AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಇನ್ಮುಂದೆ ರೋಗಿಗಳು, ಸಹೋದ್ಯೋಗಿಗಳ ಜತೆ ಮಲಯಾಳಂನಲ್ಲಿ ಮಾತಾಡಬೇಡಿ..’ -ನರ್ಸ್​ ಸಿಬ್ಬಂದಿಗೆ ಸುತ್ತೋಲೆ ಹೊರಡಿಸಿದ ಸರ್ಕಾರಿ ಆಸ್ಪತ್ರೆ

ದೆಹಲಿಯ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಗೋವಿಂದ್​ ಬಲ್ಲಬ್​ ಪಂತ್​ ಇನ್​​ಸ್ಟಿಟ್ಯೂಟ್​ ಆಫ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಆಸ್ಪತ್ರೆ(GIPMER)ಯಲ್ಲಿ ಹೀಗೆ ನರ್ಸ್​​ಗಳಿಗೆ ಸುತ್ತೋಲೆ ಹೊರಡಿಸಿ, ಮಲಯಾಳಂ ಮಾತನಾಡದಂತೆ ಸೂಚಿಸಿದೆ.

‘ಇನ್ಮುಂದೆ ರೋಗಿಗಳು, ಸಹೋದ್ಯೋಗಿಗಳ ಜತೆ ಮಲಯಾಳಂನಲ್ಲಿ ಮಾತಾಡಬೇಡಿ..’ -ನರ್ಸ್​ ಸಿಬ್ಬಂದಿಗೆ ಸುತ್ತೋಲೆ ಹೊರಡಿಸಿದ ಸರ್ಕಾರಿ ಆಸ್ಪತ್ರೆ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Jun 06, 2021 | 10:48 AM

ಮಲಯಾಳಂನಲ್ಲಿ ಮಾತನಾಡಬೇಡಿ..ಹಿಂದಿ ಅಥವಾ ಇಂಗ್ಲಿಷ್​​ನಲ್ಲೇ ಮಾತನಾಡಿ..ನಮ್ಮಲ್ಲಿ ಅದೆಷ್ಟೋ ಸಹೋದ್ಯೋಗಿಗಳಿಗೆ, ರೋಗಿಗಳಿಗೆ ಮಲಯಾಳಂ ಅರ್ಥ ಆಗೋದಿಲ್ಲ..ಮಾತನಾಡಲೂ ಬರುವುದಿಲ್ಲ ಎಂದು ದೆಹಲಿ ಸರ್ಕಾರಿ ಆಸ್ಪತ್ರೆಯೊಂದು ನರ್ಸಿಂಗ್​ ಸಿಬ್ಬಂದಿಗೆ ಸುತ್ತೋಲೆ ಹೊರಡಿಸಿದೆ. ನೀವು ಮಲಯಾಳಂನಲ್ಲಿ ವ್ಯವಹರಿಸುವುದರಿಂದ ಹಲವು ತರಹದ ಅನನುಕೂಲಗಳು ಆಗುತ್ತಿವೆ. ಇನ್ನು ಮುಂದೆ ಆ ಭಾಷೆಯಲ್ಲಿ ಮಾತನಾಡಿದ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ದೆಹಲಿಯ ಪ್ರಮುಖ ಆಸ್ಪತ್ರೆಗಳಲ್ಲಿ ಒಂದಾದ ಗೋವಿಂದ್​ ಬಲ್ಲಬ್​ ಪಂತ್​ ಇನ್​​ಸ್ಟಿಟ್ಯೂಟ್​ ಆಫ್ ಸ್ನಾತಕೋತ್ತರ ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ಆಸ್ಪತ್ರೆ(GIPMER)ಯಲ್ಲಿ ಹೀಗೆ ನರ್ಸ್​​ಗಳಿಗೆ ಸುತ್ತೋಲೆ ಹೊರಡಿಸಿ, ಮಲಯಾಳಂ ಮಾತನಾಡದಂತೆ ಸೂಚಿಸಿದೆ. ವೈದ್ಯಕೀಯ ಸಿಬ್ಬಂದಿ ಅಥವಾ ರೋಗಿಗಳೊಟ್ಟಿಗೆ ಇಂಗ್ಲಿಷ್​ ಅಥವಾ ಹಿಂದಿಯಲ್ಲೇ ಮಾತನಾಡಬೇಕು. ಅದಾಗದಿದ್ದರೆ ಕಠಿಣ ಕ್ರಮ ಎದುರಿಸಲು ಸಿದ್ಧರಿರಬೇಕು ಎಂದು ಹೇಳಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಜಿ.ಬಿ.ಪಂತ್​​​ ನರ್ಸ್​​​ ಸಂಘಟನೆಯ ಅಧ್ಯಕ್ಷ ಲೀಲಾಧರ್​ ರಾಮಚಂದಾನಿ, ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬರು ಹಿರಿಯ ಆರೋಗ್ಯ ಅಧಿಕಾರಿಯೊಬ್ಬರಿಗೆ ನೀಡಿದ ದೂರಿನ ಅನ್ವಯ ಪ್ರಸ್ತುತ ಸೂಚನೆ ಹೊರಡಿಸಲಾಗಿದೆ. ಆದರೆ ಸುತ್ತೋಲೆಯಲ್ಲಿ ಬಳಸಿದ ಪದಗಳ ಬಗ್ಗೆ ನಮ್ಮ ಒಕ್ಕೂಟದ ವಿರೋಧವಿದೆ ಎಂದೂ ಹೇಳಿದ್ದಾರೆ. ದೆಹಲಿ ನರ್ಸಸ್​ ಫೆಡರೇಶನ್​ ಪ್ರಧಾನ ಕಾರ್ಯದರ್ಶಿಯೂ ಆಗಿರುವ ರಾಮ್​ಚಂದಾನಿ, ಈ ಸುತ್ತೋಲೆಯಲ್ಲಿ ಮಲಯಾಳಂ ಹೆಸರನ್ನು ಸೇರಿಸಲಾಗಿದೆ. ಅನೇಕರು ಇದನ್ನು ಅಪರಾಧವೆಂಬಂತೆ ಭಾವಿಸುತ್ತಾರೆ. ಒಬ್ಬ ರೋಗಿಯ ದೂರಿನಿಂದ ಹೀಗಾಗಿದೆ. ಅದನ್ನು ಹೊರತುಪಡಿಸಿದರೆ ನರ್ಸ್​​​ಗಳು ಮತ್ತು ಆಡಳಿತದ ಮಧ್ಯೆ ಯಾವುದೇ ತೊಂದರೆ ಇಲ್ಲ ಎಂದು ಹೇಳಿದ್ದಾರೆ. ಈ ಆಸ್ಪತ್ರೆಯಲ್ಲಿ ಅನೇಕರು ಕೇರಳದ ನರ್ಸ್​​ಗಳೇ ಇದ್ದು, ಅವರ ಭಾಷೆ ಮಲಯಾಳಂ ಆಗಿದೆ. ಹೀಗಾಗಿ ಅವರು ಅದೇ ಭಾಷೆಯಲ್ಲಿ ಮಾತನಾಡುತ್ತಾರೆ ಎಂದೂ ತಿಳಿಸಿದ್ದಾರೆ.

ಇದನ್ನೂ ಓದಿ: ವರ್ಕ್​ ಫ್ರಂ ಹೋಮ್​ ನಡುವೆ ಕಣ್ಣಿನ ಆರೋಗ್ಯ ಕಾಪಾಡಿಕೊಳ್ಳುವ ಕೆಲವು ಸಲಹೆಗಳು

ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಹತ್ತು ಸಾವಿರ ಜನ ಕೂತು ವೀಕ್ಷಿಸಲು ಗ್ಯಾಲರಿಗಳ ವ್ಯವಸ್ಥೆ: ಶಿವಕುಮಾರ್
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬೆಂಗಳೂರಿನಲ್ಲಿ ಸುರಂಗ ಮಾರ್ಗದ ಬಗ್ಗೆ ಮಹತ್ವದ ಅಪ್ಡೇಟ್​ ನೀಡಿದ ಡಿಕೆಶಿ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಬಸವಣ್ಣನವರನ್ನು ಟೀಕಿಸುವ ಬಸನಗೌಡ ಯತ್ನಾಳ್ ಒಬ್ಬ ಅರೆಹುಚ್ಚ: ರೇಣುಕಾಚಾರ್ಯ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಹಠಾವ್ ಬಿಜೆಪಿ ಬಚಾವ್ ಅನ್ನೋದು ವಿಪಕ್ಷ ನಾಯಕರ ಅಜೆಂಡಾ ಆಗಿದೆ: ಖರ್ಗೆ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಖರ್ಗೆ ಕುಟುಂಬ ನನ್ನ ವಿರುದ್ಧ ನಡೆಸುತ್ತಿರುವ ಪಿತೂರಿ ಗೊತ್ತಿದೆ: ಚಲವಾದಿ
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮದ್ವೆಯಲ್ಲಿ ಡಾನ್ಸ್ ಮಾಡುತ್ತಿರುವಾಗಲೇ ಕುಸಿದುಬಿದ್ದು ಯುವಕ ಸಾವು
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಮುಡಾವನ್ನು ಎಂಡಿಎ ಆಗಿ ಪರಿವರ್ತಿಸಿದ್ದಕ್ಕೆ ಸಿಂಎಂರನ್ನು ಶ್ವಾಘಿಸಿದ ಜಿಟಿಡಿ
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
ಸಿಂಧೂ ಜಲ ಒಪ್ಪಂದ ರದ್ದತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ಪಾಕಿಸ್ತಾನಿ ರೈತರು
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
16 ವರ್ಷದ ಬಳಿಕ ವಾಡಿಕೆಗಿಂತ ಮೊದಲೇ ಮುಂಗಾರು ಮಳೆ..ಏನು ನಿನ್ನ ಲೀಲೆ...!
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ
ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ: ಹವಾಮಾನ ಇಲಾಖೆ