AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನಮೋಹನ್ ಸಿಂಗ್ ನಿಧನಕ್ಕೆ ಆರ್​ಎಎಸ್​ಎಸ್ ತೀವ್ರ ಸಂತಾಪ: ಭಾರತಕ್ಕೆ ಸಿಂಗ್ ಕೊಡುಗೆ ಸದಾ ಸ್ಮರಣೀಯ ಎಂದ ಭಾಗವತ್

ದೇಶದ ಖ್ಯಾತ ಅರ್ಥಶಾಸ್ತ್ರಜ್ಞ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ತೀವ್ರ ಸಂತಾಪ ಸೂಚಿಸಿದೆ. ಸಿಂಗ್ ಅವರು ಭಾರತಕ್ಕೆ ಕೊಟ್ಟ ಕೊಡುಗೆಯನ್ನು ದೇಶ ಸದಾ ಸ್ಮರಿಸಲಿದೆ. ಸಿಂಗ್ ನಿಧನದಿಂದ ದೇಶವು ತೀವ್ರ ದುಃಖಕ್ಕೀಡಾಗಿದೆ ಎಂದು ಆರ್​ಎಸ್​ಎಸ್ ಶೋಕ ಸಂದೇಶದಲ್ಲಿ ತಿಳಿಸಿದೆ.

ಮನಮೋಹನ್ ಸಿಂಗ್ ನಿಧನಕ್ಕೆ ಆರ್​ಎಎಸ್​ಎಸ್ ತೀವ್ರ ಸಂತಾಪ: ಭಾರತಕ್ಕೆ ಸಿಂಗ್ ಕೊಡುಗೆ ಸದಾ ಸ್ಮರಣೀಯ ಎಂದ ಭಾಗವತ್
ಮನಮೋಹನ್ ಸಿಂಗ್, ಆರ್​ಎಸ್​ಎಸ್ ಮುಖ್ಯಸ್ಥ ಮೋಹನ್ ಭಾಗವತ್
Ganapathi Sharma
|

Updated on: Dec 27, 2024 | 10:37 AM

Share

ನವದೆಹಲಿ, ಡಿಸೆಂಬರ್ 27: ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನಕ್ಕೆ ರಾಷ್ಟ್ರೀಯ ಸ್ವಯಂಸೇವಕ ಸಂಘ ತೀವ್ರ ಸಂತಾಪ ಸೂಚಿಸಿದೆ. ಆರ್​ಎಸ್​​ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶೋಕ ಸಂದೇಶ ಪ್ರಕಟಿಸಿದ್ದು, ಸಿಂಗ್ ನಿಧನದಿಂದ ದೇಶವು ತೀವ್ರ ದುಃಖತಪ್ತವಾಗಿದೆ ಎಂದು ಉಲ್ಲೇಖಿಸಿದ್ದಾರೆ.

ಆರ್​​ಎಸ್​​ಎಸ್ ಶೋಕ​ ಸಂದೇಶದಲ್ಲೇನಿದೆ?

ದೇಶದ ಅತ್ಯುನ್ನತ ನಾಯಕ, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ನಿಧನದಿಂದ ದೇಶವು ತೀವ್ರ ದುಃಖತಪ್ತವಾಗಿದೆ. ಅವರ ಕುಟುಂಬಕ್ಕೆ, ಅಸಂಖ್ಯಾತ ಪ್ರೀತಿಪಾತ್ರರಿಗೆ ಮತ್ತು ಅಭಿಮಾನಿಗಳಿಗೆ ರಾಷ್ಟ್ರೀಯ ಸ್ವಯಂಸೇವಕ ಸಂಘವು ತೀವ್ರ ಸಂತಾಪವನ್ನು ಸೂಚಿಸುತ್ತದೆ. ಸಿಂಗ್ ಅವರು ಬಡತನದ ಹಿನ್ನೆಲೆಯಿಂದ ಬಂದರೂ ದೇಶದ ಅತ್ಯುನ್ನತ ಹುದ್ದೆಯನ್ನು ಅಲಂಕರಿಸಿದ್ದರು. ಖ್ಯಾತ ಅರ್ಥಶಾಸ್ತ್ರಜ್ಞ ಡಾ. ಸಿಂಗ್ ಅವರು ಭಾರತಕ್ಕೆ ಕೊಟ್ಟ ಕೊಡುಗೆ ಎಂದೆಂದಿಗೂ ಸ್ಮರಿಸಲಾಗುತ್ತದೆ ಮತ್ತು ಗೌರವಾರ್ಹ. ಅಗಲಿದ ಆತ್ಮಕ್ಕೆ ಸದ್ಗತಿ ನೀಡಲಿ ಎಂದು ಆ ಪರಮಾತ್ಮನಲ್ಲಿ ಪ್ರಾರ್ಥಿಸುತ್ತೇವೆ ಎಂದು ಆರ್​ಎಸ್​​ಎಸ್ ಮುಖ್ಯಸ್ಥ (ಸರಸಂಘ ಚಾಲಕ) ಮೋಹನ್ ಭಾಗವತ್ ಮತ್ತು ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಶೋಕ ಸಂದೇಶದಲ್ಲಿ ಉಲ್ಲೇಖಿಸಿದ್ದಾರೆ.

ಆರ್​​ಎಸ್​​ಎಸ್ ಶೋಕ​ ಸಂದೇಶ

ಮನಮೋಹನ್ ಸಿಂಗ್ ಗುರುವಾರ ಸಂಜೆ ದೆಹಲಿಯ ಏಮ್ಸ್‌ನಲ್ಲಿ 92 ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ನಿಧನರಾದರು. ಮನೆಯಲ್ಲಿ ಇದ್ದಕ್ಕಿದ್ದಂತೆ ಪ್ರಜ್ಞೆ ತಪ್ಪಿದ್ದ ಅವರನ್ನು ದೆಹಲಿಯ ಏಮ್ಸ್‌ಗೆ ಕರೆದೊಯ್ಯಲಾಗಿತ್ತು. ಅಲ್ಲಿ ಅವರು ಕೊನೆಯುಸಿರೆಳೆದರು.

ಮನಮೋಹನ್ ಸಿಂಗ್ ಪುತ್ರಿ ಶುಕ್ರವಾರ ಮಧ್ಯರಾತ್ರಿ ವೇಳೆಗೆ ಭಾರತಕ್ಕೆ ಆಗಮಿಸಲಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. ಮಾಜಿ ಪ್ರಧಾನಿಯ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕಾಗಿ ಎಐಸಿಸಿ ಪ್ರಧಾನ ಕಚೇರಿಯಲ್ಲಿ ಶನಿವಾರ ಬೆಳಗ್ಗೆ ಇರಿಸಲಾಗುವುದು ಎಂದು ಕಾಂಗ್ರೆಸ್ ತಿಳಿಸಿದೆ.

ಇದನ್ನೂ ಓದಿ: ದಿವಾಳಿಯಂಚಿನಲ್ಲಿದ್ದ ದೇಶವನ್ನು ಆ ಒಂದು ಬಜೆಟ್​ನಿಂದ ರಕ್ಷಿಸಿದ್ದ ಮನಮೋಹನ್ ಸಿಂಗ್!

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನದ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯವು ದೇಶಾದ್ಯಂತ ಏಳು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಘೋಷಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು