ಅಮ್ಮನನ್ನು ಅಪ್ಪ ಲೈಟರ್​​ನಿಂದ ಸುಟ್ಟು ಕೊಂದ್ರು, ಪೊಲೀಸರೆದುರು ಸತ್ಯ ಬಿಚ್ಚಿಟ್ಟ ಮಗ

ಅಮ್ಮನನ್ನು ಅಪ್ಪ ಲೈಟರ್​​ನಿಂದ ಸುಟ್ಟು ಕೊಲೆ(Murder) ಮಾಡಿದ್ದಾರೆ ಎಂದು ಮಗ ತಂದೆಯ ವಿರುದ್ಧ ಹೇಳಿಕೆ ನೀಡಿದ್ದಾನೆ. ಗ್ರೇಟರ್​​ ನೋಯ್ಡಾದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ವಿಚಾರಣೆ ಸಮಯದಲ್ಲಿ 6 ವರ್ಷದ ಬಾಲಕ ಸಂಪೂರ್ಣ ಸತ್ಯವನ್ನು ಬಿಚ್ಚಿಟ್ಟಿದ್ದಾನೆ. ಅಪ್ಪ ತನ್ನ ತಾಯಿಯನ್ನು ತನ್ನ ಮುಂದೆಯೇ ಕೊಂದಿರುವುದಾಗಿ ತಿಳಿಸಿದ್ದಾನೆ. ಆಕೆಗೆ ನೀಡಿರುವ ಹಿಂಸೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ.

ಅಮ್ಮನನ್ನು ಅಪ್ಪ ಲೈಟರ್​​ನಿಂದ ಸುಟ್ಟು ಕೊಂದ್ರು, ಪೊಲೀಸರೆದುರು ಸತ್ಯ ಬಿಚ್ಚಿಟ್ಟ ಮಗ
ಸಾವು
Image Credit source: India Today

Updated on: Aug 24, 2025 | 8:19 AM

ಉತ್ತರ ಪ್ರದೇಶ, ಆಗಸ್ಟ್​ 24: ಅಮ್ಮನನ್ನು ಅಪ್ಪ ಲೈಟರ್​​ನಿಂದ ಸುಟ್ಟು ಕೊಲೆ(Murder) ಮಾಡಿದ್ದಾರೆ ಎಂದು ಮಗ ತಂದೆಯ ವಿರುದ್ಧ ಹೇಳಿಕೆ ನೀಡಿದ್ದಾನೆ. ಗ್ರೇಟರ್​​ ನೋಯ್ಡಾದಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ವಿಚಾರಣೆ ಸಮಯದಲ್ಲಿ 6 ವರ್ಷದ ಬಾಲಕ ಸಂಪೂರ್ಣ ಸತ್ಯವನ್ನು ಬಿಚ್ಚಿಟ್ಟಿದ್ದಾನೆ. ಅಪ್ಪ ತನ್ನ ತಾಯಿಯನ್ನು ತನ್ನ ಮುಂದೆಯೇ ಕೊಂದಿರುವುದಾಗಿ ತಿಳಿಸಿದ್ದಾನೆ. ಆಕೆಗೆ ನೀಡಿರುವ ಹಿಂಸೆಯನ್ನು ಎಳೆ ಎಳೆಯಾಗಿ ಬಿಚ್ಚಿಟ್ಟಿದ್ದಾನೆ. ಆ ಭಯಾನಕ ಘಟನೆಯನ್ನು ನೆನಪಿಸಿಕೊಳ್ಳುತ್ತಾ, ತನ್ನ ತಂದೆ ಮತ್ತೆ ಅಜ್ಜಿ ಸೇರಿ ಅಮ್ಮನ ಮೇಲೆ ಏನೋ ಸುರಿದು , ಕಪಾಳಮೋಕ್ಷ ಮಾಡಿ ಲೈಟರ್​​ನಿಂದ ಬೆಂಕಿ ಹಚ್ಚಿದ್ದರು ಎಂದು ಬಾಲಕ ಹೇಳಿದ್ದಾನೆ.

ಈ ಭಯಾನಕ ಘಟನೆಯ ಎರಡು ವೀಡಿಯೊಗಳು ಅಂತರ್ಜಾಲದಲ್ಲಿ ಹರಿದಾಡುತ್ತಿವೆ. ಒಂದು ವಿಡಿಯೋದಲ್ಲಿ ವ್ಯಕ್ತಿ ಮತ್ತು ಮಹಿಳೆಯೊಬ್ಬರು ಬಾಲಕನ ತಾಯಿ(ನಿಕ್ಕಿ) ಮೇಲೆ ಹಲ್ಲೆ ನಡೆಸಿ ಕೂದಲು ಹಿಡಿದು ಮನೆಯ ಹೊರಗೆ ಎಳೆದುಕೊಂಡು ಹೋಗುವುದನ್ನು ಕಾಣಬಹುದು. ಇನ್ನೊಂದು ವೀಡಿಯೊದಲ್ಲಿ ಮಹಿಳೆ ಬೆಂಕಿ ಹಚ್ಚಿದ ನಂತರ ಮೆಟ್ಟಿಲುಳಿಂದ ಕುಂಟುತ್ತಾ ಇಳಿಯುವುದನ್ನು ಕಾಣಬಹುದು.

ನೋಯ್ಡಾದ ಕಸ್ನಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿರ್ಸಾ ಗ್ರಾಮದಲ್ಲಿ ನಡೆದ ಘಟನೆಯ ವಿಡಿಯೋವನ್ನು ಮೃತರ ಅಕ್ಕ ಕಾಂಚನ್ ಸೆರೆ ಹಿಡಿದಿದ್ದಾರೆ. ಬಳಿಕ ಅವರು ಮಾತನಾಡಿ, ತನ್ನ ತಂಗಿಗೆ ವಿಪಿನ್ ಹಾಗೂ ಆತನ ಮನೆಯವರು 36 ಲಕ್ಷ ರೂ. ವರದಕ್ಷಿಣೆ ಬೇಡಿಕೆ ಇಟ್ಟಿದ್ದರು.

ಮತ್ತಷ್ಟು ಓದಿ: ದೆಹಲಿಯಲ್ಲಿ ತ್ರಿವಳಿ ಕೊಲೆ; ಅಪ್ಪ, ಅಮ್ಮ, ತಮ್ಮನನ್ನು ಕೊಂದು ಯುವಕ ಪರಾರಿ

ಗುರುವಾರ ರಾತ್ರಿ, ಆಕೆಯನ್ನು ತೀವ್ರವಾಗಿ ಥಳಿಸಿ ಬೆಂಕಿ ಹಚ್ಚಲಾಯಿತು. ಕಳೆದ ಹಲವು ದಿನಗಳಿಂದ ವರದಕ್ಷಿಣೆಗಾಗಿ ನಮ್ಮನ್ನು ಥಳಿಸಿ ಚಿತ್ರಹಿಂಸೆ ನೀಡಲಾಗುತ್ತಿತ್ತು. ಅವರು 36 ಲಕ್ಷ ರೂ. ವರದಕ್ಷಿಣೆಗಾಗಿ ಬೇಡಿಕೆ ಇಡುತ್ತಿದ್ದರು ಎಂದು ಮಹಿಳೆ ಹೇಳಿದ್ದಾರೆ. ಮೃತ ಮಹಿಳೆಯ ಸಹೋದರಿ ಕಾಂಚನ್  ವಿಪಿನ್ ಸಹೋದರನ ಪತ್ನಿ.

ಅವರು ತನ್ನ ತಂಗಿಯ ಕುತ್ತಿಗೆ ಹಾಗೂ ತಲೆಗೆ ಹೊಡೆದು ಆಕೆಯ ಮೇಲೆ ಆ್ಯಸಿಡ್ ಎರಚಿದ್ದರು. ನಮ್ಮ ಮಕ್ಕಳು ಸಹ ಅದೇ ಮನೆಯಲ್ಲಿದ್ದರು. ನನಗೆ ಏನೂ ಮಾಡಲು ಸಾಧ್ಯವಾಗಲಿಲ್ಲ. ಅವರು ನನ್ನ ಮೇಲೆ ಕೂಡ ಹಲ್ಲೆ ನಡೆಸಿದ್ದರು ಎಂದು ಅಳಲು ತೋಡಿಕೊಂಡಿದ್ದಾರೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:18 am, Sun, 24 August 25

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us