AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Airports: ಭಾರತದ ವಿಮಾನ ನಿಲ್ದಾಣಗಳಲ್ಲಿನ ಪಾರ್ಕಿಂಗ್​, ಲ್ಯಾಂಡಿಂಗ್ ಶುಲ್ಕ ಕಡಿತ

ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ದೇಶೀಯ ವಿಮಾನಗಳ ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕವನ್ನು 25% ರಷ್ಟು ಕಡಿತಗೊಳಿಸಿದೆ. ಈ ನಿರ್ಧಾರವು ತಕ್ಷಣದಿಂದ ಜಾರಿಗೆ ಬರಲಿದ್ದು, ಮೂರು ತಿಂಗಳ ಅವಧಿಗೆ ಅನ್ವಯಿಸುತ್ತದೆ. ಏರುತ್ತಿರುವ ಇಂಧನ ಬೆಲೆಗಳು ಮತ್ತು ಜಾಗತಿಕ ಉದ್ವಿಗ್ನತೆಗಳಿಂದ ಸಂಕಷ್ಟದಲ್ಲಿರುವ ವಿಮಾನಯಾನ ಸಂಸ್ಥೆಗಳಿಗೆ ಇದು ಗಮನಾರ್ಹ ಪರಿಹಾರ ನೀಡುವ ನಿರೀಕ್ಷೆಯಿದೆ. ಈ ಕ್ರಮವು ವಾಯುಯಾನ ವಲಯದ ಆರ್ಥಿಕ ಒತ್ತಡವನ್ನು ತಗ್ಗಿಸುವ ಗುರಿಯನ್ನು ಹೊಂದಿದೆ.

Airports: ಭಾರತದ ವಿಮಾನ ನಿಲ್ದಾಣಗಳಲ್ಲಿನ ಪಾರ್ಕಿಂಗ್​, ಲ್ಯಾಂಡಿಂಗ್ ಶುಲ್ಕ ಕಡಿತ
ವಿಮಾನ Image Credit source: OCEM Airfield Technology
ನಯನಾ ರಾಜೀವ್
|

Updated on:Apr 08, 2026 | 11:33 AM

Share

ನವದೆಹಲಿ, ಏಪ್ರಿಲ್ 08: ದೇಶಾದ್ಯಂತ ಎಲ್ಲಾ ಪ್ರಮುಖ ವಿಮಾನ ನಿಲ್ದಾಣ(Airport)ಗಳಲ್ಲಿ ದೇಶೀಯ ವಿಮಾನಗಳ ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕವನ್ನು ಶೇಕಡಾ 25 ರಷ್ಟು ಕಡಿಮೆ ಮಾಡಲಾಗಿದೆ. ಭಾರತೀಯ ವಿಮಾನ ನಿಲ್ದಾಣಗಳ ಆರ್ಥಿಕ ನಿಯಂತ್ರಣ ಪ್ರಾಧಿಕಾರ (AERA) ಈ ಒಂದು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ. ಈ ಕಡಿತವು ತಕ್ಷಣದಿಂದ ಜಾರಿಗೆ ಬರಲಿದ್ದು, ಮುಂದಿನ ಮೂರು ತಿಂಗಳವರೆಗೆ ಜಾರಿಯಲ್ಲಿರುತ್ತದೆ. ಮೂರು ತಿಂಗಳ ನಂತರ, ಮುಂದಿನ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು AERA ಮಾರುಕಟ್ಟೆ ಪರಿಸ್ಥಿತಿಗಳು, ವಿಮಾನಯಾನ ಸಂಸ್ಥೆಗಳ ಆರ್ಥಿಕ ಸ್ಥಿತಿ ಮತ್ತು ಉದ್ಯಮದ ಸವಾಲುಗಳನ್ನು ಪರಿಶೀಲಿಸುತ್ತದೆ.

ಎನ್​ಡಿಟಿವಿ ಪ್ರಾಫಿಟ್ ಪ್ರಕಾರ, ವಿಮಾನ ನಿಲ್ದಾಣ ಶುಲ್ಕದಲ್ಲಿನ ಈ ಕಡಿತವು ವಿಮಾನಯಾನ ಸಂಸ್ಥೆಗಳಿಗೆ ವೆಚ್ಚದ ಒತ್ತಡದಿಂದ ಪರಿಹಾರವನ್ನು ನೀಡುವ ನಿರೀಕ್ಷೆಯಿದೆ. ವಿಮಾನಯಾನ ಸಂಸ್ಥೆಗಳು ಈ ಪರಿಹಾರವನ್ನು ಪ್ರಯಾಣಿಕರಿಗೆ ವರ್ಗಾಯಿಸಬಹುದು ಎಂಬ ನಿರೀಕ್ಷೆ ಸ್ವಲ್ಪ ಕಡಿಮೆ ಇದೆ. ಇನ್ನೂ ಯಾವುದೇ ಅಧಿಕೃತ ಘೋಷಣೆ ಮಾಡಲಾಗಿಲ್ಲ. ಏರುತ್ತಿರುವ ಇಂಧನ ಬೆಲೆಗಳು ಮತ್ತು ಕಾರ್ಯಾಚರಣೆಯ ಸವಾಲುಗಳಿಂದಾಗಿ ಇತ್ತೀಚಿನ ತಿಂಗಳುಗಳಲ್ಲಿ ವಿಮಾನಯಾನ ಸಂಸ್ಥೆಗಳು ಈಗಾಗಲೇ ಒತ್ತಡದಲ್ಲಿವೆ.

ಲ್ಯಾಂಡಿಂಗ್ ಮತ್ತು ಪಾರ್ಕಿಂಗ್ ಶುಲ್ಕಗಳು ವಿಮಾನಯಾನ ಸಂಸ್ಥೆಗಳ ಒಟ್ಟು ನಿರ್ವಹಣಾ ವೆಚ್ಚಗಳಲ್ಲಿ ಗಮನಾರ್ಹ ಭಾಗವನ್ನು ಹೊಂದಿವೆ.ಈ ತಾತ್ಕಾಲಿಕ ಪರಿಹಾರವು AERA ನಿಯಂತ್ರಿಸುವ ಎಲ್ಲಾ ಪ್ರಮುಖ ವಿಮಾನ ನಿಲ್ದಾಣಗಳಿಗೆ ಅನ್ವಯಿಸುತ್ತದೆ. ಗಗನಕ್ಕೇರುತ್ತಿರುವ ಇಂಧನ ಬೆಲೆಗಳು ಮತ್ತು ಜಾಗತಿಕ ಉದ್ವಿಗ್ನತೆಗಳ ನಡುವೆ ಸಂಕಷ್ಟದಲ್ಲಿರುವ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಸ್ವಲ್ಪ ಮಟ್ಟಿಗೆ ಪರಿಹಾರ ಸಿಕ್ಕಂತಾಗಿದೆ.

ಮತ್ತಷ್ಟು ಓದಿ: ‘ವಿಶ್ವದ ಅತ್ಯುತ್ತಮ ಆಗಮನ ನಿಲ್ದಾಣ’ ಪ್ರಶಸ್ತಿ ಪಡೆದ ಕೆಂಪೇಗೌಡ ವಿಮಾನ ನಿಲ್ದಾಣ: ವೇಗ, ಸ್ವಚ್ಛತೆ ಎಲ್ಲದರಲ್ಲೂ ನಂಬರ್​​ ಒನ್

ಪಶ್ಚಿಮ ಏಷ್ಯಾದ ಬಿಕ್ಕಟ್ಟು ಕಚ್ಚಾ ತೈಲ ಬೆಲೆಗಳಲ್ಲಿ ಏರಿಕೆಗೆ ಕಾರಣವಾಗಿರುವುದಲ್ಲದೆ, ವಿಮಾನ ಮಾರ್ಗಗಳಲ್ಲಿನ ಬದಲಾವಣೆಗಳಿಂದಾಗಿ ವಿಮಾನಯಾನ ಸಂಸ್ಥೆಗಳ ಮೇಲೆ ಆರ್ಥಿಕ ಹೊರೆ ಹೆಚ್ಚಿರುವ ಸಮಯದಲ್ಲಿ ಈ ಐತಿಹಾಸಿಕ ಕ್ರಮವು ಬಂದಿದೆ. ಇದರರ್ಥ ವಿಮಾನಯಾನ ಸಂಸ್ಥೆಗಳು ಈಗ ರನ್‌ವೇ ಬಳಕೆ ಮತ್ತು ವಿಮಾನ ಪಾರ್ಕಿಂಗ್‌ಗೆ ಮೊದಲಿಗಿಂತ ಕಾಲು ಭಾಗದಷ್ಟು ಕಡಿಮೆ ಪಾವತಿಸಬೇಕಾಗುತ್ತದೆ.

ಪ್ರಸ್ತುತ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳ (ಪಶ್ಚಿಮ ಏಷ್ಯಾ ಬಿಕ್ಕಟ್ಟು) ಪರಿಣಾಮವನ್ನು ತಗ್ಗಿಸಲು ಕೇಂದ್ರ ಸರ್ಕಾರದ ನಿರ್ದೇಶನಗಳನ್ನು ಅನುಸರಿಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಪ್ರಾಧಿಕಾರವು ತನ್ನ ಅಧಿಕೃತ ಆದೇಶದಲ್ಲಿ ಸ್ಪಷ್ಟಪಡಿಸಿದೆ. ಯುದ್ಧ ಮತ್ತು ಅಂತಾರಾಷ್ಟ್ರೀಯ ಅಸ್ಥಿರತೆಯಿಂದಾಗಿ ವಾಯುಯಾನ ವಲಯದಲ್ಲಿ ಉಂಟಾಗುತ್ತಿರುವ ಆರ್ಥಿಕ ಒತ್ತಡದ ಹಿನ್ನೆಲೆಯಲ್ಲಿ ಈ ತುರ್ತು ಪರಿಹಾರವನ್ನು ನೀಡಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:33 am, Wed, 8 April 26

Follow Us