AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2048 ರ ಒಲಿಂಪಿಕ್ಸ್​ ಆಯೋಜಿಸುವುದು ನಮ್ಮ ಕನಸು: ಅರವಿಂದ್ ಕೇಜ್ರಿವಾಲ್​

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 100 ಮನೆಗಳಿಗೆ ಪಡಿತರ ವಿತರಿಸಿ ಈ ಯೋಜನೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ ಇಮ್ರಾನ್ ಹುಸೈನ್, ಏಪ್ರಿಲ್ 1ರ ಬಳಿಕ ಈ ಯೋಜನೆಯನ್ನು ಇನ್ನಷ್ಟು ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

2048 ರ ಒಲಿಂಪಿಕ್ಸ್​ ಆಯೋಜಿಸುವುದು ನಮ್ಮ ಕನಸು: ಅರವಿಂದ್ ಕೇಜ್ರಿವಾಲ್​
ಅರವಿಂದ್ ಕೇಜ್ರಿವಾಲ್
TV9 Web
| Edited By: |

Updated on:Apr 06, 2022 | 7:14 PM

Share

ದೆಹಲಿ: ಮನೆ ಮನೆಗೆ ಪಡಿತರ ವಿತರಣೆ ಮಾಡುವ ದೆಹಲಿ ಸರ್ಕಾರದ ಯೋಜನೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 25ರಂದು ಚಾಲನೆ ನೀಡಲಿದ್ದಾರೆ. ‘ಘರ್ ಘರ್ ರೇಷನ್’ ಯೋಜನೆಗೆ ಸಂಬಂಧಿಸಿ ಸೀಮಾಪುರಿ ಭಾಗದ ನಿಯಮಿತ ಸಂಖ್ಯೆಯ ಫಲಾನುಭವಿಗಳ ಮನೆಗಳಿಗೆ ಪಡಿತರ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಇಮ್ರಾನ್ ಹುಸೈನ್ ಇಂದು (ಮಾರ್ಚ್ 12) ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿ, ಅವರ ಪಡಿತರ ಮತ್ತು ಬಯೋಮೆಟ್ರಿಕ್ ವಿವರ ಸಿದ್ಧಪಡಿಸಿ ಇಡುವಂತೆ ಸರ್ಕಾರ ಆಯಾ ಇಲಾಖೆಗಳಿಗೆ ಸೂಚನೆ ನೀಡಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 100 ಮನೆಗಳಿಗೆ ಪಡಿತರ ವಿತರಿಸಿ ಈ ಯೋಜನೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ ಇಮ್ರಾನ್ ಹುಸೈನ್, ಏಪ್ರಿಲ್ 1ರ ಬಳಿಕ ಈ ಯೋಜನೆಯನ್ನು ಇನ್ನಷ್ಟು ವಿಸ್ತರಣೆ ಮಾಡಲಾಗುವುದು. ರಾಷ್ಟ್ರ ರಾಜಧಾನಿಯ ಇತರಡೆಗೂ ಈ ಯೋಜನೆ ತಲುಪಿಸಲಾಗುವುದು ಎಂದು ಹೇಳಿದ್ದಾರೆ.

ಮನೆ ಮನೆಗೆ ಪಡಿತರ, ಬಯೋಮೆಟ್ರಿಕ್ ವೆರಿಫಿಕೇಷನ್ ನಂತರ ಮನೆ ಮನೆಗೆ ಪಡಿತರ ಸಾಮಾಗ್ರಿಗಳನ್ನು ಒದಗಿಸುವ ಈ ಯೋಜನೆಯನ್ನು ದೆಹಲಿ ಸರ್ಕಾರ ಕಳೆದ ತಿಂಗಳೇ ಪರಿಚಯಿಸಿತ್ತು. ಯೋಜನೆಯ ಪ್ರಕಾರ ಪ್ರತಿ ಫಲಾನುಭವಿ ಮನೆಗಳಿಗೆ ಪಡಿತರ ಸಾಮಾಗ್ರಿಗಳು ಸರಬರಾಜು ಆಗಲಿದೆ. ಗೋಧಿ, ಅಕ್ಕಿ ಮನೆ ಮನೆಗೆ ತಲುಪಲಿದೆ. ಈ ಯೋಜನೆಗಾಗಿ ಬಯೋಮೆಟ್ರಿಕ್ ವೆರಿಫಿಕೇಷನ್ ಆಗಬೇಕಿದೆ.

ಗಣರಾಜ್ಯೋತ್ಸವ ದಿನದಂದು ಮಾತನಾಡಿದ್ದ ಆಮ್ ಆದ್ಮಿ ಪಾರ್ಟಿ (AAP) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೆ ಮನೆಗೆ ಪಡಿತರ ವಿತರಿಸುವ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಹೇಳಿಕೆ ನೀಡಿದ್ದರು. ವರ್ಷಾಂತ್ಯದ ಒಳಗೆ ನಗರದ ಪ್ರತಿಯೊಬ್ಬರಿಗೂ ಆರೋಗ್ಯ ಕಾರ್ಡ್ (Health Card) ನೀಡುವ ಕುರಿತು ಹೇಳಿಕೆ ನೀಡಿದ್ದರು.

2048 ಒಲಿಂಪಿಕ್ಸ್ ಆಯೋಜಿಸುವುದು ನಮ್ಮ ಕನಸು! 2048ರ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವುದು ನಮ್ಮ ಕನಸು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಮಾರ್ಚ್ 12) ದೆಹಲಿ ಸದನದಲ್ಲಿ ಹೇಳಿದರು. ನಾವು ಎಲ್ಲಾ ಕ್ರೀಡಾ ಸಂಘಟನೆಗಳನ್ನು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ನ್ನು ಭೇಟಿಯಾಗುತ್ತೇವೆ. ದೆಹಲಿ ಸರ್ಕಾರ ಈ ಬಗ್ಗೆ ಮೊದಲ ಹೆಜ್ಜೆ ತೆಗೆದುಕೊಳ್ಳುತ್ತದೆ. ಆದರೆ, ಉಳಿದೆಲ್ಲರೂ ಈ ಕನಸಿಗೆ ಸಹಕಾರ ನೀಡಬೇಕು. ಹಾಗಾದಾಗ, ಈ ಕನಸು ನನಸಾಗುವುದರಲ್ಲಿ ಸಂದೇಹವಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ರಾಮ ಮತ್ತು ಹನುಮನ ಭಕ್ತ; ರಾಮ ರಾಜ್ಯದಿಂದ ಸ್ಫೂರ್ತಿ ಪಡೆದ 10 ಅಂಶ ಪಟ್ಟಿ ಮಾಡಿದ ಅರವಿಂದ್ ಕೇಜ್ರಿವಾಲ್

ಡಿಜಿಟಲ್ ಮಾಧ್ಯಮಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಯತ್ನ ವಿರೋಧಿಸಿ ದೆಹಲಿ ಹೈಕೋರ್ಟ್​ಗೆ ಅರ್ಜಿ

Published On - 5:34 pm, Fri, 12 March 21

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ