ನಾಯಿ ತನ್ನನ್ನು ನೋಡಿ ಬೊಗಳಿತೆಂದು ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ವ್ಯಕ್ತಿ

ನಾಯಿ(Dog) ತನ್ನನ್ನು ಬೊಗಳಿತೆಂದು ವ್ಯಕ್ತಿಯೊಬ್ಬ ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್​ಗಢದ ರಾಯಗಢದಲ್ಲಿ ನಡೆದಿದೆ. 25 ವರ್ಷದ ವ್ಯಕ್ತಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಅವರ ಚಿಕ್ಕಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ.

ನಾಯಿ ತನ್ನನ್ನು ನೋಡಿ ಬೊಗಳಿತೆಂದು ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ ವ್ಯಕ್ತಿ
ನಾಯಿ-ಸಾಂದರ್ಭಿಕ ಚಿತ್ರ
Image Credit source: Shutterstock

Updated on: Aug 30, 2025 | 10:45 AM

ಛತ್ತೀಸ್​ಗಢ, ಆಗಸ್ಟ್​ 30: ನಾಯಿ(Dog) ತನ್ನನ್ನು ಬೊಗಳಿತೆಂದು ವ್ಯಕ್ತಿಯೊಬ್ಬ ಅದರ ಮಾಲೀಕನನ್ನು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ಛತ್ತೀಸ್​ಗಢದ ರಾಯಗಢದಲ್ಲಿ ನಡೆದಿದೆ. 25 ವರ್ಷದ ವ್ಯಕ್ತಿಯ ಮೇಲೆ ಕೊಡಲಿಯಿಂದ ಹಲ್ಲೆ ನಡೆಸಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದರೆ, ಮಧ್ಯಪ್ರವೇಶಿಸಲು ಪ್ರಯತ್ನಿಸಿದ ಅವರ ಚಿಕ್ಕಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ.

ಫಿಟ್ಟಿಂಗ್‌ಪರಾ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುಜಿತ್ ಖಾಲ್ಖೋ ರಾತ್ರಿ 8.30 ರ ಸುಮಾರಿಗೆ ಸಂಬಂಧಿಕರ ಮನೆಗೆ ಊಟಕ್ಕೆ ಹೋಗಿ ಹಿಂದಿರುಗುತ್ತಿದ್ದಾಗ ಮೂವರು ವ್ಯಕ್ತಿಗಳು ಬಂದು ದಾಳಿ ನಡೆಸಿದ್ದಾರೆ.
ಅವರ ಮೇಲೆ ಪದೇ ಪದೆ ಹರಿತವಾದ ಕೊಡಲಿಯಿಂದ ಹೊಡೆದು ಮಾರಣಾಂತಿಕವಾಗಿ ಗಾಯಗೊಳಿಸಿದರು, ಅವರನ್ನು ಉಳಿಸಲು ಚಿಕ್ಕಪ್ಪ ಸುರೇಶ್ ಮಿಂಜ್ ಪ್ರಯತ್ನಿಸಿದಾಗ ಅವರ ಮೇಲೂ ಹಲ್ಲೆ ನಡೆಸಲಾಯಿತು.

ಸುಜಿತ್‌ನ ಸಾಕು ನಾಯಿ ಜತೆ ನಡೆದುಕೊಂಡು ಹೋಗುತ್ತಿದ್ದಾಗ ಆರೋಪಿಯನ್ನು ನೋಡಿ ಅದು ಬೊಗಳಲು ಆರಂಭಿಸಿದಾಗ ಈ ಜಗಳ ಶುರುವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘರ್ಷಣೆಯು ನಿಂದನೆ ಮತ್ತು ಬೆದರಿಕೆಗಳಿಗೆ ಕಾರಣವಾಯಿತು. ದಾಳಿಕೋರರು ಬಲಿಪಶುವಿನ ಜೊತೆ ಹಳೆಯ ವೈಷಮ್ಯ ಹೊಂದಿದ್ದರು, ಇದು ದ್ವೇಷವನ್ನು ಇನ್ನಷ್ಟು ಹೆಚ್ಚಿಸಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಓದಿ: Video: ಮಗುವಿನ ಮೇಲೆ ನಾಯಿ ದಾಳಿ, ಹೀರೋನಂತೆ ಬಂದು ಕಾಪಾಡಿದ ತಂದೆ

ದಾಳಿಯ ನಂತರ, ಪೊಲೀಸರು ಶವವನ್ನು ವಶಪಡಿಸಿಕೊಂಡು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಇಬ್ಬರು ಅಪ್ರಾಪ್ತ ವಯಸ್ಕರು ಸೇರಿದಂತೆ ಮೂವರು ಶಂಕಿತರನ್ನು ಬಂಧಿಸಲಾಗಿದೆ.

ರಾಯ್‌ಗಢ ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಂಗ್ ಪಟೇಲ್ ಈ ಬಂಧನವನ್ನು ದೃಢಪಡಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ನಾಯಿ ಬೊಗಳುವ ವಿವಾದ ಮತ್ತು ಹಿಂದಿನ ದ್ವೇಷ ಎರಡೂ ಕೊಲೆಗೆ ಪ್ರಮುಖ ಕಾರಣ ಎನ್ನಲಾಗಿದೆ.ಈ ವಿಷಯದ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Sat, 30 August 25

ನಯನಾ ರಾಜೀವ್

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us