AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯ ಕರಡು ಸಲ್ಲಿಕೆಗೆ ಸಿದ್ಧ: ಸಮಿತಿ ಮುಖ್ಯಸ್ಥೆ ರಂಜನಾ ದೇಸಾಯಿ

ಉತ್ತರಾಖಂಡದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ಕರಡು ಈಗ ಪೂರ್ಣಗೊಂಡಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗುತ್ತಿದೆ ಎಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇಸಾಯಿ ಹೇಳಿದ್ದಾರೆ.

ಉತ್ತರಾಖಂಡದ ಏಕರೂಪ ನಾಗರಿಕ ಸಂಹಿತೆಯ ಕರಡು ಸಲ್ಲಿಕೆಗೆ ಸಿದ್ಧ: ಸಮಿತಿ ಮುಖ್ಯಸ್ಥೆ ರಂಜನಾ ದೇಸಾಯಿ
ರಂಜನಾ ದೇಸಾಯಿ
ರಶ್ಮಿ ಕಲ್ಲಕಟ್ಟ
| Updated By: ಡಾ. ಭಾಸ್ಕರ ಹೆಗಡೆ|

Updated on:Jun 30, 2023 | 6:15 PM

Share

ಉತ್ತರಾಖಂಡದ (Uttarakhand) ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ (Uniform Civil Code) ಕರಡು ಪೂರ್ಣಗೊಂಡಿದ್ದು, ಶೀಘ್ರದಲ್ಲೇ ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ನ್ಯಾಯಮೂರ್ತಿ (ನಿವೃತ್ತ) ರಂಜನಾ ಪ್ರಕಾಶ್ ದೇಸಾಯಿ (Ranjana Prakash Desai )ಇಂದು(ಶುಕ್ರವಾರ)ಹೇಳಿದ್ದಾರೆ. ಕಳೆದ ವರ್ಷ ಉತ್ತರಾಖಂಡ ಸರ್ಕಾರವು ಸ್ಥಾಪಿಸಿದ ತಜ್ಞರ ಸಮಿತಿಯ ಮುಖ್ಯಸ್ಥರಾದ ದೇಸಾಯಿ, ಸಮಿತಿಯು ಎಲ್ಲಾ ಅಭಿಪ್ರಾಯಗಳನ್ನು ಗಣನೆಗೆ ತೆಗೆದುಕೊಂಡು ಸಂಹಿತೆಯನ್ನು ರಚಿಸಿದೆ. ಆಯ್ದ ದೇಶಗಳಲ್ಲಿನ ಶಾಸನಬದ್ಧ ಚೌಕಟ್ಟು ಸೇರಿದಂತೆ ವಿವಿಧ ಕಾನೂನುಗಳು ಪರಿಶೀಲಿಸಲಾಗಿದೆ ಎಂದು ಅವರು ಹೇಳಿದ್ದಾರೆ. ಇದಲ್ಲದೆ, ಸಮಿತಿಯು ಉತ್ತರಾಖಂಡದ ವಿವಿಧ ಭಾಗಗಳಲ್ಲಿ ಚಾಲ್ತಿಯಲ್ಲಿರುವ ವಿವಿಧ ಸಾಂಪ್ರದಾಯಿಕ ಆಚರಣೆಗಳ ಅತೀ ಸೂಕ್ಷ್ಮ ವ್ಯತ್ಯಾಸಗಳನ್ನು ಅರ್ಥಮಾಡಿಕೊಳ್ಳಲು ಪ್ರಯತ್ನಿಸಿದೆ ಎಂದಿದ್ದಾರೆ. ಈ ಬೆಳವಣಿಗೆ ಬಹಳ ಮಹತ್ವಪೂರ್ಣ ಎನಿಸಿದೆ. ಯಾಕೆಂದರೆ, ಕೇಂದ್ರದಲ್ಲಿ ಅಧಿಕಾರದಲ್ಲಿರುವ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಕೂಡ ಈಗ ಏಕರೂಪ ನಾಗರಿಕ ಸಂಹಿತೆ ತರುವ ಬಗ್ಗೆ ಒಲವು ತೋರಿಸಿದೆ. ಈ ಹಿನ್ನೆಲೆಯಲ್ಲಿ, ಉತ್ತರಾಖಂಡದಲ್ಲಿ ನಡೆದಿರುವ ಈ ಬೆಳವಣಿಗೆ ಮಹತ್ವ ಪಡೆದುಕೊಂಡಿದೆ. ಉತ್ತರಾಖಂಡದ ಉದ್ದೇಶಿತ ಏಕರೂಪ ನಾಗರಿಕ ಸಂಹಿತೆಯ ಕರಡು ಈಗ ಪೂರ್ಣಗೊಂಡಿದೆ ಎಂದು ನಿಮಗೆ ತಿಳಿಸಲು ನನಗೆ ಸಂತೋಷವಾಗುತ್ತಿದೆ ಎಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ದೇಸಾಯಿ ಹೇಳಿದ್ದಾರೆ. ಏಕರೂಪ ನಾಗರಿಕ ಸಂಹಿತೆಯ ಕರಡು ಜತೆ ಸಮಿತಿಯ ವರದಿಯನ್ನು ಶೀಘ್ರದಲ್ಲೇ ಮುದ್ರಿಸಿ ಉತ್ತರಾಖಂಡ ಸರ್ಕಾರಕ್ಕೆ ಸಲ್ಲಿಸಲಾಗುವುದು ಎಂದು ಅವರು ಹೇಳಿದರು.

ಉತ್ತರಾಖಂಡದ ನಿವಾಸಿಗಳ ವೈಯಕ್ತಿಕ  ವಿಷಯಗಳನ್ನು ನಿಯಂತ್ರಿಸುವ ವಿವಿಧ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಪರಿಶೀಲಿಸಲು ಮತ್ತು ಕರಡು ಕಾನೂನು ಅಥವಾ ಕಾನೂನುಗಳನ್ನು ತಯಾರಿಸಲು ಅಥವಾ ಅಸ್ತಿತ್ವದಲ್ಲಿರುವ ಕಾನೂನುಗಳಲ್ಲಿ ಬದಲಾವಣೆಗಳನ್ನು ಸೂಚಿಸಲು ಉತ್ತರಾಖಂಡ ಸರ್ಕಾರವು ಕಳೆದ ವರ್ಷ ಮೇ ತಿಂಗಳಲ್ಲಿ ನಿವೃತ್ತ ಸುಪ್ರೀಂಕೋರ್ಟ್ ನ್ಯಾಯಾಧೀಶೆ ದೇಸಾಯಿ ಅವರ ನೇತೃತ್ವದಲ್ಲಿ ತಜ್ಞರ ಸಮಿತಿಯನ್ನು ರಚಿಸಿತ್ತು.

ಈ ನಿಟ್ಟಿನಲ್ಲಿ ಮೇ 27, 2022 ರಂದು ಅಧಿಸೂಚನೆಯನ್ನು ಹೊರಡಿಸಲಾಗಿದ್ದು, ಕಳೆದ ವರ್ಷ ಜೂನ್ 10 ರಂದು ಉಲ್ಲೇಖದ ನಿಯಮಗಳನ್ನು ತಿಳಿಸಲಾಯಿತು.  ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಗಳಿಗೆ ಉತ್ತರಿಸಿದ ದೇಸಾಯಿ, ಕರಡು ಯುಸಿಸಿ ಅಥವಾ ಸಮಿತಿಯ ವರದಿಯ ವಿವರಗಳನ್ನು ಹಂಚಿಕೊಳ್ಳಲು ನಿರಾಕರಿಸಿದ್ದು, ಅದನ್ನು ಮೊದಲು ರಾಜ್ಯ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಹೇಳಿದರು.

ಇದನ್ನೂ ಓದಿ: Uniform Civil Code: ಏಕರೂಪ ನಾಗರಿಕ ಸಂಹಿತೆ ಧರ್ಮ, ವೈಯಕ್ತಿಕ ಕಾನೂನುಗಳ ಮೇಲೆ ಹೇಗೆ ಪರಿಣಾಮ ಬೀರುತ್ತದೆ?

ಮಹಿಳೆಯರು, ಮಕ್ಕಳು ಮತ್ತು ಅಂಗವಿಕಲರನ್ನು ಗಮನದಲ್ಲಿಟ್ಟುಕೊಂಡು ಲಿಂಗ ಸಮಾನತೆಯನ್ನು ಖಚಿತಪಡಿಸುವುದು. ನಾವು ಅನಿಯಂತ್ರಿತತೆ ಮತ್ತು ತಾರತಮ್ಯವನ್ನು ತೊಡೆದುಹಾಕುವ ಮೂಲಕ ಎಲ್ಲರನ್ನೂ ಸಮಾನ ಹೆಜ್ಜೆಯಲ್ಲಿ ತರಲು ಪ್ರಯತ್ನಿಸಿದ್ದೇವೆ. ಸಮಿತಿಯು ಮುಸ್ಲಿಂ ರಾಷ್ಟ್ರಗಳು ಸೇರಿದಂತೆ ವಿವಿಧ ದೇಶಗಳಲ್ಲಿ ಅಸ್ತಿತ್ವದಲ್ಲಿರುವ ಕಾನೂನುಗಳನ್ನು ಅಧ್ಯಯನ ಮಾಡಿದೆ. ಆದರೆ ಅದರ ಹೆಸರುಗಳನ್ನು ಹಂಚಿಕೊಳ್ಳಲು ದೇಸಾಯಿ ನಿರಾಕರಿಸಿದ್ದಾರೆ.

ನಾವು ಎಲ್ಲವನ್ನೂ ನೋಡಿದ್ದೇವೆ, ವೈಯಕ್ತಿಕ ಕಾನೂನುಗಳನ್ನು ಅಧ್ಯಯನ ಮಾಡಿದ್ದೇವೆ. ನಾವು ಕಾನೂನು ಆಯೋಗದ ವರದಿಯನ್ನು ಸಹ ಅಧ್ಯಯನ ಮಾಡಿದ್ದೇವೆ. ನೀವು ನಮ್ಮ ಕರಡನ್ನು ಓದಿದರೆ ಸಮಿತಿಯು ಎಲ್ಲವನ್ನೂ ಪರಿಗಣಿಸಿದೆ ಎಂದು ನಿಮಗೆ ಅನಿಸುತ್ತದೆ ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:48 pm, Fri, 30 June 23

ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು