಪ್ರಮುಖ ತೀರ್ಪನ್ನು ನೀಡಿದೆ. ಒಬ್ಬ ವೃದ್ಧ ವ್ಯಕ್ತಿ ತನ್ನ ಅಳಿಯ ತನ್ನ ಮನೆಯನ್ನು ಆಕ್ರಮಿಸಿಕೊಂಡಿದ್ದಾನೆ ಎಂದು ಕೇಸ್ ದಾಖಲಿಸಿದ್ದರು. ಈ ಪ್ರಕರಣ ಕೋರ್ಟ್ ಮೆಟ್ಟಿಲೇರಿತ್ತು. ಈಗ ಈ ನಿಟ್ಟಿನಲ್ಲಿ ಮಹತ್ವದ ತೀರ್ಪು ನೀಡಲಾಗಿದೆ. ಭಾರತದಲ್ಲಿ ಅಳಿಯನನ್ನು ಗೌರವಿಸಲಾಗುತ್ತದೆ. ಮನೆಗೆ ಅಳಿಯ ಬಂದರೆ ಅನೇಕ ರೀತಿಯ ಭಕ್ಷ್ಯಗಳನ್ನು ತಯಾರಿಸಲಾಗುತ್ತದೆ. ಅನೇಕ ಜನರು ತಮ್ಮ ಅಳಿಯನನ್ನು ತಮ್ಮ ಸ್ವಂತ ಮಗನಂತೆ ಪರಿಗಣಿಸುತ್ತಾರೆ. ಅವರು ಅವನಿಗೆ ಮಗನಂತೆ ಪ್ರೀತಿ ಮತ್ತು ಪ್ರಾಮುಖ್ಯತೆಯನ್ನು ನೀಡುತ್ತಾರೆ. ಆದರೆ, ಅಳಿಯನಿಗೆ ಆತನ ಮಾವ ಅಥವಾ ಅತ್ತೆಯ ಆಸ್ತಿಯಲ್ಲಿ ಪಾಲು ಸಿಗಬಹುದೇ ಎಂಬ ದೊಡ್ಡ ಪ್ರಶ್ನೆ ಉದ್ಭವಿಸುತ್ತದೆ.

ಮಧ್ಯಪ್ರದೇಶದ ಹೈಕೋರ್ಟ್‌ನಲ್ಲಿ ಪ್ರಕರಣವೊಂದರ ವಿಚಾರಣೆಯ ಸಮಯದಲ್ಲಿ ನ್ಯಾಯಾಧೀಶರು ಒಂದು ಪ್ರಮುಖ ತೀರ್ಪನ್ನು ನೀಡಿದ್ದಾರೆ. ಈ ಪ್ರಕರಣದಲ್ಲಿ ಅಳಿಯನಿಗೆ ತನ್ನ ಮಾವನ ಮನೆಯನ್ನು ತಕ್ಷಣವೇ ಖಾಲಿ ಮಾಡುವಂತೆ ನಿರ್ದೇಶಿಸಲಾಗಿದೆ. ಅಳಿಯ ತನ್ನ ಮಾವನ ಮನೆಯಲ್ಲಿ ವಾಸಿಸುತ್ತಿದ್ದ. ಆದರೆ, ಅವನ ಮಾವ ಅಳಿಯನಿಗೆ ಮನೆಯಿಂದ ಹೊರಹೋಗುವಂತೆ ಕೇಳಿದಾಗ ಅವನು ಆ ಮನೆಯ ಮೇಲೆ ತನಗೂ ಹಕ್ಕಿದೆ ಎಂದು ಹೇಳಲಾರಂಭಿಸಿದನು.

ಇದನ್ನೂ ಓದಿ: ಮರ್ಯಾದೆ ಹತ್ಯೆ ಕೇಸ್​: 6 ವರ್ಷದ ಬಳಿಕ 4 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಕೋರ್ಟ್

ಏನಿದು ಘಟನೆ?:

ಭೋಪಾಲ್ ನಿವಾಸಿ ದಿಲೀಪ್ ಮರ್ಮತ್ ತನ್ನ ಮಾವನ ಮನೆಯಲ್ಲಿ ವಾಸಿಸುತ್ತಿದ್ದರು. ಕೆಲವು ಸಮಯದ ಹಿಂದೆ, ಆತನ ಮಾವ ಎಸ್‌ಡಿಎಂ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ಆತನಿಂದ ಮನೆ ಖಾಲಿ ಮಾಡಿಸಬೇಕೆಂದು ಮೇಲ್ಮನವಿ ಸಲ್ಲಿಸಲಾಗಿತ್ತು. ಅಲ್ಲಿಂದ ಮನೆ ಖಾಲಿ ಮಾಡುವಂತೆ ಆದೇಶ ಬಂದಾಗ, ದಿಲೀಪ್ ಭೋಪಾಲ್ ಕಲೆಕ್ಟರ್‌ಗೆ ಮೇಲ್ಮನವಿ ಸಲ್ಲಿಸಿದರು. ಆದರೆ ಅದನ್ನು ತಿರಸ್ಕರಿಸಲಾಯಿತು.

ಇದರ ನಂತರ, ಅಳಿಯ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದರು. ಮಾವ ವಾಸವಾಗಿರುವ ಮನೆ ಕಟ್ಟಲು 10 ಲಕ್ಷ ರೂ. ಪಾವತಿಸಿರುವುದಾಗಿ ಅಳಿಯ ಹೇಳಿಕೊಂಡಿದ್ದಾನೆ. ಆದರೆ ನ್ಯಾಯಾಲಯವು ಆತನಿಗೆ ಆ ಮನೆ ಖಾಲಿ ಮಾಡುವಂತೆ ಆದೇಶಿಸಿದೆ.

ಇದನ್ನೂ ಓದಿ: ಮುಡಾ ಹಗರಣದ ದೂರುದಾರ ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿದ ಕೋರ್ಟ್, ಏನಿದು ಕೇಸ್?

ದಿಲೀಪ್‌ಗೆ ಅವರ ಮಾವ ಮನೆಯಲ್ಲಿ ವಾಸಿಸಲು ಮಾತ್ರ ಅವಕಾಶ ನೀಡಿದ್ದಾರೆ ಎಂದು ನ್ಯಾಯಾಲಯ ಹೇಳಿದೆ. ಅಂತಹ ಪರಿಸ್ಥಿತಿಯಲ್ಲಿ ಆತ ಆ ಮನೆಯನ್ನು ಪಡೆಯಲು ಸಾಧ್ಯವಿಲ್ಲ. ಅಳಿಯನ ಹೆಸರಿನಲ್ಲಿ ಆಸ್ತಿಯನ್ನು ಖರೀದಿಸಿದರೆ ಆತ ಅದರ ಮೇಲೆ ತಮ್ಮ ಹಕ್ಕನ್ನು ಪಡೆಯಬಹುದು. ಆದರೆ ಅವರಿಗೆ ಆಸ್ತಿಯಲ್ಲಿ ವಾಸಿಸಲು ಮಾತ್ರ ಅವಕಾಶವಿದ್ದರೆ ಆತ ಆಸ್ತಿಯ ಮೇಲೆ ತಮ್ಮ ಹಕ್ಕನ್ನು ಪಡೆಯಲು ಸಾಧ್ಯವಿಲ್ಲ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:35 pm, Sat, 1 February 25

ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?