AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣ ಕಳೆದುಕೊಳ್ಳಬೇಡಿ, ನೀಟ್ ರದ್ದು ಮಾಡಲಾಗುವುದು: ವಿದ್ಯಾರ್ಥಿಗಳಿಗೆ ಭರವಸೆ ನೀಡಿದ ತಮಿಳುನಾಡು ಸಿಎಂ ಸ್ಟಾಲಿನ್

ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಗರದ ಕ್ರೋಮ್‌ಪೇಟೆಯ ವಿದ್ಯಾರ್ಥಿ, ವೈದ್ಯಕೀಯ ಆಕಾಂಕ್ಷಿ ಜಗದೀಶ್ವರನ್ ಅವರ ಇತ್ತೀಚಿನ ನಿಧನದ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಜಗದೀಶ್ವರನ್ ಅವರ ತಂದೆ ಸೆಲ್ವಶೇಖರ್ ಸಹ ಮರುದಿನ ಆತ್ಮಹತ್ಯೆ ಮಾಡಿಕೊಂಡರು. ಅವರ ಕುಟುಂಬ ಮತ್ತು ಸ್ನೇಹಿತರಿಗೆ ಹೇಗೆ ಸಾಂತ್ವನ ಹೇಳಬೇಕೆಂದು ನಾನು ಗೊಂದಲದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಸ್ಟಾಲಿನ್ ಹೇಳಿದರು.

ಪ್ರಾಣ ಕಳೆದುಕೊಳ್ಳಬೇಡಿ, ನೀಟ್ ರದ್ದು ಮಾಡಲಾಗುವುದು: ವಿದ್ಯಾರ್ಥಿಗಳಿಗೆ ಭರವಸೆ ನೀಡಿದ ತಮಿಳುನಾಡು ಸಿಎಂ ಸ್ಟಾಲಿನ್
ಎಂ ಕೆ ಸ್ಟಾಲಿನ್
ರಶ್ಮಿ ಕಲ್ಲಕಟ್ಟ
|

Updated on:Aug 14, 2023 | 5:26 PM

Share

ಚೆನ್ನೈ ಆಗಸ್ಟ್ 14: ವೈದ್ಯಕೀಯ ಆಕಾಂಕ್ಷಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ತಮಿಳುನಾಡು (Tamil Nadu) ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ (MK Stalin) ಅವರು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (NEET) ಆಕಾಂಕ್ಷಿಗಳು ಈ ರೀತಿಯ ಯಾವುದೇ ನಿರ್ಧಾರ ಕೈಗೊಳ್ಳದೆ ಆತ್ಮಸ್ಥೈರ್ಯದಿಂದ ಜೀವನವನ್ನು ಎದುರಿಸುವಂತೆ ಸೋಮವಾರ ಮನವಿ ಮಾಡಿದ್ದಾರೆ. ಕೆಲವೇ ತಿಂಗಳುಗಳಲ್ಲಿ ರಾಜಕೀಯ ಬದಲಾವಣೆಯಾದಾಗ NEET ಅಡೆತಡೆಗಳು ಕಮ್ಮಿಯಾಗುತ್ತವೆ ಎಂದು ಸ್ಟಾಲಿನ್ ಹೇಳಿದ್ದಾರೆ. ಆಗ,‘ನಾನು ಸಹಿ ಹಾಕುವುದಿಲ್ಲ’ ಎಂದು ಹೇಳುವವರೆಲ್ಲ ಕಾಣೆಯಾಗುತ್ತಾರೆ ಎಂದು ತಮಿಳುನಾಡು ರಾಜ್ಯಪಾಲ ಆರ್.ಎನ್.ರವಿ ಅವರು ರಾಜ್ಯದ ನೀಟ್ ವಿರೋಧಿ ಮಸೂದೆ ವಿರುದ್ಧ ಮಾಡಿದ ಹೇಳಿಕೆಯನ್ನು ಉಲ್ಲೇಖಿಸಿ ಮುಖ್ಯಮಂತ್ರಿ ಹೇಳಿದರು.

ವಿದ್ಯಾರ್ಥಿ ಜಗದೀಶ್ವರನ್ ಮತ್ತು ಅವರ ತಂದೆ ಸೆಲ್ವಶೇಖರ್ ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ನಿಧನಕ್ಕೆ ನಾನು ನನ್ನ ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತೇನೆ. ನೀಟ್ ವಿಷಯದಲ್ಲಿ ಅವರ ಸಾವು ಕೊನೆಯ ಪ್ರಕರಣ ಆಗಿರಲಿ ಎಂದು ಸ್ಟಾಲಿನ್ ಹೇಳಿದ್ದಾರೆ.

ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದ ನಗರದ ಕ್ರೋಮ್‌ಪೇಟೆಯ ವಿದ್ಯಾರ್ಥಿ, ವೈದ್ಯಕೀಯ ಆಕಾಂಕ್ಷಿ ಜಗದೀಶ್ವರನ್ ಅವರ ಇತ್ತೀಚಿನ ನಿಧನದ ಬಗ್ಗೆ ಆಘಾತ ವ್ಯಕ್ತಪಡಿಸಿದ ಮುಖ್ಯಮಂತ್ರಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಜಗದೀಶ್ವರನ್ ಅವರ ತಂದೆ ಸೆಲ್ವಶೇಖರ್ ಸಹ ಮರುದಿನ ಆತ್ಮಹತ್ಯೆ ಮಾಡಿಕೊಂಡರು, ಅವರ ಕುಟುಂಬ ಮತ್ತು ಸ್ನೇಹಿತರಿಗೆ ಹೇಗೆ ಸಾಂತ್ವನ ಹೇಳಬೇಕೆಂದು ನಾನು ಗೊಂದಲದಲ್ಲಿದ್ದೇನೆ ಎಂದು ಮುಖ್ಯಮಂತ್ರಿ ಹೇಳಿದರು.

ಚೆನ್ನಾಗಿ ಓದುತ್ತಿದ್ದ ಮಗನನ್ನು ವೈದ್ಯನನ್ನಾಗಿ ನೋಡಬೇಕೆಂದು ಅವನ ಹೆತ್ತವರು ಬಯಸಿದ್ದರು. ಆದರೆ ಜಗದೀಶ್ವರನ್ “ನೀಟ್ ಪರೀಕ್ಷೆಯ ಬಲಿಪೀಠದ ಮೇಲೆ ಬಲಿಯಾದವರ ಪಟ್ಟಿಗೆ ಸೇರಿಕೊಂಡಿದ್ದಾರೆ, ಇದು ಅತ್ಯಂತ ಭಯಾನಕ ಘಟನೆಯಾಗಿದೆ” ಎಂದಿದ್ದಾರೆ ಸ್ಟಾಲಿನ್.  ಕಳೆದ ಕೆಲವು ವರ್ಷಗಳಲ್ಲಿ ರಾಜ್ಯದಲ್ಲಿ NEET ಸಂಬಂಧಿತ ಆತ್ಮಹತ್ಯೆಗಳು ವರದಿಯಾಗಿವೆ.

ಯಾವುದೇ ಸಂದರ್ಭದಲ್ಲೂ ಯಾವುದೇ ವಿದ್ಯಾರ್ಥಿಗಳು ತಮ್ಮ ಪ್ರಾಣವನ್ನು ತೆಗೆಯುವ ನಿರ್ಧಾರವನ್ನು ತೆಗೆದುಕೊಳ್ಳಬಾರದು ಎಂದು ನಾನು ಮನವಿ ಮಾಡುತ್ತೇನೆ. ನಿಮ್ಮ ಬೆಳವಣಿಗೆಗೆ ಅಡ್ಡಿಯಾಗಿರುವ NEET ಅನ್ನು ರದ್ದುಗೊಳಿಸಲಾಗುವುದು. ರಾಜ್ಯ ಸರ್ಕಾರವು ಈ ನಿಟ್ಟಿನಲ್ಲಿ ಕಾನೂನು ಉಪಕ್ರಮದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಶ ಸ್ಟಾಲಿನ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ತಮಿಳುನಾಡಿಗೆ ನೀಟ್ ವಿನಾಯಿತಿಗೆ ಒತ್ತಾಯಿಸುವ ವಿಧಾನಸಭೆ ನಿರ್ಣಯಗಳನ್ನು ನೆನಪಿಸಿಕೊಂಡ ಅವರು, ರಾಜ್ಯಪಾಲರು ಮೊದಲ ನಿರ್ಣಯವನ್ನು ಹಿಂದಿರುಗಿಸಿದ್ದು, ಎರಡನೆಯದನ್ನು ರಾಷ್ಟ್ರಪತಿಗಳ ಒಪ್ಪಿಗೆಗೆ ಕಳುಹಿಸಿದರು. ರಾಜ್ಯಪಾಲ ರವಿ ಅವರು ಮಸೂದೆಯನ್ನು ರದ್ದುಪಡಿಸಲು ಬಯಸುತ್ತಿರುವಂತೆ ಕಂಡುಬರುತ್ತಿದೆ. ನೀಟ್ ಪರೀಕ್ಷೆ ದುಬಾರಿಯಾಗಿದ್ದು, ಶ್ರೀಮಂತರು ಮಾತ್ರ ಅದನ್ನು ಭರಿಸಬಹುದು ಎಂದು ಮುಖ್ಯಮಂತ್ರಿ ಹೇಳಿದರು.

ಅಪಾರ ಹಣ ಖರ್ಚು ಮಾಡಿ ಓದಲು ಸಾಧ್ಯವಾಗದವರು ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿದ್ದಾರೆ ಎಂದ ಅವರು, ಕೇವಲ ನೀಟ್‌ನಲ್ಲಿ ತೇರ್ಗಡೆಯಾದವರು ಹಣವಿದ್ದರೆ ವೈದ್ಯಕೀಯ ಕಾಲೇಜಿಗೆ ಸೇರುವ ಪರಿಸ್ಥಿತಿ ನಿರ್ಮಾಣವಾಗಿದೆ ಮತ್ತು ವೈದ್ಯಕೀಯ ಶಿಕ್ಷಣ ಹಣ ಉಳ್ಳವರಿಗೆ ಮಾತ್ರ ಎಂದು ಹೇಳಿದರು.

ಹೀಗಿದ್ದರೂ ರಾಜ್ಯ ಸರ್ಕಾರವು ಸರಕಾರಿ ಶಾಲೆಗಳ ಬಡ ವಿದ್ಯಾರ್ಥಿಗಳಿಗೆ ವೈದ್ಯಕೀಯ ಕಾಲೇಜುಗಳಲ್ಲಿ ಶೇ.7.5ರಷ್ಟು ಮೀಸಲಾತಿ ತಂದಿದೆ.ಆದರೆ, ರಾಜ್ಯಪಾಲರು ಇದನ್ನು ಅರ್ಥಮಾಡಿಕೊಳ್ಳಲು ನಿರಾಕರಿಸಿದ್ದಾರೆ.ಅವರು ಕೋಚಿಂಗ್ ಸೆಂಟರ್‌ಗಳ ಕೈಗೊಂಬೆಯಂತೆ ವರ್ತಿಸುತ್ತಿದ್ದಾರೆ ಎಂಬ ಅನುಮಾನವಿದ ಎಂದು ಸ್ಟಾಲಿನ್ ಆರೋಪಿಸಿದ್ದಾರೆ.

ವಿದ್ಯಾರ್ಥಿಗಳನ್ನು ಆಹ್ವಾನಿಸುವ ಮೂಲಕ ರವಿ ರಾಜಭವನದಲ್ಲಿ ತರಗತಿಗಳನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ ಮುಖ್ಯಮಂತ್ರಿ, ಸೇಲಂನ ವಿದ್ಯಾರ್ಥಿಯ ತಂದೆ ಪ್ರಸ್ತಾಪಿಸಿದ ವಿಷಯವಾಗಿ ನೀಟ್ ವಿನಾಯಿತಿ ಮಸೂದೆಗೆ ಸಹಿ ಹಾಕುವುದಿಲ್ಲ ಎಂದು ಟೀಕಿಸಿದಾಗ ರಾಜ್ಯಪಾಲರು ತಮ್ಮ ಅಜ್ಞಾನವನ್ನು ಪ್ರದರ್ಶಿಸಿದರು.

ಇದನ್ನೂ ಓದಿ: ಸ್ವಾತಂತ್ರ್ಯದಿನದಲ್ಲಿ ಭಾಗಿಯಾಗಲು ಕಾರ್ಮಿಕರು, ರೈತರು, ಮೀನುಗಾರರಿಗೆ ಪ್ರಧಾನಿ ಮೋದಿ ವಿಶೇಷ ಆಹ್ವಾನ

“ಮಸೂದೆ ಅವರ ಸಹಿಗಾಗಿ ಕಾಯುತ್ತಿಲ್ಲ. ಅದು ರಾಷ್ಟ್ರಪತಿಗಳ ಕೈಯಲ್ಲಿದೆ. ರಾಜ್ಯಪಾಲರಿಗೆ ಈ ಮಟ್ಟಿಗೆ ಅಧಿಕಾರವಿಲ್ಲ, ಆದರೆ ಅವರು ಅಧಿಕಾರ ಚಲಾಯಿಸುತ್ತಾರೆ ಎಂಬ ಭಾವನೆಯನ್ನು ಅವರು ನೀಡುತ್ತಿದ್ದಾರೆ. ಜಗದೀಶ್ವರನ್ ಅವರಂತೆ ಎಷ್ಟೇ ಜೀವಗಳನ್ನು ಕಳೆದುಕೊಂಡರೂ ಪರವಾಗಿಲ್ಲ. ರಾಜ್ಯಪಾಲ ಆರ್.ಎನ್.ರವಿ ಅವರ ಹೃದಯ ಕರಗುವುದಿಲ್ಲ, ಇಂತಹ ಕಲ್ಲುಹೃದಯದ ಜನರ ಕಾಲದಲ್ಲಿ ಮಾನವನ ಪ್ರಾಣಕ್ಕೆ ಬೆಲೆ ಇಲ್ಲ ಎಂದು ಸ್ಟಾಲಿನ್ ಹೇಳಿದ್ದಾರೆ.

“ನೀಟ್‌ನ ಬಲಿಪೀಠದ ಮೇಲೆ ಅವರ ಸಾವು ಅಂತಿಮವಾಗಲಿ. ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಕಾದಿದೆ. ಆತ್ಮಸ್ಥೈರ್ಯದಿಂದಿರಿ. ಬದುಕಿ ಮತ್ತು ಇತರರನ್ನು ಬದುಕಲು ಬಿಡಿ. ಯಾವುದೇ ಆತ್ಮಹತ್ಯಾ ಪ್ರವೃತ್ತಿಯನ್ನು ಬೆಳೆಸಿಕೊಳ್ಳಬೇಡಿ ಎಂದು ತಮಿಳುನಾಡು ಸಿಎಂ ಮನವಿ ಮಾಡಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:24 pm, Mon, 14 August 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ