AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Delhi violence ಕೆಂಪುಕೋಟೆ ಬಳಿ ಹಿಂಸಾಚಾರ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲು ಒಪ್ಪದ ಸುಪ್ರೀಂ ಕೋರ್ಟ್; ಅರ್ಜಿ ಹಿಂಪಡೆಯಲು ಸೂಚನೆ

ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ತಾತ್ಕಾಲಿಕ ತಡೆ ನೀಡಿ ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ನಾಲ್ವರು ಸದಸ್ಯರನ್ನೊಳಗೊಂಡ ಸಮಿತಿಯನ್ನೂ ರಚಿಸಿದೆ.

Delhi violence ಕೆಂಪುಕೋಟೆ ಬಳಿ ಹಿಂಸಾಚಾರ ಪ್ರಕರಣದಲ್ಲಿ ಹಸ್ತಕ್ಷೇಪ ಮಾಡಲು ಒಪ್ಪದ ಸುಪ್ರೀಂ ಕೋರ್ಟ್; ಅರ್ಜಿ ಹಿಂಪಡೆಯಲು ಸೂಚನೆ
ಸುಪ್ರೀಂಕೋರ್ಟ್​
Lakshmi Hegde
| Edited By: |

Updated on: Feb 03, 2021 | 3:41 PM

Share

ದೆಹಲಿ: ಕೆಂಪುಕೋಟೆಯಲ್ಲಿ ಗಣರಾಜ್ಯೋತ್ಸ ದಿನದಂದು ನಡೆದ ಹಿಂಸಾಚಾರ ಪ್ರಕರಣದಲ್ಲಿ ಮಧ್ಯ ಪ್ರವೇಶ ಮಾಡಲು ಸುಪ್ರೀಂ ಕೋರ್ಟ್​ ನಿರಾಕರಿಸಿದೆ.

ದೆಹಲಿಯಲ್ಲಿ ಜನವರಿ 26ರಂದು ಹಿಂಸಾಚಾರ ನಡೆದ ಬೆನ್ನಲ್ಲೆ, ಮಧ್ಯ ಪ್ರವೇಶ ಮಾಡುವಂತೆ ಸುಪ್ರೀಂ ಕೋರ್ಟ್​ಗೆ ಹಲವರು ಪಿಐಎಲ್​ ಸಲ್ಲಿಸಿದ್ದರು. ಈ ವಿಚಾರವನ್ನು ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್​ ನ್ಯಾಯಮೂರ್ತಿ ಎಸ್​. ಎ.ಬೊಬ್ಡೆ ನೇತೃತ್ವದ, ನ್ಯಾಯಮೂರ್ತಿಗಳಾದ ಎಸ್​. ಎ.ಬೋಪಣ್ಣ, ವಿ.ರಾಮಸುಬ್ರಹ್ಮಣ್ಯನ್​ ಅವರನ್ನೊಳಗೊಂಡ ಪೀಠವು ತಾವು ಯಾವ ಕಾರಣಕ್ಕೂ ಇದರಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ. ಕೆಂಪುಕೋಟೆ ಬಳಿ ನಡೆದ ಹಿಂಸಾಚಾರ, ಧ್ವಜಾರೋಹಣಕ್ಕೆ ಸಂಬಂಧಪಟ್ಟಂತೆ ಕೇಂದ್ರ ಸರ್ಕಾರ ಸೂಕ್ತ ತನಿಖೆ ನಡೆಸಿ, ಕ್ರಮ ಕೈಗೊಳ್ಳುತ್ತದೆ ಎಂಬ ನಂಬಿಕೆ ಇದೆ ಎಂದು ಹೇಳಿದೆ.

ಅಂದಿನ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಕಾನೂನು ತನ್ನದೇ ಆದ ಹಾದಿಯಲ್ಲಿ ಕೆಲಸ ಮಾಡುತ್ತದೆ ಎಂದು ಪ್ರಧಾನ ಮಂತ್ರಿಯವರು ಹೇಳಿದ್ದಾಗಿ ನಾವೂ ಪತ್ರಿಕೆಗಳಲ್ಲಿ ಓದಿದ್ದೇವೆ. ಕಾನೂನು ತನ್ನ ಪಥದಲ್ಲಿ ನಡೆಯುತ್ತದೆಂಬ ಭರವಸೆ ನಮಗೂ ಇದೆ. ಕೇಂದ್ರದ ಮೇಲೆ ನಂಬಿಕೆ ಇಟ್ಟಿದ್ದೇವೆ. ನಾವು ಮಧ್ಯಪ್ರವೇಶಿಸುವುದಿಲ್ಲ ಎಂದು ಸಿಜೆಐ (CJI) ಎಸ್​. ಎ.ಬೊಬ್ಡೆ (SA Bobde) ಹೇಳಿದ್ದಾರೆ. ಅಷ್ಟೇ ಅಲ್ಲ, ನಿಮ್ಮ ಅರ್ಜಿಗಳನ್ನು ವಾಪಸ್​ ಪಡೆಯಿರಿ ಎಂದು ಅರ್ಜಿದಾರರಿಗೆ ಸುಪ್ರೀಂ ಕೋರ್ಟ್​ ಸೂಚನೆ ನೀಡಿದೆ.

ಹಾಗೇ ಕೆಲವು ಮಾಧ್ಯಮಗಳಲ್ಲಿ ರೈತರನ್ನು ಉಗ್ರರು ಎಂದು ಉಲ್ಲೇಖಿಸಲಾಗುತ್ತಿದೆ. ಯಾವುದೇ ದಾಖಲೆಯಿಲ್ಲದೆ ಅವರನ್ನು ಉಗ್ರರು ಎಂದು ಉಲ್ಲೇಖಿಸಬಾರದು ಎಂದು ಸೂಚನೆ ನೀಡುವಂತೆ ವಕೀಲ ಮನೋಹರ್​ ಲಾಲ್ ಶರ್ಮಾ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿಯನ್ನೂ ಈ ಪೀಠ ವಜಾಗೊಳಿಸಿದೆ.

ಮೂರು ಕೃಷಿ ಕಾಯ್ದೆಗಳ ಅನುಷ್ಠಾನಕ್ಕೆ ತಾತ್ಕಾಲಿಕ ತಡೆ ನೀಡಿ ಕಳೆದ ತಿಂಗಳು ಸುಪ್ರೀಂಕೋರ್ಟ್ ಆದೇಶ ನೀಡಿದ್ದು, ಕೇಂದ್ರ ಸರ್ಕಾರ ಮತ್ತು ರೈತರ ನಡುವಿನ ಬಿಕ್ಕಟ್ಟು ಪರಿಹಾರಕ್ಕೆ ನಾಲ್ವರು ಸದಸ್ಯರನ್ನೊಳಗೊಂಡ ಸಮಿತಿಯನ್ನೂ ರಚಿಸಿದೆ. ಇಷ್ಟಾದರೂ ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರಿದಿದೆ.

Delhi violence ನಟ ದೀಪ್​ ಸಿಧು ಪತ್ತೆಗೆ ಸಹಾಯ ಮಾಡಿದವರಿಗೆ 1 ಲಕ್ಷ ರೂ. ಬಹುಮಾನ ಘೋಷಿಸಿದ ದೆಹಲಿ ಪೊಲೀಸರು

ಕೆಂಪುಕೋಟೆ ಮೇಲೆ ಸಿಖ್ ಧ್ವಜ ಹಾರಾಟ: ಪ್ರಕರಣ ಹಿಂದಿದೆ ಬಿಜೆಪಿ ಬೆಂಬಲಿಗ, ನಟ ದೀಪ್‌ ಸಿಧು ಕೈವಾಡ?

Follow Us
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು