AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೈದರಾಬಾದ್: ಪತಿ ಮರು ಮದುವೆ ಮಾಡಿಕೊಂಡಿದ್ದಕ್ಕೆ ಮನನೊಂದು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ

ಹೈದರಾಬಾದ್‌ನಲ್ಲಿ ಪತಿ ಮರುಮದುವೆಯ ಕಾರಣದಿಂದ ಮನನೊಂದ ಮಹಿಳೆಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಕೊಂದು ತಾವೂ ಆತ್ಮಹತ್ಯೆಗೆ ಶರಣಾಗಿದ್ದಾರೆ. ದೀರ್ಘಕಾಲದ ಕೌಟುಂಬಿಕ ಕಲಹವೇ ಈ ದುರಂತಕ್ಕೆ ಕಾರಣ ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಪತಿ ಪ್ರವೀಣ್ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಡಿ ತನಿಖೆ ನಡೆಸುತ್ತಿದ್ದಾರೆ. ಈ ಘಟನೆ ಕುಟುಂಬದ ಆಳವಾದ ಸಮಸ್ಯೆಗಳನ್ನು ಎತ್ತಿ ತೋರಿಸುತ್ತದೆ.

ಹೈದರಾಬಾದ್: ಪತಿ ಮರು ಮದುವೆ ಮಾಡಿಕೊಂಡಿದ್ದಕ್ಕೆ ಮನನೊಂದು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಮಹಿಳೆ
ದಂಪತಿ ಮತ್ತು ಮಕ್ಕಳುImage Credit source: NDTV
ನಯನಾ ರಾಜೀವ್
|

Updated on: Apr 01, 2026 | 10:58 AM

Share

ಹೈದರಾಬಾದ್, ಏಪ್ರಿಲ್ 1: ಪತಿ ಮರುಮದುವೆಯಾಗಿದ್ದಕ್ಕೆ ಮನನೊಂದ ಮಹಿಳೆ ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ(Suicide)ಗೆ ಶರಣಾಗಿರುವ ಘಟನೆ ಹೈದರಾಬಾದ್​ನಲ್ಲಿ ನಡೆದಿದೆ. 29 ವರ್ಷದ ಮಹಿಳೆ ತನ್ನ ಇಬ್ಬರು ಗಂಡು ಮಕ್ಕಳನ್ನು ಕೊಂದು ಬಳಿಕ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೀರ್ಘಕಾಲದ ಕೌಟುಂಬಿಕ ಕಲಹವೇ ಈ ನಿರ್ಧಾರಕ್ಕೆ ಕಾರಣ ಎಂದು ಹೇಳಲಾಗಿದೆ.ಮೃತರನ್ನು ಎಸ್ ಬಾನೋತ್ ಶ್ರಾವಂತಿ (29) ಮತ್ತು ಅವರ ಪುತ್ರರಾದ ಕಾರ್ತಿಕ್ (12) ಮತ್ತು ಕೌಶಿಕ್ (10) ಎಂದು ಗುರುತಿಸಲಾಗಿದೆ.

ಪೊಲೀಸರ ಪ್ರಕಾರ, ಶ್ರಾವಂತಿ ಸುಮಾರು 13 ವರ್ಷಗಳ ಹಿಂದೆ ಬೋಡಾ ಪ್ರವೀಣ್ ಅವರನ್ನು ವಿವಾಹವಾಗಿದ್ದರು ಮತ್ತು ಪ್ರವೀಣ್ ಬೇರೊಬ್ಬ ಮಹಿಳೆಯನ್ನು ಮದುವೆಯಾದ ನಂತರ ದಂಪತಿ ನಡುವೆ ಆಗಾಗ ಜಗಳವಾಗುತ್ತಿತ್ತು. ಪದೇ ಪದೇ ಜಗಳವಾಡುತ್ತಿದ್ದ ಕಾರಣ ಶ್ರಾವಂತಿ ಇತ್ತೀಚೆಗೆ ಮನೆ ಬಿಟ್ಟು ವಾರಂಗಲ್‌ನಲ್ಲಿರುವ ತವರು ಮನೆಗೆ ಹೋಗಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬದ ಹಿರಿಯರು ಮಧ್ಯಪ್ರವೇಶಿಸಿ ಸೋಮವಾರ ರಾತ್ರಿ ಪ್ರವೀಣ್ ಜೊತೆ ಹೈದರಾಬಾದ್‌ಗೆ ಮರಳುವಂತೆ ಮನವೊಲಿಸಿದ್ದರು.

ಮಂಗಳವಾರ ಮಧ್ಯಾಹ್ನ, ಪ್ರವೀಣ್ ಮಧ್ಯಾಹ್ನ 1.30 ರ ಸುಮಾರಿಗೆ ಕೆಲಸದಿಂದ ಹಿಂತಿರುಗಿದಾಗ ಮುಖ್ಯ ಬಾಗಿಲು ಒಳಗಿನಿಂದ ಲಾಕ್ ಆಗಿರುವುದನ್ನು ಕಂಡರು. ಪದೇ ಪದೇ ಬಡಿದರೂ ಯಾವುದೇ ಪ್ರತಿಕ್ರಿಯೆ ಬರಲಿಲ್ಲ. ನಂತರ ನೆರೆಹೊರೆಯವರ ಸಹಾಯದಿಂದ ಬಾಗಿಲು ಒಡೆದು ಒಳಗೆ ಹೋದರು ಎಂದು ಬಾಲನಗರ ಎಸಿಪಿ ಪಿ. ನರೇಶ್ ರೆಡ್ಡಿ ಹೇಳಿದರು.

ಮತ್ತಷ್ಟು ಓದಿ: ತಾಯಿ, ಅಕ್ಕನ ಕೊಂದು ಆತ್ಮಹತ್ಯೆಗೆ ಯುವಕ ಯತ್ನ: ಪೊಲೀಸ್​​ ವರಿಷ್ಠಾಧಿಕಾರಿ ಹೇಳಿದ್ದೇನು?

ಮನೆಯೊಳಗೆ ಶ್ರಾವಂತಿ ಮತ್ತು ಇಬ್ಬರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮಧ್ಯಾಹ್ನ 2.30 ರ ಸುಮಾರಿಗೆ ಡಯಲ್ 100 ಕರೆ ಬಂದ ನಂತರ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ.

ನಮ್ಮ ತಂಡವು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದೆ. ಪ್ರಾಥಮಿಕವಾಗಿ ಮಹಿಳೆ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾರೆ ಎನ್ನುವ ಅನುಮಾನವಿದೆ, ಇಬ್ಬರು ಮಕ್ಕಳ ಸಾವಿಗೆ ನಿಖರವಾದ ಕಾರಣ ಮರಣೋತ್ತರ ಪರೀಕ್ಷೆಯ ವರದಿಯ ನಂತರವೇ ತಿಳಿಯಲಿದೆ ಎಂದು ಎಸಿಪಿ ನರೇಶ್ ರೆಡ್ಡಿ ಹೇಳಿದರು.

ಮಕ್ಕಳ ಶವಗಳು ಅವರ ತಾಯಿಯೊಂದಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ, ಆದರೆ ಮಹಿಳೆ ತೀವ್ರ ಹೆಜ್ಜೆ ಇಡುವ ಮೊದಲು ಮಕ್ಕಳ ಪ್ರಾಣ ಹೋಗಿತ್ತೇ ಎಂದು ತನಿಖಾಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಪ್ರವೀಣ್ ವಿರುದ್ಧ ಬಿಎನ್‌ಎಸ್ ಸೆಕ್ಷನ್ 108 ರ ಅಡಿಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಿಸಲಾಗುವುದು ಎಂದು ಕುಕತ್‌ಪಲ್ಲಿ ಡಿಸಿಪಿ ರಿತಿ ರಾಜ್ ತಿಳಿಸಿದ್ದಾರೆ. ತನಿಖೆಯು ಕೌಟುಂಬಿಕ ಕಲಹಗಳು ಮತ್ತು ಮಹಿಳೆಯನ್ನು ಈ ಹೆಜ್ಜೆ ಇಡಲು ಪ್ರೇರೇಪಿಸಿದ ಸಂದರ್ಭಗಳ ಮೇಲೆ ಕೇಂದ್ರೀಕೃತವಾಗಿದೆ ಎಂದು ಅಧಿಕಾರಿ ಹೇಳಿದರು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us