AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೀಟ್​ವೇವ್​ ಬಗ್ಗೆ ಸುದ್ದಿ ಓದುತ್ತಲೇ ತಲೆತಿರುಗಿ ಬಿದ್ದ ಆ್ಯಂಕರ್

ದೂರದರ್ಶನ ಆ್ಯಂಕರ್​ವೊಬ್ಬರು ಹೀಟ್​ವೇವ್​ ಬಗ್ಗೆ ಸುದ್ದಿ ಓದುತ್ತಲೇ ತಲೆತಿರುಗಿ ಬಿದ್ದಿರುವ ಘಟನೆ ನಡೆದಿದೆ. ದೂರದರ್ಶನದ ಕೋಲ್ಕತ್ತಾ ಶಾಖೆಯ ಆ್ಯಂಕರ್ ಲೋಪಮುದ್ರಾ ಅವರು ರಕ್ತದೊತ್ತಡ ಹೆಚ್ಚಾಗಿ ಕುಸಿದುಬಿದ್ದಿದ್ದರು, ಇದರ ವಿಡಿಯೋವನ್ನು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಕೂಡ ಹಂಚಿಕೊಂಡಿದ್ದಾರೆ.

ಹೀಟ್​ವೇವ್​ ಬಗ್ಗೆ ಸುದ್ದಿ ಓದುತ್ತಲೇ ತಲೆತಿರುಗಿ ಬಿದ್ದ ಆ್ಯಂಕರ್
ನಿರೂಪಕಿ ಲೋಪಮುದ್ರಾ
ನಯನಾ ರಾಜೀವ್
|

Updated on: Apr 22, 2024 | 10:41 AM

Share

ಹೀಟ್​ ವೇವ್(Heat Wave)​ ಕುರಿತ ವರದಿ ಓದುತ್ತಲೇ ದೂರದರ್ಶನದ ಆ್ಯಂಕರ್(Anchor)​ ತಲೆ ತಿರುಗಿ ಬಿದ್ದಿರುವ ಘಟನೆ ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ದೇಶದ ಹಲವು ಭಾಗಗಳು ವಿಪರೀತ ಬಿಸಿಲಿನ ಝಳಕ್ಕೆ ಸಿಲುಕಿ ನಲುಗುತ್ತಿವೆ. ಟಿವಿ ಆ್ಯಂಕರ್​ ಒಬ್ಬರು ಇತ್ತೀಚೆಗೆ ಹೀಟ್​ವೇವ್​ನ ಲೈವ್​ ಅಪ್​ಡೇಟ್​ಗಳನ್ನು ಓದುವಾಗಲೇ ಎಚ್ಚರತಪ್ಪಿ ಬಿದ್ದಿದ್ದಾರೆ.

ದೂರದರ್ಶನದ ಕೋಲ್ಕತ್ತಾ ಶಾಖೆಯ ಆ್ಯಂಕರ್ ಲೋಪಮುದ್ರಾ ಅವರು ರಕ್ತದೊತ್ತಡ ಹೆಚ್ಚಾಗಿ ಕುಸಿದುಬಿದ್ದಿದ್ದರು, ಇದರ ವಿಡಿಯೋವನ್ನು ತಮ್ಮ ಫೇಸ್‌ಬುಕ್ ಪೇಜ್‌ನಲ್ಲಿ ಕೂಡ ಹಂಚಿಕೊಂಡಿದ್ದಾರೆ.

ಬೆಳಗ್ಗೆ ಕೆಲಸಕ್ಕೆ ಬಂದಾಗಲೇ ಬಾಯಿ ಒಣಗುತ್ತಿತ್ತು, ಸುಸ್ತಾಗುತ್ತಿತ್ತು, ಹೊರಗೆ ಅತಿಯಾದ ಶಾಖ ಒಳಗೆ ತಂಪಾದ ವಾತಾವರಣವು ರಕ್ತದೊತ್ತಡದಲ್ಲಿ ಏರುಪೇರಾಗಲು ಕಾರಣವಾಯಿತು ಎಂದಿದ್ದಾರೆ.

ನಾನು ಎಂದಿಗೂ ನನ್ನ ಬಳಿ ನೀರಿನ ಬಾಟಲಿಯನ್ನು ಇಟ್ಟುಕೊಂಡಿದ್ದೇ ಇಲ್ಲ, ಹದಿನೈದು ನಿಮಿಷಗಳು ಅಥವಾ ಅರ್ಧಗಂಟೆ ಇರಲಿ, ಇದುವರೆಗೂ ನೀರನ್ನು ಇಟ್ಟುಕೊಂಡಿದ್ದೇ ನೆನಪಿಲ್ಲ, ಆದರೆ ವಾತೆ್ ಮುಗಿಯುವ 15 ನಿಮಿಷಗಳ ಮೊದಲೇ ಬಾಯಿ ಒಣಗಲು ಶುರುವಾಗಿತ್ತು.

ಮತ್ತಷ್ಟು ಓದಿ: ಮಹಿಳಾ ರಿಪೋರ್ಟರ್​​ಗೆ ಬಲವಂತವಾಗಿ ಹಿಜಾಬ್​​ ಹಾಕಿದ ಮುಸ್ಲಿಂ ಯುವಕ, ಆಕೆಯ ಪ್ರತ್ಯುತ್ತರಕ್ಕೆ ನೆಟ್ಟಿಗರು ಫಿದಾ

ಫ್ಲೋರ್​ ಮ್ಯಾನೇಜರ್​ ಬಳಿ ನೀರು ಕೊಡುವಂತೆ ಕೇಳಿದೆ, ಬ್ರೇಕ್​ ತೆಗೆದುಕೊಂಡು ನೀರು ಕುಡಿದೆ, ಅದಾದ ಬಳಿಕ ಸುಧಾರಿಸಿಕೊಂಡು ಹೇಗೋ ಎರಡು ಸುದ್ದಿಗಳನ್ನು ಓದಿದ್ದಷ್ಟೇ ತಲೆ ತಿರುಗಿ ಬಿದ್ದೆ ಎಂದು ಬರೆದುಕೊಂಡಿದ್ದಾರೆ.

ಬಿಸಿಲ ಝಳ, ಹೀಟ್​ ವೇವ್​ ಸುದ್ದಿ ಓದುವಾಗ ನನ್ನ ಧ್ವನಿ ಕಂಪಿಸಿತು, ಅದೃಷ್ಟವಶಾತ್ ಇದು ದೂರದರ್ಶನದಲ್ಲಿ 30 ರಿಂದ 40 ಸೆಕೆಂಡುಗಳ ಅನಿಮೇಷನ್ ಪ್ಲೇ ಆಗುತ್ತಿರುವಾಗ ಸಂಭವಿಸಿತು. ಆ ಸಮಯದಲ್ಲಿ ನಾನು ನನ್ನ ಕುರ್ಚಿಯ ಮೇಲೆ ಬಿದ್ದೆ ಎಂದಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!