AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಧಾನಿ ಮೋದಿಗೆ ಡೊಮಿನಿಕಾದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ

ಕೊವಿಡ್-19 ಸಮಯದಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಕೊಡುಗೆಯನ್ನು ಶ್ಲಾಘಿಸಿರುವ ಡೊಮಿನಿಕಾ ಮೋದಿಗೆ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಘೋಷಿಸಿದೆ. ಕೊವಿಡ್-19 ಸಾಂಕ್ರಾಮಿಕದ ಸಮಯದಲ್ಲಿ ದೇಶಕ್ಕೆ ನೀಡಿದ ಕೊಡುಗೆ ಮತ್ತು ನಡುವಿನ ದ್ವಿಪಕ್ಷೀಯ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ, ಗೌರವಿಸುವುದಾಗಿ ಘೋಷಿಸಿದೆ.

ಪ್ರಧಾನಿ ಮೋದಿಗೆ ಡೊಮಿನಿಕಾದಿಂದ ಅತ್ಯುನ್ನತ ನಾಗರಿಕ ಪ್ರಶಸ್ತಿ ಘೋಷಣೆ
ನರೇಂದ್ರ ಮೋದಿ
ಸುಷ್ಮಾ ಚಕ್ರೆ
|

Updated on: Nov 14, 2024 | 3:45 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿಯವರ ಕೆರಿಬಿಯನ್ ರಾಷ್ಟ್ರಗಳ ಭೇಟಿಗೂ ಮುಂಚಿತವಾಗಿ, ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ದೇಶಕ್ಕೆ ಅವರು ನೀಡಿದ ಅಪಾರ ಕೊಡುಗೆಗಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯಾದ ಡೊಮಿನಿಕಾ ಗೌರವವನ್ನು ಘೋಷಿಸಿದೆ. “ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಡೊಮಿನಿಕಾಕ್ಕೆ ಅವರು ನೀಡಿದ ಕೊಡುಗೆಗಳನ್ನು ಮತ್ತು ಭಾರತದ ನಡುವಿನ ಪಾಲುದಾರಿಕೆಯನ್ನು ಬಲಪಡಿಸುವ ಅವರ ಸಮರ್ಪಣೆಯನ್ನು ಗುರುತಿಸಿ ಕಾಮನ್‌ವೆಲ್ತ್ ಆಫ್ ಡೊಮಿನಿಕಾ ತನ್ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ನೀಡಲಿದೆ” ಎಂದು ಇಂದು ಸರ್ಕಾರ ಬಿಡುಗಡೆ ಮಾಡಿದ ಹೇಳಿಕೆ ತಿಳಿಸಿದೆ.

ಡೊಮಿನಿಕಾದ ಪ್ರಧಾನ ಮಂತ್ರಿ ಕಚೇರಿಯು ಈ ಘೋಷಣೆಯನ್ನು ಮಾಡಿದ್ದು, ಕಾಮನ್‌ವೆಲ್ತ್ ಆಫ್ ಡೊಮಿನಿಕಾದ ಅಧ್ಯಕ್ಷರಾದ ಸಿಲ್ವಾನಿ ಬರ್ಟನ್ ಭಾರತ-ಕ್ಯಾರಿಕಾಮ್ ಶೃಂಗಸಭೆ 2024ರ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರಿಗೆ ದೇಶದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಲಿದ್ದಾರೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ. ಗಯಾನಾದ ಜಾರ್ಜ್‌ಟೌನ್‌ನಲ್ಲಿ ನವೆಂಬರ್ 19-21ರಿಂದ ಶೃಂಗಸಭೆ ನಡೆಯಲಿದೆ.

ಇದನ್ನೂ ಓದಿ: ಸೋಲಾರ್ ಪ್ಯಾನೆಲ್ ಅಳವಡಿಸಲು ಪ್ರತಿ ಮನೆಗೆ 75ರಿಂದ 80 ಸಾವಿರ ನೀಡುತ್ತೇವೆ; ಜಾರ್ಖಂಡ್‌ನಲ್ಲಿ ಮೋದಿ ಘೋಷಣೆ

ಮುಂಬರುವ ಭಾರತ-ಕ್ಯಾರಿಕಾಮ್ ಶೃಂಗಸಭೆಯಲ್ಲಿ ಡೊಮಿನಿಕನ್ ಅಧ್ಯಕ್ಷರು ಪ್ರಶಸ್ತಿಯನ್ನು ನೀಡಲಿದ್ದಾರೆ. ಫೆಬ್ರವರಿ 2021ರಲ್ಲಿ ಭಾರತವು ಡೊಮಿನಿಕಾಗೆ 70,000 ಡೋಸ್ ಅಸ್ಟ್ರಾಜೆನೆಕಾ COVID-19 ಲಸಿಕೆಯನ್ನು ಪೂರೈಕೆ ಮಾಡಿತ್ತು. ಇದು ಡೊಮಿನಿಕಾ ತನ್ನ ಕ್ಯಾರಿಬಿಯನ್ ನೆರೆಹೊರೆಯವರಿಗೆ ಬೆಂಬಲವನ್ನು ವಿಸ್ತರಿಸಲು ಅನುವು ಮಾಡಿಕೊಟ್ಟ ಕೊಡುಗೆಯಾಗಿದೆ.

ಪ್ರಧಾನಿ ಮೋದಿ ಗಯಾನಾಗೆ ಭೇಟಿ ನೀಡುವ ಕೆಲವು ದಿನಗಳ ಮೊದಲು ಈ ಪ್ರಮುಖ ಘೋಷಣೆಯು ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ಇದು ಅರ್ಧ ಶತಮಾನದಿಂದ ಭಾರತೀಯ ಪ್ರಧಾನಿಯ ಮೊದಲ ಭೇಟಿಯಾಗಿದೆ. ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಕ್ಯಾರಿಬಿಯನ್ ರಾಷ್ಟ್ರಕ್ಕೆ ಶಿಕ್ಷಣ ಮತ್ತು ಮಾಹಿತಿ ತಂತ್ರಜ್ಞಾನದಲ್ಲಿ ಭಾರತದ ಬೆಂಬಲವನ್ನು ಡೊಮಿನಿಕಾ ಗುರುತಿಸಿದೆ. ಜಾಗತಿಕ ಮಟ್ಟದಲ್ಲಿ ಹವಾಮಾನ ಸ್ಥಿತಿಸ್ಥಾಪಕತ್ವ-ನಿರ್ಮಾಣ ಉಪಕ್ರಮಗಳು ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಅವರ ಪಾತ್ರವನ್ನು ದೇಶವು ಶ್ಲಾಘಿಸಿದೆ.

ಇದನ್ನೂ ಓದಿ: ಕರ್ನಾಟಕದಲ್ಲಿ ಸುಳ್ಳು ಭರವಸೆ ನೀಡಿದ ಕಾಂಗ್ರೆಸನ್ನು ಮಹಾರಾಷ್ಟ್ರದಿಂದ ದೂರವಿಡಿ; ಪುಣೆಯಲ್ಲಿ ಪ್ರಧಾನಿ ಮೋದಿ

“ಪ್ರಧಾನಿ ನರೇಂದ್ರ ಮೋದಿ ಡೊಮಿನಿಕಾಗೆ ನಿಜವಾದ ಪಾಲುದಾರರಾಗಿದ್ದಾರೆ. ವಿಶೇಷವಾಗಿ ಜಾಗತಿಕ ಆರೋಗ್ಯ ಬಿಕ್ಕಟ್ಟಿನ ನಡುವೆ ನಮ್ಮ ಅಗತ್ಯದ ಸಮಯದಲ್ಲಿ ಭಾರತದ ಬೆಂಬಲವನ್ನು ನಾವು ನೆನಪಿಸಿಕೊಳ್ಳಲೇಬೇಕಾಗಿದೆ. ಅವರ ಬೆಂಬಲಕ್ಕಾಗಿ ನಮ್ಮ ಕೃತಜ್ಞತೆಯ ಸಂಕೇತವಾಗಿ ಮತ್ತು ಪ್ರತಿಬಿಂಬವಾಗಿ ಡೊಮಿನಿಕಾದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿಯನ್ನು ಅವರಿಗೆ ನೀಡುವುದು ಗೌರವವಾಗಿದೆ. ನಮ್ಮ ದೇಶಗಳ ನಡುವಿನ ಬಲವಾದ ಸಂಬಂಧಗಳನ್ನು ನಾವು ಈ ಪಾಲುದಾರಿಕೆಯನ್ನು ನಿರ್ಮಿಸಲು ಎದುರು ನೋಡುತ್ತಿದ್ದೇವೆ ಎಂದು ಡೊಮಿನಿಕಾ ಪ್ರಕಟಣೆ ತಿಳಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?