AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಲ್ಲಿ ಪಾಕಿಸ್ತಾನ ಸೃಷ್ಟಿಸಬೇಡಿ: ನಿತೀಶ್ ಕುಮಾರ್ ವಿರುದ್ಧ ಗುಡುಗಿದ ಬಿಜೆಪಿ

ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್ ಕುಮಾರ್ ಬಿಜೆಪಿ ಪ್ರಚಾರ ಮಾತ್ರ ಮಾಡುತ್ತಿದ್ದು ಬಡ ರಾಜ್ಯಗಳಿಗಾಗಿ ಕೆಲಸ ಮಾಡುವುದು ಕಡಿಮೆ. ನಮ್ಮ ಬೇಡಿಕೆಗಳನ್ನು ಅಂಗೀಕರಿಸಿದ್ದರೆ, ರಾಜ್ಯವು ವೇಗವಾಗಿ

ಬಿಹಾರದಲ್ಲಿ ಪಾಕಿಸ್ತಾನ ಸೃಷ್ಟಿಸಬೇಡಿ: ನಿತೀಶ್ ಕುಮಾರ್ ವಿರುದ್ಧ ಗುಡುಗಿದ ಬಿಜೆಪಿ
ಬಿಹಾರ ಮುಖ್ಯಮಂತ್ರಿ ನಿತೀಶ್​ ಕುಮಾರ್​
TV9 Web
| Edited By: |

Updated on: Nov 04, 2022 | 2:51 PM

Share

ಶಾಲೆಗಳಲ್ಲಿ ಉರ್ದುವನ್ನು (Urdu) ಮರುಸ್ಥಾಪಿಸುವ ಉದ್ದೇಶ ಹೊಂದಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Nitish Kumar) ವಿರುದ್ಧ ಬಿಜೆಪಿ(BJP) ಟೀಕೆ ಮಾಡಿದೆ.ನಿತೀಶ್ ಕುಮಾರ್ ತಮ್ಮ ಪಕ್ಷದೊಂದಿಗೆ ಮೈತ್ರಿ ಕಡಿದುಕೊಂಡ ನಂತರ ಅವರು ‘ಬಿಹಾರದಲ್ಲಿ ಪಾಕಿಸ್ತಾನವನ್ನು ಸೃಷ್ಟಿಸಿದ್ದಾರೆ’ ಎಂದು ಬಿಹಾರದ ಬಿಜೆಪಿ ಘಟಕ ಆರೋಪಿಸಿದೆ. ಪ್ರತಿ ಶಾಲೆಯಲ್ಲಿ ಉರ್ದು ಶಿಕ್ಷಕರನ್ನು ಪುನಃಸ್ಥಾಪಿಸುವುದು ಸಿಎಂ ನಿತೀಶ್ ಕುಮಾರ್ ಅವರ ಉದ್ದೇಶವಾಗಿದೆ. ಬಿಹಾರದ ಅಸೆಂಬ್ಲಿಯಲ್ಲಿ ಉರ್ದು ಬಲ್ಲವರನ್ನು ನೇಮಿಸಿಕೊಳ್ಳುವ ಅಗತ್ಯವೇನಿದೆ? ಈಗ ಪ್ರತಿ ಪೊಲೀಸ್ ಠಾಣೆಗಳಲ್ಲಿ ಉರ್ದು ಭಾಷಾಂತರಕಾರರನ್ನು ನೇಮಿಸಲಾಗುವುದು ಎಂದು ರಾಜ್ಯ ಬಿಜೆಪಿ ವಕ್ತಾರ ನಿಖಿಲ್ ಆನಂದ್ ಹೇಳಿದ್ದಾರೆ. “ಬಿಹಾರದ ಮುಸ್ಲಿಂ ಪ್ರಾಬಲ್ಯದ ಜಿಲ್ಲೆಗಳಲ್ಲಿ ದಲಿತರು, ಒಬಿಸಿಗಳು ಮತ್ತು ಇಬಿಸಿಗಳ ಜೀವನ ಹಾಳಾಗುತ್ತದೆ..ಸಹೋದರ, ಬಿಹಾರದಲ್ಲಿ ಪಾಕಿಸ್ತಾನವನ್ನು ಸೃಷ್ಟಿಸಬೇಡಿ, ನೀವೇ ಪಾಕಿಸ್ತಾನಕ್ಕೆ ಹೋಗಿ,” ಎಂದು ಅವರು ಹೇಳಿದ್ದಾರೆ.

ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್ ಕುಮಾರ್ ಬಿಜೆಪಿ ಪ್ರಚಾರ ಮಾತ್ರ ಮಾಡುತ್ತಿದ್ದು ಬಡ ರಾಜ್ಯಗಳಿಗಾಗಿ ಕೆಲಸ ಮಾಡುವುದು ಕಡಿಮೆ. ನಮ್ಮ ಬೇಡಿಕೆಗಳನ್ನು ಅಂಗೀಕರಿಸಿದ್ದರೆ, ರಾಜ್ಯವು ವೇಗವಾಗಿ ಅಭಿವೃದ್ಧಿ ಹೊಂದುತ್ತಿತ್ತು. ಎಲ್ಲ ಬಡ ರಾಜ್ಯಗಳು ಪಡೆಯಬೇಕಾಗಿರುವ ಬಿಹಾರಕ್ಕೆ ವಿಶೇಷ ಸ್ಥಾನಮಾನದ ದೀರ್ಘಾವಧಿಯ ಬೇಡಿಕೆಯನ್ನು ಸಹ ಸ್ವೀಕರಿಸಲಾಗಿಲ್ಲ ಎಂದು ಅವರು ಹೇಳಿದ್ದಾರೆ.

ಗರೀಬ್ ಗುರ್ಬಾ ರಾಜ್ಯೋಂ ಮೇ ಕುಛ್ ಹೋ ರಹಾ ಹೈ? ಜೂಟೇ ಪ್ರಚಾರ್ ಪ್ರಸಾರ ಮೇ ಲಗಾ ರಹತಾ ಹೈ (ಬಡ ರಾಜ್ಯಗಳಲ್ಲಿ ಏನಾದರೂ ಮಾಡಲಾಗುತ್ತಿದೆಯೇ? ಪ್ರಚಾರ ಮಾತ್ರ ನಡೆಯುತ್ತಿದೆ) ”ಎಂದು ನಿತೀಶ್ ಕುಮಾರ್ ಹೇಳಿದ್ದಾರೆ

ಈ ವರ್ಷದ ಆಗಸ್ಟ್‌ನಲ್ಲಿ ಎನ್‌ಡಿಎ ಮೈತ್ರಿಕೂಟದಿಂದ ಹೊರಬಂದ ನಂತರ ಬಿಹಾರದ ಅತಿ ಹೆಚ್ಚು ಕಾಲ ಮುಖ್ಯಮಂತ್ರಿಯಾಗಿದ್ದವರು ವಿಶೇಷ ಸ್ಥಾನಮಾನ ಬೇಡಿಕೆಯನ್ನು ಎತ್ತಿದ್ದು ಇದೇ ಮೊದಲಲ್ಲ. ಸೆಪ್ಟೆಂಬರ್‌ನಲ್ಲಿ, ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡದಿದ್ದಕ್ಕಾಗಿ ಅವರ ಪಕ್ಷವು ಕೇಂದ್ರದ ಬಿಜೆಪಿಯ ಮೇಲೆ ದಾಳಿ ನಡೆಸಿತ್ತು ಎಲ್ಲಾ ರಾಜ್ಯಗಳಿಗೂ ವಿಶೇಷ ಸ್ಥಾನಮಾನ ನೀಡಬೇಕು ಎಂಬ ನಮ್ಮ ಬೇಡಿಕೆ ಈಡೇರದ ಕಾರಣ ನಾವು ಕಂಗಾಲಾಗಿದ್ದೇವೆ ಎಂದು ಜೆಡಿಯು ನಾಯಕ ಟೀಕಿಸಿದ್ದಾರೆ.

2024 ರ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಎದುರಿಸಲು ಏಕೀಕೃತ ವಿರೋಧ ಪಕ್ಷಕ್ಕೆ ಕುಮಾರ್ ಶ್ರಮಿಸುತ್ತಿದ್ದಾರೆ. ಕೇಂದ್ರದಲ್ಲಿ ಮುಂದಿನ ಸರ್ಕಾರ ರಚಿಸಲು ವಿರೋಧ ಪಕ್ಷಗಳು ಯಶಸ್ವಿಯಾದರೆ ಬಿಹಾರ ಸೇರಿದಂತೆ ಎಲ್ಲಾ ಹಿಂದುಳಿದ ರಾಜ್ಯಗಳಿಗೆ ವಿಶೇಷ ಸ್ಥಾನಮಾನ ಸಿಗಲಿದೆ ಎಂದು ಅವರು ಘೋಷಿಸಿದ್ದಾರೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!