AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

DY Chandrachud: ನನ್ನ ಅಧಿಕಾರದಲ್ಲಿ ಚೆಲ್ಲಾಟವಾಡಬೇಡಿ, ವಕೀಲರಿಗೆ ಖಡಕ್ ಉತ್ತರ ನೀಡಿದ ಸಿಜೆಐ ಡಿ.ವೈ ಚಂದ್ರಚೂಡ್

supreme court: ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್​​ ನನ್ನ ಅಧಿಕಾರದಲ್ಲಿ ಚೆಲ್ಲಾಟವಾಡಬೇಡಿ ಎಂದು ಹೇಳಿದ್ದಾರೆ. ನ್ಯಾಯಲಯಕ್ಕೆ ಒಂದು ವ್ಯವಸ್ಥೆ ಇದೆ ಎಂದು ಹೇಳಿದ್ದಾರೆ.

DY Chandrachud: ನನ್ನ ಅಧಿಕಾರದಲ್ಲಿ ಚೆಲ್ಲಾಟವಾಡಬೇಡಿ, ವಕೀಲರಿಗೆ ಖಡಕ್ ಉತ್ತರ ನೀಡಿದ ಸಿಜೆಐ ಡಿ.ವೈ ಚಂದ್ರಚೂಡ್
ಅಕ್ಷಯ್​ ಪಲ್ಲಮಜಲು​​
|

Updated on:Apr 11, 2023 | 2:24 PM

Share

ದೆಹಲಿ: ಸುಪ್ರೀಂ ಕೋರ್ಟ್​​ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ಅವರಿಗೆ ವಕೀಲರೊಬ್ಬರು ವಿಚಾರಣೆ ದಿನಾಂಕ ನೀಡಿರುವ ಬಗ್ಗೆ ಗೊಂದಲ ಸೃಷ್ಟಿಸಿದ್ದಾರೆ, ಈ ಕಾರಣಕ್ಕೆ ಡಿ.ವೈ ಚಂದ್ರಚೂಡ್ ಕೋಪಗೊಂಡು ವಕೀಲರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮಂಗಳವಾರ ಬೆಳಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಪ್ರಕರಣಗಳ ಪ್ರಸ್ತಾಪದ ಸಂದರ್ಭದಲ್ಲಿ, ವಕೀಲರೊಬ್ಬರು ತಮ್ಮ ವಿಚಾರಣೆಯ ದಿನಾಂಕವನ್ನು ಏ.14ಕ್ಕೆ ನೀಡಬೇಕು ಎಂದು ಇನ್ನೊಂದು ಪೀಠಕ್ಕೆ ಮನವಿ ಮಾಡಿದ್ದಾರೆ, ಆದರೆ ಈ ಮೊದಲೇ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ ಚಂದ್ರಚೂಡ್ ವಿಚಾರಣೆಗೆ ದಿನಾಂಕ ನೀಡಿದ್ದಾರೆ. ಪ್ರಕರಣದ ಬಗ್ಗೆ ಈಗಾಗಲೇ ವಿಚಾರಣೆಯನ್ನು ಪಟ್ಟಿ ಮಾಡಲಾಗಿದೆ. ಆದರೆ ವಕೀಲರು ತಮ್ಮ ವಿಚಾರಣೆ ಬೇಗ ಮುಗಿಸಲು ಏ. 14ಕ್ಕೆ ವಿಚಾರಣೆ ಮಾಡುವಂತೆ ಇನ್ನೊಂದು ಪೀಠಕ್ಕೆ ಮನವಿ ಸಲ್ಲಿಸಿದ್ದಾರೆ. ಈ ಕಾರಣಕ್ಕೆ ಕೋಪಗೊಂಡ ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನನ್ನ ಅಧಿಕಾರದಲ್ಲಿ ಚೆಲ್ಲಾಟವಾಡಬೇಡಿ ಎಂದು ಹೇಳಿದ್ದಾರೆ. ನ್ಯಾಯಲಯಕ್ಕೆ ಒಂದು ವ್ಯವಸ್ಥೆ ಇದೆ, ಆ ಮೂಲಕನೇ ನಡೆದುಕೊಳ್ಳಿ, ನನಗೆ ಗೊಂದಲ ಮಾಡಬೇಡಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ಈ ಮೊದಲೇ ನೀವು ದಿನಾಂಕವನ್ನು ಪಡೆಯಬೇಕಿತ್ತು. ಈಗಾಗಲೇ ನಾನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ, ವಿಚಾರಣೆಯನ್ನು ಪಟ್ಟಿ ಮಾಡಲಾಗಿದೆ. ನೀವು ಮತ್ತೊಂದು ಪೀಠದ ಮುಂದೆ ಪ್ರಕರಣವನ್ನು ಉಲ್ಲೇಖಿಸಲು ಪ್ರಯತ್ನಿಸಿದ್ದೀರಾ? ಇದು ಸರಿಯೇ ಎಂದು ವಕೀಲರನ್ನು ಪ್ರಶ್ನೆ ಮಾಡಿದ್ದಾರೆ.

ನಾನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ಟಿ ಮಾಡಿದ್ದಾನೆ, ಜತೆಗೆ ದಿನಾಂಕವನ್ನು ನೀಡಲಾಗಿದೆ ಏ.14ಕ್ಕೆ ವಿಚಾರಣೆಗೆ ಬರಲಿದೆ. ಬೇರೆ ಪೀಠಕ್ಕೆ ಪ್ರಸ್ತಾಪಿಸಬೇಡಿ ಮತ್ತು ಇನ್ನೂ ಮುಂದೆ ಮುಂಚಿತವಾಗಿ ದಿನಾಂಕವನ್ನು ಪಡೆದುಕೊಳ್ಳಿ ಎಂದು ಸಿಜೆಐ ಹೇಳಿದರು. ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ವಕೀಲರು ಉತ್ತರಿಸಿದ್ದಾರೆ.

ಇದನ್ನೂ ಓದಿ: BBC Documentary Row: ಬಿಬಿಸಿ ಸಾಕ್ಷ್ಯಚಿತ್ರ ನಿಷೇಧ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಗೆ ಸುಪ್ರೀಂ ಸಮ್ಮತಿ; ಫೆ. 6ಕ್ಕೆ ವಿಚಾರಣೆ

ನಿಮ್ಮನ್ನು ಸಂಪೂರ್ಣವಾಗಿ ಕ್ಷಮಿಸಲಾಗಿದೆ. ಆದರೆ ನನ್ನನ್ನು ಕ್ಷಮಿಸಿ. ನಾನು ಏ. 17ಕ್ಕೆ ದಿನಾಂಕ ನೀಡಿದ್ದೇನೆ, ಏ.17ಕ್ಕೆ ಅಂದರೆ 17ಕ್ಕೆ, ನನ್ನ ಅಧಿಕಾರದೊಂದಿಗೆ ಚೆಲ್ಲಾಟವಾಡಬೇಡಿ ಎಂದು ಸಿಜೆಐ ಖಡಕ್​ ಮಾತಿನಲ್ಲಿ ತಿಳಿಸಿದ್ದಾರೆ. ಮುಖ್ಯ ನ್ಯಾಯಾಧೀಶರ ನ್ಯಾಯಾಲಯವು ಮಾರ್ಚ್‌ನಲ್ಲಿ ಒಂದು ನಿರ್ದಿಷ್ಟ ದಿನಾಂಕದಂದು ಮಂಡಳಿಯಲ್ಲಿ ಮೊದಲ ಪ್ರಕರಣಕ್ಕೆ ಸಂಬಂಧಸಿದಂತೆ ಪಟ್ಟಿಯನ್ನು ಮಾಡಿರುತ್ತದೆ ಎಂದು ಹೇಳಿದರು. ಮುಖ್ಯ ನ್ಯಾಯಾಧೀಶರಿಗೆ ಬೆದರಿಕೆ ಹಾಕಬೇಡಿ. ನಿಮ್ಮಿಂದ ನಾನು ಹೆದರುವುದಿಲ್ಲ ಎಂದು ಸಿಜೆಐ ವಕೀಲರಿಗೆ ಹೇಳಿದ್ದರು.

Published On - 1:52 pm, Tue, 11 April 23

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ