AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಯಿಗಳ ಪಾಲಾದ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಶವ

ಹೈದರಾಬಾದ್: ಕೊರೊನಾ ಇಡೀ ದೇಶವನ್ನೇ ನಲುಗುವಂತೆ ಮಾಡಿದ ಮಹಾ ವೈರಸ್. ಆದರೆ ಸರ್ಕಾರ ಮಾತ್ರ ಮಹಾಮಾರಿಯನ್ನು ಹಿಮ್ಮೆಟ್ಟಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿದೆ. ಆಂಧ್ರಪ್ರದೇಶದ ಒಂಗೋಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ  ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ. ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಮೃತ ದೇಹವನ್ನು ನಾಯಿ ಕಚ್ಚಿ ತಿಂದಿರುವ ಘಟನೆ ನಡೆದಿದೆ. ಆದರೆ ಆತ ಕೊರೊನಾ ಸೋಂಕಿತನಾ ಅಥವಾ ಅಲ್ವಾ ಎಂಬುದು ಸ್ಪಷ್ಟವಾಗಿಲ್ಲ. ಮೃತ ವ್ಯಕ್ತಿಯ ಮುಖಕ್ಕೆ ನಾಯಿ ಕಚ್ಚಿ ಗಾಯ […]

ನಾಯಿಗಳ ಪಾಲಾದ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಶವ
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Aug 13, 2020 | 12:50 PM

Share

ಹೈದರಾಬಾದ್: ಕೊರೊನಾ ಇಡೀ ದೇಶವನ್ನೇ ನಲುಗುವಂತೆ ಮಾಡಿದ ಮಹಾ ವೈರಸ್. ಆದರೆ ಸರ್ಕಾರ ಮಾತ್ರ ಮಹಾಮಾರಿಯನ್ನು ಹಿಮ್ಮೆಟ್ಟಿಸುವಲ್ಲಿ ನಿರ್ಲಕ್ಷ್ಯವಹಿಸುತ್ತಿದೆ. ಆಂಧ್ರಪ್ರದೇಶದ ಒಂಗೋಲ್‌ನ ಸರ್ಕಾರಿ ಆಸ್ಪತ್ರೆಯಲ್ಲಿ ಇತ್ತೀಚೆಗೆ  ಆಘಾತಕಾರಿ ಸುದ್ದಿಯೊಂದು ವರದಿಯಾಗಿದೆ.

ರಾಜೀವ್ ಗಾಂಧಿ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಕೊರೊನಾ ಸೋಂಕಿತ ಶಂಕಿತ ವ್ಯಕ್ತಿಯ ಮೃತ ದೇಹವನ್ನು ನಾಯಿ ಕಚ್ಚಿ ತಿಂದಿರುವ ಘಟನೆ ನಡೆದಿದೆ. ಆದರೆ ಆತ ಕೊರೊನಾ ಸೋಂಕಿತನಾ ಅಥವಾ ಅಲ್ವಾ ಎಂಬುದು ಸ್ಪಷ್ಟವಾಗಿಲ್ಲ. ಮೃತ ವ್ಯಕ್ತಿಯ ಮುಖಕ್ಕೆ ನಾಯಿ ಕಚ್ಚಿ ಗಾಯ ಮಾಡಿದೆ ಹಾಗೂ ಶವದ ಕಿವಿ ಭಾಗ ಕಾಣೆಯಾಗಿದೆ. ಮನೆಯಿಲ್ಲದವರಿಗೆ ಹಾಗೂ ಬಡವರಿಗೆ ಆಶ್ರಯವಾಗಿ ಬಳಸಿದ ಶೆಡ್‌ನಲ್ಲಿ ನಾಯಿಗಳಿಂದ ದಾಳಿಗೊಳಗಾದ ಮನುಷ್ಯನ ಶವ ಪತ್ತೆಯಾಗಿದೆ.

ಅದೇ ದಿನ ಸೋಮವಾರ, ಬೀದಿ ನಾಯಿಗಳು ಮನುಷ್ಯನ ಕಿವಿಯನ್ನು ತಿನ್ನುತ್ತಿರುವುದದನ್ನು ಆಸ್ಪತ್ರೆಯ ಭದ್ರತಾ ಸಿಬ್ಬಂದಿ ನೋಡಿದ್ದ. ಮೃತ ಪ್ರಕಾಶಂ ಜಿಲ್ಲೆಯ ಜರುಗುಮಲ್ಲಿ ಮಂಡಲದ ಬಿಟ್ರಗುಂಟ ಗ್ರಾಮದ ನಿವಾಸಿ ಕಾಂತ ರಾವ್ ಎಂದು ಗುರುತಿಸಲಾಗಿದೆ.

ಈ ಘಟನೆಗೆ ರಿಮ್ಸ್ ವೈದ್ಯರ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಕಾಂತ ರಾವ್ ಅವರ ಸಂಬಂಧಿಕರು ಆಸ್ಪತ್ರೆ ಮುಂದೆ ಪ್ರತಿಭಟನೆ ನಡೆಸಿದ್ರು. ಘಟನೆಯ ಬಗ್ಗೆ ತನಿಖೆ ನಡೆಸಿದ ನಂತರ ಮೃತ ವ್ಯಕ್ತಿಯು ಇದಕ್ಕೂ ಮುಂಚೆ ಆಸ್ಪತ್ರೆಗೆ ದಾಖಲಾಗಿರಲಿಲ್ಲ ಎಂಬ ಸಂಗತಿ ಹೊರ ಬಿದ್ದಿದೆ.

Published On - 12:44 pm, Thu, 13 August 20

Follow Us
Ayesha Banu
Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ