AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kerala: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಕೇರಳ ಸರ್ಕಾರ

ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಕೇರಳ ಸರ್ಕಾರ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

Kerala: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿದ ಬಾಲಕನ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ ಕೇರಳ ಸರ್ಕಾರ
ಅಕ್ಷಯ್​ ಪಲ್ಲಮಜಲು​​
|

Updated on:Jun 27, 2023 | 8:40 PM

Share

ತಿರುವನಂತಪುರಂ: ಬೀದಿನಾಯಿ ದಾಳಿಯಿಂದ ಸಾವನ್ನಪ್ಪಿರುವ ಕಣ್ಣೂರಿನ ಮುಜಪ್ಪಿಲಂಗಾಡ್‌ 11 ವರ್ಷದ ನಿಹಾಲ್ ನೌಶಾದ್ ಎಂಬ ಬಾಲಕನ ಕುಟುಂಬಕ್ಕೆ ಇಂದು (ಜೂನ್​​.27) ನಡೆದ ಕೇರಳ ಸಚಿವ ಸಂಪುಟ ಸಭೆ 10 ಲಕ್ಷ ರೂಪಾಯಿ ಪರಿಹಾರ ಘೋಷಿಸಿದೆ.

ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳ ಸಂಕಷ್ಟ ಪರಿಹಾರ ನಿಧಿಯಿಂದ ಹಣ ಮಂಜೂರು ಮಾಡಲು ನಿರ್ಧರಿಸಲಾಗಿದೆ ಎಂದು ಹೇಳಿದೆ. ಬಾಲಕನ ಮನೆಯಿಂದ ಸುಮಾರು 200 ಮೀಟರ್ ದೂರದಲ್ಲಿ ನಡೆದ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ನಿಹಾಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ: Stray Dog Attack: ತೆಲಂಗಾಣದಲ್ಲಿ ಬೀದಿನಾಯಿಗಳಿಂದ ದಾಳಿ 3 ವರ್ಷದ ಬಾಲಕನಿಗೆ ಗಂಭೀರ ಗಾಯ

ನಿಹಾಲ್‌ನ ಸಾವಿನ ಕೆಲವು ದಿನಗಳ ನಂತರ, ಮುಜಪ್ಪಿಲಂಗಾಡ್‌ನಲ್ಲಿ ಬೀದಿ ನಾಯಿ ದಾಳಿಯಿಂದ ಮತ್ತೊಬ್ಬ ಶಾಲಾ ಬಾಲಕಿ ಜಾನ್ವಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಕಳೆದ ವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ, ರೇಬಿಸ್ ಸೋಂಕಿನಿಂದ ಸಾವನ್ನಪ್ಪಿದ ಕೋಝಿಕ್ಕೋಡ್ ಮೂಲದ ಶೀಬಾಕುಮಾರಿ ಅವರ ಕುಟುಂಬಕ್ಕೆ ಕೇರಳ ಸರ್ಕಾರ 2 ಲಕ್ಷ ರೂ. ನೀಡಲಾಗಿದೆ.

ನಿಹಾಲ್ ನೌಶಾದ್ ಮೇಲೆ ನಾಯಿಗಳ ದಾಳಿ

ಕೇರಳದ ಕಣ್ಣೂರು ಜಿಲ್ಲೆಯ ಮುಜಪ್ಪಿಲಂಗಾಡ್‌ನಲ್ಲಿ ನಾಪತ್ತೆಯಾಗಿದ್ದ ಬಾಲಕ ಶವವಾಗಿ ಭಾನುವಾರ ರಾತ್ರಿ ಪತ್ತೆಯಾಗಿದ್ದಾನೆ.  ಬೀದಿನಾಯಿ ದಾಳಿಯಿಂದ ಗಾಯಗೊಂಡಿದ್ದ ಬಾಲಕ, ವಾಕ್ ದೋಷದಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ. ಪೊಲೀಸರ ಪ್ರಕಾರ, ಭಾನುವಾರ ಸಂಜೆ 5 ಗಂಟೆ ಸುಮಾರಿಗೆ ಬಾಲಕ ತನ್ನ ಮನೆಯಿಂದ ನಾಪತ್ತೆಯಾಗಿದ್ದನು. ಬಾಲಕ ಆಟವಾಡಲು ಹೋಗುತ್ತಿದ್ದ ಸಮೀಪದ ಪ್ಲಾಟ್‌ನಲ್ಲಿ ಹುಡುಕಿದ್ದಾರೆ. ಅಲ್ಲಿ ಆತ ನೆಲದ ಮೇಲೆ ಬಿದ್ದಿದ್ದು, ರಕ್ತಸ್ರಾವವಾಗುತ್ತಿರುವುದು ಪತ್ತೆಯಾಗಿದೆ. ತಕ್ಷಣವೇ ರಾತ್ರಿ 8.30 ರ ಹೊತ್ತಿಗೆ ಆಸ್ಪತ್ರೆಗೆ ಸಾಗಿಸಲಾಯಿತು ಎಂದು ಹೇಳಿದ್ದಾರೆ,

ಮರಣೋತ್ತರ ಪರೀಕ್ಷೆ ಬಳಿಕ ನಿಹಾಲ್ ಅಂತ್ಯಕ್ರಿಯೆ ಸೋಮವಾರ ನಡೆಯಿತು. ಬೀದಿ ನಾಯಿಗಳ ಹಿಂಡು ದಾಳಿಯಲ್ಲಿ ಬಾಲಕನ ತೊಡೆಯ ಒಂದು ಭಾಗವನ್ನು ತಿಂದಿದೆ. ಘಟನೆಯ ನಂತರ, ಸ್ಥಳೀಯ ಸಂಸ್ಥೆಯು ಪ್ರದೇಶದಲ್ಲಿ ಬೀದಿ ನಾಯಿಗಳನ್ನು ಸೆರೆಹಿಡಿಯಲು ಪ್ರಾರಂಭಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:10 pm, Tue, 27 June 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More