AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತದ ಸ್ವಾತಂತ್ರ್ಯದ ನಂತರದ ಅತಿದೊಡ್ಡ ನಿರ್ಧಾರ; ಜಿಎಸ್‌ಟಿ ಸುಧಾರಣೆಗಳ ಕುರಿತು ಪ್ರಧಾನಿ ಮೋದಿ ಭಾಷಣ

ತೆರಿಗೆ ಸ್ಲ್ಯಾಬ್‌ಗಳನ್ನು ಶೇ. 5 ಮತ್ತು 18ಕ್ಕೆ ಸರಳಗೊಳಿಸುವ ಜಿಎಸ್‌ಟಿ ಮಂಡಳಿಯ ಕ್ರಮವನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಜಿಎಸ್‌ಟಿ ಸುಧಾರಣೆಗಳು ದೇಶದ ಬೆಳವಣಿಗೆಗೆ 'ಡಬಲ್ ಡೋಸ್' ಆಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ನಿನ್ನೆ ರಾತ್ರಿ ನಡೆದ ಜಿಎಸ್​ಟಿ ಮಂಡಳಿ ಸಭೆಯ ಬಳಿಕ ಪ್ರಸ್ತುತ ಜಾರಿಯಲ್ಲಿರುವ 4 ಸ್ಲ್ಯಾಬ್​​ಗಳ ಬದಲು ಎರಡೇ ಸ್ಲ್ಯಾಬ್​ ದರಗಳನ್ನು ಜಾರಿಗೊಳಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗಿತ್ತು.

ಭಾರತದ ಸ್ವಾತಂತ್ರ್ಯದ ನಂತರದ ಅತಿದೊಡ್ಡ ನಿರ್ಧಾರ; ಜಿಎಸ್‌ಟಿ ಸುಧಾರಣೆಗಳ ಕುರಿತು ಪ್ರಧಾನಿ ಮೋದಿ ಭಾಷಣ
Pm Modi Speech
ಸುಷ್ಮಾ ಚಕ್ರೆ
|

Updated on: Sep 04, 2025 | 7:32 PM

Share

ನವದೆಹಲಿ, ಸೆಪ್ಟೆಂಬರ್ 4: “ಜಿಎಸ್‌ಟಿ 2.0” ಅಡಿಯಲ್ಲಿ ಸರಳೀಕೃತ ಎರಡು-ಸ್ಲ್ಯಾಬ್ ರಚನೆಯನ್ನು ಸರ್ಕಾರ ಜಾರಿಗೆ ತಂದ ಒಂದು ದಿನದ ನಂತರ ಇಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ದೆಹಲಿಯಲ್ಲಿ ಆ ಬಗ್ಗೆ ಮಾತನಾಡಿದ್ದಾರೆ. ಜಿಎಸ್‌ಟಿ ಸುಧಾರಣೆಗಳನ್ನು (GST Reforms) ಭಾರತದ ಬೆಳವಣಿಗೆಗೆ ಡಬಲ್ ಡೋಸ್ ಆಗಿದೆ ಎಂದು ಶ್ಲಾಘಿಸಿದ್ದಾರೆ. “GST ಸ್ವತಂತ್ರ ಭಾರತದ ಅತಿದೊಡ್ಡ ಆರ್ಥಿಕ ಸುಧಾರಣೆಗಳಲ್ಲಿ ಒಂದಾಗಿತ್ತು. ವಾಸ್ತವವಾಗಿ, ಈ ಸುಧಾರಣೆಗಳು ದೇಶಕ್ಕೆ ಬೆಂಬಲ ಮತ್ತು ಬೆಳವಣಿಗೆಯ ಡಬಲ್ ಡೋಸ್ ಆಗಿದೆ. ಒಂದೆಡೆ, ದೇಶದ ಸಾಮಾನ್ಯ ಜನರು ಹಣವನ್ನು ಉಳಿಸುತ್ತಾರೆ, ಮತ್ತೊಂದೆಡೆ, ದೇಶದ ಆರ್ಥಿಕತೆಯನ್ನು ಬಲಪಡಿಸಲಾಗುತ್ತದೆ” ಎಂದಿದ್ದಾರೆ.

ಬುಧವಾರ ರಾತ್ರಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ವ್ಯಾಪಕ ಶ್ರೇಣಿಯ ಗ್ರಾಹಕ ಅಗತ್ಯ ವಸ್ತುಗಳು, ಔಷಧಿಗಳು ಮತ್ತು ವಾಹನಗಳ ಮೇಲಿನ ತೆರಿಗೆಗಳನ್ನು ಕಡಿತಗೊಳಿಸುವುದಾಗಿ ಘೋಷಿಸಿದ್ದರು. ಪರೋಕ್ಷ ತೆರಿಗೆ ವ್ಯವಸ್ಥೆಯನ್ನು ತರ್ಕಬದ್ಧಗೊಳಿಸುವ ಜಿಎಸ್‌ಟಿ ಕೌನ್ಸಿಲ್‌ನ ಮಹತ್ವದ ನಿರ್ಧಾರವನ್ನು ಪ್ರಧಾನಿ ನರೇಂದ್ರ ಮೋದಿ ಶ್ಲಾಘಿಸಿದ್ದಾರೆ. ಇದು ಈ ವರ್ಷದ ನವರಾತ್ರಿಯಿಂದ ಜಾರಿಗೆ ಬರಲಿರುವ ಮುಂದಿನ ಪೀಳಿಗೆಯ ಸುಧಾರಣೆಗಳು ಎಂದು ಅವರು ಕರೆದಿದ್ದಾರೆ. “ಈಗ ಜಿಎಸ್‌ಟಿ ಇನ್ನೂ ಸರಳವಾಗಿದೆ. ಕೇವಲ 5% ಮತ್ತು 18% ಈ ಎರಡು ಸ್ಲ್ಯಾಬ್‌ಗಳು ಉಳಿದಿವೆ. ಇದು ಪ್ರತಿಯೊಬ್ಬ ನಾಗರಿಕರ ವ್ಯವಹಾರಕ್ಕೆ ಸುಲಭವಾಗಿದೆ” ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: ದಸರಾಗೆ ಮೋದಿ ಸರ್ಕಾರದ ಉಡುಗೊರೆ; ನೂತನ ಜಿಎಸ್​ಟಿಯಿಂದ ಈ ವಸ್ತುಗಳ ಬೆಲೆ ಇಳಿಕೆ

ಜಿಎಸ್‌ಟಿ ಕೌನ್ಸಿಲ್ 12% ಮತ್ತು 28% ಸ್ಲ್ಯಾಬ್‌ಗಳನ್ನು ರದ್ದುಗೊಳಿಸಿತು. 5% ಮತ್ತು 18% ದರಗಳನ್ನು ಮಾತ್ರ ಉಳಿಸಿಕೊಂಡಿತು. ಸೆಪ್ಟೆಂಬರ್ 22ರಿಂದ ಜಾರಿಗೆ ಬರುವಂತೆ 2017ರಲ್ಲಿ ಜಿಎಸ್ಟಿ ಪರಿಚಯಿಸಿದ ನಂತರದ ಈ ಬದಲಾವಣೆಗಳು ಮಹತ್ವದ್ದಾಗಿದೆ. ಇದು ಮಧ್ಯಮವರ್ಗದವರಿಗೆ ಸಾಕಷ್ಟು ಪ್ರಯೋಜನ ನೀಡುತ್ತದೆ. ಈ ಕ್ರಮದಿಂದಾಗಿ ಸಾಕಷ್ಟು ಅಗತ್ಯ ವಸ್ತುಗಳ ಬೆಲೆ ಕಡಿಮೆಯಾಗಲಿದೆ. ಅಗತ್ಯ ವಸ್ತುಗಳು, ವೈಯಕ್ತಿಕ ಆರೈಕೆ ವಸ್ತುಗಳು, ರೆಸ್ಟೋರೆಂಟ್ ಊಟ, ಪ್ರಯಾಣ, ಗ್ಯಾಜೆಟ್‌ಗಳು ಮತ್ತು ಆಟೋಮೊಬೈಲ್‌ಗಳು ನೂತನ ಜಿಎಸ್​ಟಿ ದರದಿಂದಾಗಿ ಇನ್ಮುಂದೆ ಹೆಚ್ಚು ಕೈಗೆಟುಕುತ್ತವೆ.

ಇದನ್ನು ಐತಿಹಾಸಿಕ ಕ್ಷಣ ಎಂದು ಕರೆದ ಪ್ರಧಾನಿ ಮೋದಿ, ಸರಳೀಕೃತ ರಚನೆಯು ನಾಗರಿಕರ ಮೇಲಿನ ಹೊರೆಯನ್ನು ಕಡಿಮೆ ಮಾಡುವುದಲ್ಲದೆ ಬೇಡಿಕೆಯನ್ನು ಹೆಚ್ಚಿಸುತ್ತದೆ ಮತ್ತು ಆರ್ಥಿಕತೆಯನ್ನು ಬಲಪಡಿಸುತ್ತದೆ ಎಂದು ಹೇಳಿದರು.

ಇದನ್ನೂ ಓದಿ: ಜನರಿಗೆ ಗುಡ್, ರಾಜ್ಯಕ್ಕೆ ಬ್ಯಾಡ್ ನ್ಯೂಸ್! ನೂತನ ಜಿಎಸ್​ಟಿಯಿಂದ ಕರ್ನಾಟಕಕ್ಕೆ 70 ಸಾವಿರ ಕೋಟಿ ನಷ್ಟದ ಅಂದಾಜು

“8 ವರ್ಷಗಳ ಹಿಂದೆ GST ಜಾರಿಗೆ ತಂದಾಗ ಹಲವು ದಶಕಗಳ ಕನಸು ನನಸಾಯಿತು. ಮೋದಿ ಪ್ರಧಾನಿಯಾದ ನಂತರ ಈ ಚರ್ಚೆ ಪ್ರಾರಂಭವಾಗಲಿಲ್ಲ. ಈ ಚರ್ಚೆಗಳು ಹಿಂದೆಯೂ ನಡೆಯುತ್ತಿದ್ದವು, ಆದರೆ ಯಾವುದೇ ಕೆಲಸ ಎಂದಿಗೂ ಆಗಲಿಲ್ಲ” ಎಂದು ಹಿಂದಿನ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಿಸಿದ ಪ್ರಧಾನಿ ಮೋದಿ
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಮತ್ತೆ ಬರುತ್ತಿದೆ ‘ಅಗ್ನಿಸಾಕ್ಷಿ’ ಧಾರಾವಾಹಿ: ಶಮಂತ್ ಗೌಡ ಹೇಳಿದ್ದೇನು?
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಅಧಿಕಾರ ಕಳೆದುಕೊಂಡ ನಂತರ ಒಬ್ಬಂಟಿಯಾದ ಸಿದ್ದರಾಮಯ್ಯ
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಪ್ರತಿಷ್ಠಿತ ಅರ್ಥ್ ಪ್ರಶಸ್ತಿ ಗೆದ್ದ ಭಾರತೀಯ ವಿದ್ಯಾರ್ಥಿಗಳು
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹುಟ್ಟುಹಬ್ಬ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ಮಹರಾಜ ಲೀಗ್​​ನಲ್ಲಿ ಅನ್​​ಸೋಲ್ಡ್ ಆದ ಕೆಎಲ್ ರಾಹುಲ್; ಕಾರಣ ಇಲ್ಲಿದೆ
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ನಾನು ಸಚಿವನಾಗಿ ಚಾರ್ಜ್ ತಗೊಳ್ಳಲ್ಲ: ಕಾಂಗ್ರೆಸ್‌ಗೆ ಸಚಿವ ಮುನಿಯಪ್ಪ ಶಾಕ್
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ಬೆಂಗಳೂರಿನಲ್ಲಿ ರಾಮಲಿಂಗಾ ರೆಡ್ಡಿ ಬೆಂಬಲಿಗರಿಂದ ಭಾರಿ ಪ್ರತಿಭಟನೆ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
ರಾಮಲಿಂಗಾರೆಡ್ಡಿ ನನಗೆ ತುಂಬಾ ಆತ್ಮೀಯರು, ಸಮಸ್ಯೆ ಬಗೆಹರಿಸುತ್ತೇನೆ: ಸಿಎಂ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ
Live: ಸಚಿವ ರಾಮಲಿಂಗಾ ರೆಡ್ಡಿ ಮಹತ್ವದ ಸುದ್ದಿಗೋಷ್ಠಿ ನೇರ ಪ್ರಸಾರ