AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ

Suresh Poojari: ಮಂಗಳೂರು ಮೂಲದ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಕರ್ನಾಟಕ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಈತನ ವಿರುದ್ಧ ಪ್ರಕರಣ ದಾಖಲಾಗಿತ್ತು.

Suresh Pujari Arrest: ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿ ಸೆರೆ
ಸುರೇಶ್ ಪೂಜಾರಿ (ಸಂಗ್ರಹ ಚಿತ್ರ)
TV9 Web
| Edited By: |

Updated on: Oct 19, 2021 | 2:58 PM

Share

ಫಿಲಿಪೈನ್ಸ್​ನಲ್ಲಿ ಕುಖ್ಯಾತ ಗ್ಯಾಂಗ್​ಸ್ಟರ್ ಸುರೇಶ್ ಪೂಜಾರಿಯನ್ನು ಬಂಧಿಸಲಾಗಿದೆ. ಮಂಗಳೂರು ಮೂಲದ ಡಾನ್ ಸುರೇಶ್ ಪೂಜಾರಿ, ಭೂಗತ ಪಾತಕಿ ಛೋಟಾ ರಾಜನ್, ರವಿ ಪೂಜಾರಿ ಸಹಚರನಾಗಿದ್ದ. ನಂತರ ತನ್ನದೇ ಗ್ಯಾಂಗ್ ನಡೆಸುತ್ತಿದ್ದ. ಬೆಂಗಳೂರಿನ ಕೆಲವು ಕೇಸ್​ಗಳಲ್ಲೂ ಸುರೇಶ್ ಪೂಜಾರಿ ಪ್ರಮುಖ ಆರೋಪಿಯಾಗಿದ್ದಾನೆ. ಇದೀಗ ಫಿಲಿಫೈನ್ಸ್​​ನಲ್ಲಿ ಇಂಟರ್​ಪೋಲ್ ಪೊಲೀಸರು ಅವನನ್ನು ಬಂಧಿಸಿದ್ದಾರೆ. ಈ ಕುರಿತು ಖಾಸಗಿ ವಾಹಿನಿಯೊಂದು ವರದಿ ಪ್ರಸಾರ ಮಾಡಿದೆ.

ಕಳೆದ 10 ವರ್ಷದಿಂದ ರವಿ ಪೂಜಾರಿ ಗ್ಯಾಂಗ್​ನಿಂದ ಬೇರೆ ಆಗಿ, ಪ್ರತ್ಯೇಕ ಗ್ಯಾಂಗ್ ಮಾಡಿಕೊಂಡಿದ್ದ ಸುರೇಶ್ ಪೂಜಾರಿ, ಕಾಲ್ ಮಾಡಿ ಬೆದರಿಕೆ ಒಡ್ಡುತ್ತಿದ್ದ. ಈತನ ವಿರುದ್ಧ ಕರ್ನಾಟಕ, ಮಹಾರಾಷ್ಟ್ರ ಸೇರಿ ಹಲವು ರಾಜ್ಯಗಳಲ್ಲಿ ಪ್ರಕರಣ ದಾಖಲಾಗಿತ್ತು. ಹಲವು ಎಫ್​ಐಆರ್​ಗಳು ದಾಖಲಾದ ನಂತರ ಭಾರತದಿಂದ ಪಲಾಯನ ಮಾಡಿ, ವಿವಿಧ ದೇಶಗಳಲ್ಲಿ ನಕಲಿ ಗುರುತಿನ ಕಾರ್ಡ್ ಬಳಸಿ ವಾಸಿಸುತ್ತಿದ್ದ. ಮೂಲಗಳ ಪ್ರಕಾರ, ಸುರೇಶ್ ಪೂಜಾರಿ ಅಕ್ಟೋಬರ್ 15ರಂದು ಸಿಕ್ಕಿಬಿದ್ದಿದ್ದು, ಪೊಲೀಶ್ ವಶದಲ್ಲಿದ್ದಾನೆ. ಈ ವರ್ಷದ ಆರಂಭದಲ್ಲಿ ಮತ್ತೊಬ್ಬ ಕುಖ್ಯಾತ ಡಾನ್ ರವಿ ಪೂಜಾರಿಯನ್ನು ವಶಕ್ಕೆ ಪಡೆಯಲಾಗಿತ್ತು. ಪ್ರಸ್ತುತ ಸುರೇಶ್ ಪೂಜಾರಿಯನ್ನು ಹಸ್ತಾಂತರಿಸುವ ಪ್ರಕ್ರಿಯೆ ಜಾರಿಯಲ್ಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ:

‘ಎನ್​ಸಿಬಿ ಅಧಿಕಾರಿ ಸಮೀರ್​ ವಾಂಖೆಡೆ ವೈಯಕ್ತಿಕ ದ್ವೇಷಕ್ಕೆ ಆರ್ಯನ್​ ಅರೆಸ್ಟ್​’: ಕಿಶೋರ್​ ತಿವಾರಿ ಆರೋಪ

Zomato: ‘ರಾಷ್ಟ್ರ ಭಾಷೆ’ ಹಿಂದಿ ಬರಲೇಬೇಕೆಂದ ಝೊಮ್ಯಾಟೊ ಎಕ್ಸ್​ಕ್ಯೂಟಿವ್; ಕಂಪೆನಿಗೆ ತಗುಲಿಕೊಂಡ ನೆಟ್ಟಿಗರು

Follow Us
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವಿಶೇಷ ಭೂಸ್ವಾಧೀನಾಧಿಕಾರಿ ಮನೆಯಲ್ಲಿ ಕೋಟಿಗಟ್ಟಲೆ ಆಸ್ತಿ ಪತ್ತೆ!
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ವರಮಹಾಲಕ್ಷ್ಮೀ ಹಬ್ಬದ ಖರೀದಿಗೆ ಮಾರ್ಕೆಟ್‌ನಲ್ಲಿ ಜನಸಾಗರ: ಟ್ರಾಫಿಕ್ ಜಾಮ್
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಈ ರಾಶಿಯವರಿಗೆ ಗಜಕೇಸರಿ ಯೋಗ, ವೃಶ್ಚಿಕಕ್ಕೆ ಧನಯೋಗ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಕಿಸೆಯಿಂದ ಫೋನ್ ಹೊರತೆಗೆಯುತ್ತಿದ್ದಂತೆ ಸ್ಪೋಟ
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ಅಸ್ಸಾಂನಲ್ಲಿ ಆನೆಗಳ ಹಿಂಡು ರೈಲ್ವೆ ಹಳಿ ದಾಟುವವರೆಗೂ ಕಾದು ನಿಂತ ರೈಲು
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ರಾಮನಗರ: ವೃಷಭಾವತಿ‌ ನದಿಯಲ್ಲಿ ಕಂತೆ ಕಂತೆ ನೋಟುಗಳು ಪತ್ತೆ; ವಿಡಿಯೋ ನೋಡಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ
ಗುಂಡೇಟಿಗೆ ಮೂವರು ಬಲಿ ಕೇಸ್​: ಮೃತರ ಮನೆಗೆ ಬಿಜೆಪಿ ಸತ್ಯಶೋಧನಾ ಸಮಿತಿ ಭೇಟಿ