AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ

Suresh Poojari: ಮಂಗಳೂರು ಮೂಲದ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ
ಸುರೇಶ್ ಪೂಜಾರಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 19, 2021 | 2:58 PM

Share

ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಮಂಗಳೂರು ಮೂಲದ ಡಾನ್ ಸುರೇಶ್ ಪೂಜಾರಿ, ಭೂಗತ ಪಾತಕಿ ಛೋಟಾ ರಾಜನ್, ರವಿ ಪೂಜಾರಿ ಸಹಚರನಾಗಿದ್ದ. ನಂತರ ತನ್ನದೇ ಗ್ಯಾಂಗ್ ನಡೆಸುತ್ತಿದ್ದ. ಬೆಂಗಳೂರಿನ ಕೆಲವು ಕೇಸ್​ಗಳಲ್ಲೂ ಸುರೇಶ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಇದೀಗ ಫಿಲಿಫೈನ್ಸ್​​ನಲ್ಲಿ ಇಂಟರ್​ಪೋಲ್ ಪೊಲೀಸರು ಅವನನ್ನು ಬಂಧಿಸಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯೊಂದು ವರದಿ ಪ್ರಸಾರ ಮಾಡಿದೆ.

ಕಳೆದ 10 ವರ್ಷದಿಂದ ರವಿ ಪೂಜಾರಿ ಗ್ಯಾಂಗ್​ನಿಂದ ಬೇರೆ ಆಗಿ, ಪ್ರತ್ಯೇಕ ಗ್ಯಾಂಗ್ ಮಾಡಿಕೊಂಡಿದ್ದ ಸುರೇಶ್ ಪೂಜಾರಿ, ಕಾಲ್ ಮಾಡಿ ಬೆದರಿಕೆ ಒಡ್ಡುತ್ತಿದ್ದ. ಈತನ ವಿರುದ್ಧ ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿತ್ತು. ಹಲವು ಎಫ್​ಐಆರ್​ಗಳು ದಾಖಲಾದ ನಂತರ ಭಾರತದಿಂದ ಪಲಾಯನ ಮಾಡಿ, ವಿವಿಧ ದೇಶಗಳಲ್ಲಿ ನಕಲಿ ಗುರುತಿನ ಕಾರ್ಡ್ ಬಳಸಿ ವಾಸಿಸುತ್ತಿದ್ದ. ಮೂಲಗಳ ಪ್ರಕಾರ, ಸುರೇಶ್ ಪೂಜಾರಿ ಅಕ್ಟೋಬರ್ 15ರಂದು ಸಿಕ್ಕಿಬಿದ್ದಿದ್ದು, ಪೊಲೀಶ್ ವಶದಲ್ಲಿದ್ದಾನೆ. ಈ ವರ್ಷದ ಆರಂಭದಲ್ಲಿ ಮತ್ತೊಬ್ಬ ಕುಖ್ಯಾತ ಡಾನ್ ರವಿ ಪೂಜಾರಿಯನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಸ್ತುತ ಸುರೇಶ್ ಪೂಜಾರಿಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

‘ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವೈಯಕ್ತಿಕ ದ್ವೇಷಕ್ಕೆ ಆರ್ಯನ್​ ಅರೆಸ್ಟ್​’: ಕಿಶೋರ್​ ತಿವಾರಿ ಆರೋಪ

Zomato: ‘ರಾಷ್ಟ್ರ ಭಾಷೆ’ ಹಿಂದಿ ಬರಲೇಬೇಕೆಂದ ಝೊಮ್ಯಾಟೊ ಎಕ್ಸ್​ಕ್ಯೂಟಿವ್; ಕಂಪೆನಿಗೆ ತಗುಲಿಕೊಂಡ ನೆಟ್ಟಿಗರು

Follow Us
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ
ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ