AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅನಗತ್ಯವಾಗಿ ಬಂಧಿಸಬೇಡಿ.. ಕಾರಾಗೃಹದಲ್ಲಿ ಈಗಿರುವ ಕೈದಿಗಳ ಸಂಖ್ಯೆಯನ್ನೂ ಕಡಿಮೆ ಮಾಡಿ: ಸುಪ್ರೀಂಕೋರ್ಟ್  ಆದೇಶ

ಇನ್ನು ಕೆಲವು ಕೈದಿಗಳ ಹಿನ್ನೆಲೆಯನ್ನು ಅವಲೋಕಿಸಿದಾಗ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವೇ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ. ಅಂಥವರನ್ನು ಕಾರಾಗೃಹದಲ್ಲೇ ಇಟ್ಟುಕೊಳ್ಳಬೇಕು. ಆದರೆ ಅವರ ಬಗ್ಗೆಯೂ ಕಾಳಜಿ ವಹಿಸಬೇಕು ಎಂಬುದು ಕೋರ್ಟ್ ಆದೇಶ.

ಅನಗತ್ಯವಾಗಿ ಬಂಧಿಸಬೇಡಿ.. ಕಾರಾಗೃಹದಲ್ಲಿ ಈಗಿರುವ ಕೈದಿಗಳ ಸಂಖ್ಯೆಯನ್ನೂ ಕಡಿಮೆ ಮಾಡಿ: ಸುಪ್ರೀಂಕೋರ್ಟ್  ಆದೇಶ
ಸುಪ್ರೀಂ ಕೋರ್ಟ್​
Follow us
Lakshmi Hegde
|

Updated on:May 08, 2021 | 3:31 PM

ದೆಹಲಿ: ಕೊವಿಡ್​ 19 ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜೈಲಿನಲ್ಲಿ ಕೈದಿಗಳ ಸಂಖ್ಯೆಯನ್ನು ಕಡಿಮೆ ಮಾಡುವುದು ಅನಿವಾರ್ಯ ಎಂಬ ಮಹತ್ವದ ಆದೇಶವನ್ನು ಇಂದು ಸುಪ್ರೀಂಕೋರ್ಟ್ ಹೊರಡಿಸಿದೆ. ಸಾಮಾನ್ಯವಾಗಿ ಕಾರಾಗೃಹಗಳಲ್ಲಿ ಕೈದಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾಧ್ಯವಿಲ್ಲ. ಅಲ್ಲಿ ಒಬ್ಬನಿಗೆ ಬಂದರೆ ಖಂಡಿತವಾಗಿಯೂ ವೇಗವಾಗಿ ಪಸರಿಸುತ್ತದೆ ಎಂಬುದನ್ನು ಗಮನಿಸಿರುವ ಸುಪ್ರೀಂಕೋರ್ಟ್, ಏಳು ವರ್ಷಕ್ಕಿಂತ ಕಡಿಮೆ ಜೈಲು ವಾಸ ಇರುವ ಅಪರಾಧ ಮಾಡಿದ, ಗಂಭೀರ ಸ್ವರೂಪವಲ್ಲದ ಕ್ರೈಂ ಮಾಡಿದ ಆರೋಪಿಗಳನ್ನು ಅನಗತ್ಯವಾಗಿ ಪೊಲೀಸರು ಬಂಧಿಸಬಾರದು. ಹಾಗೇ ಈಗಾಗಲೇ ಕಾರಾಗೃಹದಲ್ಲಿರುವ ಕೈದಿಗಳ ಆರೋಗ್ಯದಲ್ಲಿ ಏರುಪೇರಾದರೆ ಗಮನಿಸಿ, ಅಗತ್ಯ ವೈದ್ಯಕೀಯ ಸಲಹೆ ನೀಡಬೇಕು ಎಂದು ಸೂಚಿಸಿದೆ.

ಇನ್ನು ಜೈಲಿನಲ್ಲಿ ಕೈದಿಗಳ ದಟ್ಟಣೆ ಕಡಿಮೆ ಮಾಡಲು ಆಯಾ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ಉನ್ನತ ಸಮಿತಿಯೊಂದನ್ನು ರಚಿಸಬೇಕು. ಕಾರಾಗೃಹಗಳಲ್ಲಿ ಇರುವ ಬಿಡುಗಡೆಗೆ ಯೋಗ್ಯರಾದ ಕೈದಿಗಳನ್ನು, ಆರೋಗ್ಯ ಸಮಸ್ಯೆ ಇರುವವರನ್ನು ಆದಷ್ಟು ಬೇಗ ಬಿಡುಗಡೆ ಮಾಡಿಸುವ ಕೆಲಸವನ್ನು ಈ ಸಮಿತಿ ಮಾಡಬೇಕು. ಹಾಗೇ ಯಾರಿಗೆ ಜಾಮೀನು ನೀಡಬಹುದು? ಪೆರೋಲ್ ಆಧಾರದಲ್ಲಿ ಯಾರನ್ನು ಕಳಿಸಬಹುದು ಎಂಬಿತ್ಯಾಗಿ ಅಂಶಗಳನ್ನು ಸಮಿತಿಯ ನೇತೃತ್ವದಲ್ಲಿ ನಿರ್ಧರಿಸಬೇಕು. ಆದರೆ ಅದಕ್ಕೂ ಮೊದಲು ಸಮಿತಿ ಸೂಕ್ಷ್ಮವಾಗಿ ಪರಿಶೀಲನೆ ಮಾಡಿಕೊಳ್ಳಬೇಕು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ. ಹಾಗೇ, ಈಗಾಗಲೇ ಪೆರೋಲದ ಪಡೆದು ಹೊರಗೆ ಇರುವ ಕೈದಿಗಳಿಗೆ ಅದರ ಅವಧಿಯನ್ನು ವಿಸ್ತರಿಸುವಂತೆಯೂ ತಿಳಿಸಿದೆ.

ಇನ್ನು ಕೆಲವು ಕೈದಿಗಳ ಹಿನ್ನೆಲೆಯನ್ನು ಅವಲೋಕಿಸಿದಾಗ ಅವರನ್ನು ಜೈಲಿನಿಂದ ಬಿಡುಗಡೆ ಮಾಡಲು ಸಾಧ್ಯವೇ ಇಲ್ಲ ಎಂಬುದು ಸ್ಪಷ್ಟವಾಗುತ್ತದೆ. ಅಂಥವರನ್ನು ಕಾರಾಗೃಹದಲ್ಲೇ ಇಟ್ಟುಕೊಳ್ಳಬೇಕು. ಆದರೆ ಅವರ ಬಗ್ಗೆಯೂ ಕಾಳಜಿ ವಹಿಸಬೇಕು. ಆರೋಗ್ಯ ಸೇವೆ ಸರಿಯಾಗಿ ಒದಗಿಸಬೇಕು ಎಂದು ಹೇಳಿರುವ ಸುಪ್ರೀಂಕೋರ್ಟ್​, ಬರೀ ಕೈದಿಗಳನ್ನಷ್ಟೇ ಅಲ್ಲ, ಜೈಲು ಸಿಬ್ಬಂದಿಯನ್ನೂ ಆಗಾಗ ಪರಿಶೀಲನೆ ಮಾಡಬೇಕು. ಸೋಂಕು ಹರಡದಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ವಹಿಸಬೇಕು. ಕಾರಾಗೃಹಗಳಲ್ಲಿ ಸ್ವಚ್ಛತೆ ಕಾಪಾಡಬೇಕು ಎಂಬಿತ್ಯಾದಿ ಅಂಶಗಳನ್ನು ಕೋರ್ಟ್ ಆದೇಶದಲ್ಲಿ ಉಲ್ಲೇಖಿಸಿದೆ.

ಇದನ್ನೂ ಓದಿ: ಟೀಂ ಇಂಡಿಯಾದ ಯುವ ವೇಗಿ ಕನ್ನಡಿಗ ಪ್ರಸಿದ್ಧ್ ಕೃಷ್ಣಗೆ ಕೊರೊನಾ ಪಾಸಿಟಿವ್; ಸೋಂಕಿಗೆ ತುತ್ತಾದ 6ನೇ ಐಪಿಎಲ್ ಆಟಗಾರ

ತೇಜಸ್ವಿ ಸೂರ್ಯ ಸಂಸದರಾಗಲು ಅನರ್ಹ; ದಿನೇಶ್ ಗುಂಡೂರಾವ್ ವಾಗ್ದಾಳಿ

Dont arrest accused unnecessary supreme Court Order to police department

Published On - 3:28 pm, Sat, 8 May 21

ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನೆಲಮಂಗಲದಲ್ಲಿ ಭಾರೀ ಮಳೆ: ರಾಷ್ಟ್ರೀಯ ಹೆದ್ದಾರಿ ಜಲಾವೃತ, ಟ್ರಾಫಿಕ್ ಜಾಮ್
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ನಾಗೇಶ್ ಮೇಲೆ ಹಲ್ಲೆ ನಡೆಸಿ ಕೊಲೆ ಮಾಡಿದ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಸ್ನೇಹಿತರೊಂದಿಗೆ ಸೇರಿ ತಂದೆಯನ್ನೇ ಕೊಂದ ಮಗ: ಪ್ರಕರಣದ ಅಸಲಿಯತ್ತು ಇಲ್ಲಿದೆ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ಒಪ್ಪಿಕೊಂಡಷ್ಟು ಅನುದಾನವನ್ನು ಕೇಂದ್ರ ಬಿಡುಗಡೆ ಮಾಡಬೇಕು: ಸಿದ್ದರಾಮಯ್ಯ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ರಾಮನ ಹಾಡು ಹಾಡಿ ಮಗುವ ಮಲಗಿಸಿದ ನಟಿ ಹರಿಪ್ರಿಯಾ, ವಿಡಿಯೋ ನೋಡಿ
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ಸಿಂದಗಿ ಡಿಪೋದಲ್ಲಿ ಡೀಸೆಲ್​​ ಸಮಸ್ಯೆ, ನಿಂತಲ್ಲೇ ನಿಂತ ಬಸ್​ಗಳು..!
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ರೌಡಿಶೀಟರ್ ಎಂದ ಮಾತ್ರಕ್ಕೆ ಎಲ್ಲರೂ ರೌಡಿಶೀಟರ್​​ಗಲ್ಲ: ಸಿಟಿ ರವಿ
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಅನೀಸುದ್ದೀನ್ ಹೆಸರಿನ ವ್ಯಕ್ತಿಯಿಂದ ಎಕ್ಸ್ ಹ್ಯಾಂಡಲ್​ನಲ್ಲಿ ಪೋಸ್ಟ್​
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಭಾರತದ ಷರತ್ತುಗಳನ್ನು ಪ್ರಧಾನಿ ಮೋದಿ ಸ್ಪಷ್ಟಪಡಿಸಿದ್ದಾರೆ: ಯದುವೀರ್
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ
ಮೈಸೂರು ಕ್ರಿಕೆಟ್ ಸ್ಟೇಡಿಯಂ ಬಗ್ಗೆ ಸಂಸದ ಯದುವೀರ್ ಮಹತ್ವದ ಮಾಹಿತಿ