AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವರದಕ್ಷಿಣೆಗಾಗಿ ಮಗಳ ಕೊಲೆ, ಆಕೆಯ ಶವ ನೋಡಿ ಪ್ರಾಣಬಿಟ್ಟ ತಾಯಿ

ತಮ್ಮ ಮಗಳು ಎಂದೂ ಗಂಡನ ಮನೆಯಲ್ಲಿ ಸುಖವಾಗಿರಬೇಕು ಎಂಬುದು ತಂದೆ-ತಾಯಿಯ ಆಸೆಯಾಗಿರುತ್ತದೆ. ಆದರೆ ವರದಕ್ಷಿಣೆಗಾಗಿ ಆಕೆಯನ್ನು ಕೊಲೆ ಮಾಡಿದ್ದಾರೆ ಎಂಬುದು ತಿಳಿಯುತ್ತಿದ್ದಂತೆ, ಆ ತಾಯಿಯ ಪರಿಸ್ಥಿತಿ ಹೇಗಾಗಿರಬೇಡ. ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ ಕಿರುಕುಳು ಹೆಚ್ಚಾಗಿವೆ. ಕೋಟ್ಯಂತರ ಹಣ ಖರ್ಚು ಮಾಡಿ ಮಗಳ ಮದುವೆ ಮಾಡಿಕೊಟ್ಟರೂ ಆಕೆಗೆ ಅಲ್ಲಿ ಸುಖವಿಲ್ಲ ಎಂಬುದನ್ನು ಕೇಳಿ ಪೋಷಕರು ಕೊರಗುತ್ತಿದ್ದಾರೆ.

ವರದಕ್ಷಿಣೆಗಾಗಿ ಮಗಳ ಕೊಲೆ, ಆಕೆಯ ಶವ ನೋಡಿ ಪ್ರಾಣಬಿಟ್ಟ ತಾಯಿ
ಮದುವೆ
ನಯನಾ ರಾಜೀವ್
|

Updated on: Sep 12, 2025 | 11:40 AM

Share

ಬಿಹಾರ, ಸೆಪ್ಟೆಂಬರ್ 12: ತಮ್ಮ ಮಗಳು ಎಂದೂ ಗಂಡನ ಮನೆಯಲ್ಲಿ ಸುಖವಾಗಿರಬೇಕು ಎಂಬುದು ತಂದೆ-ತಾಯಿಯ ಆಸೆಯಾಗಿರುತ್ತದೆ. ಆದರೆ ವರದಕ್ಷಿಣೆ(Dowry)ಗಾಗಿ ಆಕೆಯನ್ನು ಕೊಲೆ ಮಾಡಿದ್ದಾರೆ ಎಂಬುದು ತಿಳಿಯುತ್ತಿದ್ದಂತೆ, ಆ ತಾಯಿಯ ಪರಿಸ್ಥಿತಿ ಹೇಗಾಗಿರಬೇಡ. ಇತ್ತೀಚಿನ ದಿನಗಳಲ್ಲಿ ವರದಕ್ಷಿಣೆ ಕಿರುಕುಳು ಹೆಚ್ಚಾಗಿವೆ. ಕೋಟ್ಯಂತರ ಹಣ ಖರ್ಚು ಮಾಡಿ ಮಗಳ ಮದುವೆ ಮಾಡಿಕೊಟ್ಟರೂ ಆಕೆಗೆ ಅಲ್ಲಿ ಸುಖವಿಲ್ಲ ಎಂಬುದನ್ನು ಕೇಳಿ ಪೋಷಕರು ಕೊರಗುತ್ತಿದ್ದಾರೆ.

ಬಿಹಾರದಲ್ಲಿ ವರದಕ್ಷಿಣೆಗಾಗಿ ಮಹಿಳೆಯ ಕೊಲೆ ಮಾಡಲಾಗಿದ್ದು, ಮಗಳ ಶವ ಕಂಡು ತಾಯಿಯೊಬ್ಬರು ಪ್ರಾಣ ಬಿಟ್ಟಿರುವ ಹೃದಯವಿದ್ರಾವಕ ಘಟನೆ ವರದಿಯಾಗಿದೆ. ಮಹಿಳೆಯೊಬ್ಬಳನ್ನು ಆಕೆಯ ಅತ್ತೆ-ಮಾವ ಕತ್ತು ಹಿಸುಕಿ ಕೊಂದ ಘಟನೆ ನಡೆದಿದೆ. ಆಸ್ಪತ್ರೆಯಲ್ಲಿ ಮಗಳ ಶವವನ್ನು ನೋಡಿದ ಕೆಲವೇ ಗಂಟೆಗಳಲ್ಲಿ ಮಹಿಳೆಯ ತಾಯಿಯೂ ಸಾವನ್ನಪ್ಪಿದ್ದಾರೆ.

ಮೃತರನ್ನು ಸುನೈನಾ ದೇವಿ ಮತ್ತು ಅವರ ತಾಯಿ ಬಬ್ಲಿ ದೇವಿ ಎಂದು ಗುರುತಿಸಲಾಗಿದೆ. ಸುನೈನಾ ದೇವಿಯ ಗಂಡನಿಗೆ ಸರಿಯಾದ ಕೆಲಸವಿರಲಿಲ್ಲ ಹೀಗಾಗಿ ಅವರ ನಡುವೆ ನಿತ್ಯವೂ ಜಗಳವಾಗುತ್ತಿತ್ತು.ಹಾಗೆಯೇ ಆಕೆಯ ಅತ್ತೆ-ಮಾವ ವರದಕ್ಷಿಣೆಗಾಗಿ ನಿರಂತರವಾಗಿ ಬೇಡಿಕೆ ಇಡುತ್ತಿದ್ದರು.

ಮತ್ತಷ್ಟು ಓದಿ:  Video: ವರದಕ್ಷಿಣೆ ಕಿರುಕುಳ, ಮಕ್ಕಳ ಎದುರೇ ಮನೆಯ ತಾರಿಸಿಯಿಂದ ಜಿಗಿದ ಮಹಿಳೆ, ಗಾಯಗೊಂಡಾಕೆಯ ಥಳಿಸಿದ ಕುಟುಂಬಸ್ಥರು

ಸುನೈನಾ ಅವರ ಸಾವಿನ ಸುದ್ದಿ ಅವರ ಕುಟುಂಬಕ್ಕೆ ತಲುಪಿದಾಗ, ಅವರ ತಾಯಿ ಭಾಗಲ್ಪುರದ ಜೆಎಲ್ಎನ್ ಆಸ್ಪತ್ರೆಗೆ ಸಂಬಂಧಿಕರೊಬ್ಬರೊಂದಿಗೆ ಇದ್ದರು. ಮಗಳ ಶವವನ್ನು ನೋಡಿದ ಬಬ್ಲಿ ದೇವ್ ಆಘಾತದಿಂದ ಕುಸಿದು ಬಿದ್ದರು. ನಂತರ ವೈದ್ಯರು ಬಬ್ಲಿ ದೇವಿಗೆ ಮೆದುಳಿನಲ್ಲಿ ರಕ್ತಸ್ರಾವವಾಗಿದ್ದು, ಇದರಿಂದಾಗಿ ಅವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಿದ್ದಾರೆ.

ಏತನ್ಮಧ್ಯೆ, ಸುನೈನಾ ಅವರ ಮರಣೋತ್ತರ ಪರೀಕ್ಷೆಯ ಬಗ್ಗೆ ಎರಡೂ ಕುಟುಂಬಗಳ ನಡುವೆ ವಿವಾದವೂ ಇತ್ತು. ಆದರೆ, ಪೊಲೀಸರು ಮಧ್ಯಪ್ರವೇಶಿಸಿ ಮರಣೋತ್ತರ ಪರೀಕ್ಷೆ ನಡೆಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ   

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ