2048 ರ ಒಲಿಂಪಿಕ್ಸ್​ ಆಯೋಜಿಸುವುದು ನಮ್ಮ ಕನಸು: ಅರವಿಂದ್ ಕೇಜ್ರಿವಾಲ್​

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 100 ಮನೆಗಳಿಗೆ ಪಡಿತರ ವಿತರಿಸಿ ಈ ಯೋಜನೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ ಇಮ್ರಾನ್ ಹುಸೈನ್, ಏಪ್ರಿಲ್ 1ರ ಬಳಿಕ ಈ ಯೋಜನೆಯನ್ನು ಇನ್ನಷ್ಟು ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ.

2048 ರ ಒಲಿಂಪಿಕ್ಸ್​ ಆಯೋಜಿಸುವುದು ನಮ್ಮ ಕನಸು: ಅರವಿಂದ್ ಕೇಜ್ರಿವಾಲ್​
ಅರವಿಂದ್ ಕೇಜ್ರಿವಾಲ್
Follow us
| Updated By: ganapathi bhat

Updated on:Apr 06, 2022 | 7:14 PM

ದೆಹಲಿ: ಮನೆ ಮನೆಗೆ ಪಡಿತರ ವಿತರಣೆ ಮಾಡುವ ದೆಹಲಿ ಸರ್ಕಾರದ ಯೋಜನೆಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಮಾರ್ಚ್ 25ರಂದು ಚಾಲನೆ ನೀಡಲಿದ್ದಾರೆ. ‘ಘರ್ ಘರ್ ರೇಷನ್’ ಯೋಜನೆಗೆ ಸಂಬಂಧಿಸಿ ಸೀಮಾಪುರಿ ಭಾಗದ ನಿಯಮಿತ ಸಂಖ್ಯೆಯ ಫಲಾನುಭವಿಗಳ ಮನೆಗಳಿಗೆ ಪಡಿತರ ವಿತರಿಸಲಾಗುವುದು ಎಂದು ಆಹಾರ ಇಲಾಖೆ ಸಚಿವ ಇಮ್ರಾನ್ ಹುಸೈನ್ ಇಂದು (ಮಾರ್ಚ್ 12) ಹೇಳಿದ್ದಾರೆ. ಯೋಜನೆಗೆ ಸಂಬಂಧಿಸಿದಂತೆ ಅರ್ಹ ಫಲಾನುಭವಿಗಳ ಪಟ್ಟಿ ತಯಾರಿಸಿ, ಅವರ ಪಡಿತರ ಮತ್ತು ಬಯೋಮೆಟ್ರಿಕ್ ವಿವರ ಸಿದ್ಧಪಡಿಸಿ ಇಡುವಂತೆ ಸರ್ಕಾರ ಆಯಾ ಇಲಾಖೆಗಳಿಗೆ ಸೂಚನೆ ನೀಡಿದೆ.

ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, 100 ಮನೆಗಳಿಗೆ ಪಡಿತರ ವಿತರಿಸಿ ಈ ಯೋಜನೆ ಉದ್ಘಾಟಿಸಲಿದ್ದಾರೆ ಎಂದು ತಿಳಿಸಿದ ಇಮ್ರಾನ್ ಹುಸೈನ್, ಏಪ್ರಿಲ್ 1ರ ಬಳಿಕ ಈ ಯೋಜನೆಯನ್ನು ಇನ್ನಷ್ಟು ವಿಸ್ತರಣೆ ಮಾಡಲಾಗುವುದು. ರಾಷ್ಟ್ರ ರಾಜಧಾನಿಯ ಇತರಡೆಗೂ ಈ ಯೋಜನೆ ತಲುಪಿಸಲಾಗುವುದು ಎಂದು ಹೇಳಿದ್ದಾರೆ.

ಮನೆ ಮನೆಗೆ ಪಡಿತರ, ಬಯೋಮೆಟ್ರಿಕ್ ವೆರಿಫಿಕೇಷನ್ ನಂತರ ಮನೆ ಮನೆಗೆ ಪಡಿತರ ಸಾಮಾಗ್ರಿಗಳನ್ನು ಒದಗಿಸುವ ಈ ಯೋಜನೆಯನ್ನು ದೆಹಲಿ ಸರ್ಕಾರ ಕಳೆದ ತಿಂಗಳೇ ಪರಿಚಯಿಸಿತ್ತು. ಯೋಜನೆಯ ಪ್ರಕಾರ ಪ್ರತಿ ಫಲಾನುಭವಿ ಮನೆಗಳಿಗೆ ಪಡಿತರ ಸಾಮಾಗ್ರಿಗಳು ಸರಬರಾಜು ಆಗಲಿದೆ. ಗೋಧಿ, ಅಕ್ಕಿ ಮನೆ ಮನೆಗೆ ತಲುಪಲಿದೆ. ಈ ಯೋಜನೆಗಾಗಿ ಬಯೋಮೆಟ್ರಿಕ್ ವೆರಿಫಿಕೇಷನ್ ಆಗಬೇಕಿದೆ.

ಗಣರಾಜ್ಯೋತ್ಸವ ದಿನದಂದು ಮಾತನಾಡಿದ್ದ ಆಮ್ ಆದ್ಮಿ ಪಾರ್ಟಿ (AAP) ನಾಯಕ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮನೆ ಮನೆಗೆ ಪಡಿತರ ವಿತರಿಸುವ ಯೋಜನೆಯನ್ನು ಜಾರಿಗೊಳಿಸುವ ಬಗ್ಗೆ ಹೇಳಿಕೆ ನೀಡಿದ್ದರು. ವರ್ಷಾಂತ್ಯದ ಒಳಗೆ ನಗರದ ಪ್ರತಿಯೊಬ್ಬರಿಗೂ ಆರೋಗ್ಯ ಕಾರ್ಡ್ (Health Card) ನೀಡುವ ಕುರಿತು ಹೇಳಿಕೆ ನೀಡಿದ್ದರು.

2048 ಒಲಿಂಪಿಕ್ಸ್ ಆಯೋಜಿಸುವುದು ನಮ್ಮ ಕನಸು! 2048ರ ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸುವುದು ನಮ್ಮ ಕನಸು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇಂದು (ಮಾರ್ಚ್ 12) ದೆಹಲಿ ಸದನದಲ್ಲಿ ಹೇಳಿದರು. ನಾವು ಎಲ್ಲಾ ಕ್ರೀಡಾ ಸಂಘಟನೆಗಳನ್ನು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್​ನ್ನು ಭೇಟಿಯಾಗುತ್ತೇವೆ. ದೆಹಲಿ ಸರ್ಕಾರ ಈ ಬಗ್ಗೆ ಮೊದಲ ಹೆಜ್ಜೆ ತೆಗೆದುಕೊಳ್ಳುತ್ತದೆ. ಆದರೆ, ಉಳಿದೆಲ್ಲರೂ ಈ ಕನಸಿಗೆ ಸಹಕಾರ ನೀಡಬೇಕು. ಹಾಗಾದಾಗ, ಈ ಕನಸು ನನಸಾಗುವುದರಲ್ಲಿ ಸಂದೇಹವಿಲ್ಲ ಎಂದು ಕೇಜ್ರಿವಾಲ್ ತಿಳಿಸಿದ್ದಾರೆ.

ಇದನ್ನೂ ಓದಿ: ನಾನು ರಾಮ ಮತ್ತು ಹನುಮನ ಭಕ್ತ; ರಾಮ ರಾಜ್ಯದಿಂದ ಸ್ಫೂರ್ತಿ ಪಡೆದ 10 ಅಂಶ ಪಟ್ಟಿ ಮಾಡಿದ ಅರವಿಂದ್ ಕೇಜ್ರಿವಾಲ್

ಡಿಜಿಟಲ್ ಮಾಧ್ಯಮಕ್ಕೆ ಕಡಿವಾಣ ಹಾಕುವ ಕೇಂದ್ರ ಸರ್ಕಾರದ ಯತ್ನ ವಿರೋಧಿಸಿ ದೆಹಲಿ ಹೈಕೋರ್ಟ್​ಗೆ ಅರ್ಜಿ

Published On - 5:34 pm, Fri, 12 March 21

ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
ಬಲಗೈಯಲ್ಲಿ 6 ಬೆರಳುಗಳಿದ್ದರೆ ಏನು ಅರ್ಥ? ವಿಡಿಯೋ ನೋಡಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Nithya Bhavishya: ಈ ರಾಶಿಯವರಿಂದು ಹಣವನ್ನು ಕೊಟ್ಟು ಕಳೆದುಕೊಳ್ಳುವಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 9 ರಿಂದ 15ರ ವಾರ ಭವಿಷ್ಯ ತಿಳಿಯಿರಿ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್