AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇವಿಎಂ ಡೇಟಾ ಡಿಲೀಟ್ ಮಾಡಬೇಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಆದೇಶ

ಚುನಾವಣಾ ಮತಯಂತ್ರಗಳ ಡೇಟಾವನ್ನು ಅಳಿಸಬೇಡಿ ಅಥವಾ ಮರುಲೋಡ್ ಮಾಡಬೇಡಿ ಎಂದು ಇವಿಎಂ ಪರಿಶೀಲನೆಗಾಗಿ ಸಲ್ಲಿಸಲಾದ ಅರ್ಜಿಗಳ ಕುರಿತು ಸುಪ್ರೀಂ ಕೋರ್ಟ್ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಮೈಕ್ರೋ-ಕಂಟ್ರೋಲರ್‌ಗಳು ಮತ್ತು ಎಲೆಕ್ಟ್ರಾನಿಕ್ ಮತ ಯಂತ್ರಗಳ (ಇವಿಎಂ) ಎಸ್‌ಎಲ್‌ಯು ಅನ್ನು ಪರಿಶೀಲಿಸಲು ಚುನಾವಣಾ ಸಮಿತಿಗೆ ನಿರ್ದೇಶನ ನೀಡುವಂತೆ ಅರ್ಜಿಗಳು ಕೋರಿತ್ತು.

ಇವಿಎಂ ಡೇಟಾ ಡಿಲೀಟ್ ಮಾಡಬೇಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಆದೇಶ
Supreme Court
ಸುಷ್ಮಾ ಚಕ್ರೆ
|

Updated on: Feb 11, 2025 | 9:11 PM

Share

ನವದೆಹಲಿ: ಇವಿಎಂಗಳಲ್ಲಿ ಚಿಹ್ನೆ ಲೋಡಿಂಗ್ ಘಟಕಗಳನ್ನು ಪರಿಶೀಲಿಸಲು ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಅಳವಡಿಸಿಕೊಂಡ ಕಾರ್ಯವಿಧಾನವನ್ನು ವಿವರಿಸಲು ಸುಪ್ರೀಂ ಕೋರ್ಟ್ ಇಂದು ಭಾರತೀಯ ಚುನಾವಣಾ ಆಯೋಗಕ್ಕೆ ಸೂಚಿಸಿದೆ. ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಮತ್ತು ನ್ಯಾಯಮೂರ್ತಿ ದೀಪಂಕರ್ ದತ್ತ ಅವರನ್ನೊಳಗೊಂಡ ವಿಶೇಷ ನ್ಯಾಯಪೀಠವು ಪರಿಶೀಲನಾ ಪ್ರಕ್ರಿಯೆಯ ಸಮಯದಲ್ಲಿ ಡೇಟಾವನ್ನು ಡಿಲೀಟ್ ಮಾಡುವುದನ್ನು ಅಥವಾ ಮರುಲೋಡ್ ಮಾಡಬೇಡಿ ಎಂದು ಚುನಾವಣಾ ಆಯೋಗಕ್ಕೆ ಸೂಚಿಸಿದೆ.

ಚುನಾವಣೆಯ ಮತ ಎಣಿಕೆ ಮುಗಿದ ಬಳಿಕ ಇವಿಎಂಗಳಿಂದ ಡೇಟಾವನ್ನು ಡಿಲೀಟ್ ಮಾಡಬಾರದು ಎಂದು ಕೋರಿ ಸಲ್ಲಿಸಲಾದ ಅರ್ಜಿಯ ಬಗ್ಗೆ ಸುಪ್ರೀಂ ಕೋರ್ಟ್ ಇಂದು ವಿಚಾರಣೆ ನಡೆಸಿತು. ಈ ವೇಳೆ ಇವಿಎಂನಿಂದ ಯಾವುದೇ ಡೇಟಾವನ್ನು ಡಿಲೀಟ್ ಮಾಡಬೇಡಿ ಎಂದು ಕೋರ್ಟ್ ಸೂಚಿಸಿದೆ. ಚುನಾವಣೆ ಬಳಿಕ ಇವಿಎಂ ಮೆಮೊರಿ ಮತ್ತು ಮೈಕ್ರೋಕಂಟ್ರೋಲರ್ ಬರ್ನ್ ಮಾಡುವ ಪ್ರಕ್ರಿಯೆಯ ಕುರಿತು ಚುನಾವಣಾ ಆಯೋಗ ಸುಪ್ರೀಂ ಕೋರ್ಟ್​ಗೆ ಮಾಹಿತಿ ನೀಡಬೇಕೆಂದು ಸೂಚನೆ ನೀಡಲಾಗಿದೆ.

ಇದನ್ನೂ ಓದಿ: ಮಹಾರಾಷ್ಟ್ರದಲ್ಲಿ ಇವಿಎಂ ಮಂದಿರ ನಿರ್ಮಿಸಬೇಕು; ಶಿವಸೇನೆ ನಾಯಕ ಸಂಜಯ್ ರಾವತ್ ಲೇವಡಿ

ಒಂದು ಇವಿಎಂ ಅನ್ನು ಪರಿಶೀಲಿಸಲು 40,000 ರೂ. ಶುಲ್ಕ ವಿಧಿಸಲಾಗಿದೆ ಎಂದು ಚುನಾವಣಾ ಆಯೋಗಕ್ಕೆ ತಿಳಿಸಿದ ನಂತರ ಪರಿಶೀಲನೆಯ ವೆಚ್ಚದ ಬಗ್ಗೆಯೂ ನ್ಯಾಯಪೀಠವು ಕಳವಳ ವ್ಯಕ್ತಪಡಿಸಿತು. 40,000 ರೂ. ವೆಚ್ಚವನ್ನು ಕಡಿಮೆ ಮಾಡಿ, ಅದು ತುಂಬಾ ಹೆಚ್ಚಾಗಿದೆ ಎಂದು ನ್ಯಾಯಪೀಠ ಹೇಳಿದೆ.

ಕಳೆದ ವರ್ಷ ಮೇ 1ರಿಂದ ಚಿಹ್ನೆ ಲೋಡಿಂಗ್ ಘಟಕಗಳನ್ನು ಸೀಲ್ ಮಾಡಿ ಕಂಟೇನರ್‌ನಲ್ಲಿ ಭದ್ರಪಡಿಸಬೇಕು. ಚುನಾವಣಾ ಫಲಿತಾಂಶಗಳ ಘೋಷಣೆಯ ನಂತರ 45 ದಿನಗಳವರೆಗೂ ಇವಿಎಂಗಳೊಂದಿಗೆ ಸ್ಟ್ರಾಂಗ್ ರೂಂನಲ್ಲಿ ಸಂಗ್ರಹಿಸಬೇಕು ಎಂದು ಸುಪ್ರೀಂ ಕೋರ್ಟ್ ನಿರ್ದೇಶಿಸಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಜಿಲ್ಲೆಗಳ ಸಮಸ್ಯೆ ಪಟ್ಟಿ ಮಾಡಿ 25 ದಿನಗಳ ಒಳಗೆ ಕೊಡಿ: ಡಿಕೆಶಿ ಸೂಚನೆ
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಸಿಎಂ ಆದ 2ನೇ ದಿನಕ್ಕೆ ರೌಡಿಗಳ ವಿರುದ್ಧ ಸಮರ ಸಾರಿದ ಡಿಕೆ ಶಿವಕುಮಾರ್!
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ಪಾರದರ್ಶಕವಾಗಿ ಕೆಲಸ ಮಾಡಲು ಅಧಿಕಾರಿಗಳಿಗೆ ಡಿಕೆಶಿ ಖಡಕ್ ಸೂಚನೆ​​
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ರೋಗಿ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಕ್ಯಾಂಟರ್​​ಗೆ ಡಿಕ್ಕಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ಪೆದ್ದಿ ರಿಲೀಸ್​​ಗೂ ಮೊದಲು ಕಾಲ್ನಡಿಗೆಯಲ್ಲಿ ತಿರುಪತಿಗೆ ಬಂದ ಜಾನ್ವಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ವಿದ್ಯಾರ್ಥಿ ಜೀವನದಲ್ಲಿ ಇವುಗಳಿದ್ದರೆ ಉದ್ಧಾರ ಗ್ಯಾರಂಟಿ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಸಾಯಿಬಾಬಾ ನೆನೆದರೆ ಕಷ್ಟಗಳೆಲ್ಲಾ ನಿವಾರಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ