AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೆಹಲಿ ಸಿಎಂ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿ ಘೋಷಣೆ ಕೂಗಿದ ವ್ಯಕ್ತಿ

ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಅವರ ವಿರುದ್ಧ ಘೋಷಣೆ ಕೂಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಗಾಂಧಿ ನಗರದ ಅಜೀತ್ ನಗರದ ಪ್ರವೀಣ್ ಶರ್ಮಾ (60) ಎಂಬ ವ್ಯಕ್ತಿ, ಟಿವಿ ಕೇಬಲ್ ವ್ಯವಹಾರ ನಡೆಸುತ್ತಿದ್ದು, ಕಳೆದ 40 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನೆಂದು ಹೇಳಿಕೊಳ್ಳುತ್ತಿದ್ದಾರೆ.

ದೆಹಲಿ ಸಿಎಂ ರೇಖಾ ಗುಪ್ತಾ ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿ ಘೋಷಣೆ ಕೂಗಿದ ವ್ಯಕ್ತಿ
ರೇಖಾ ಗುಪ್ತಾ
ನಯನಾ ರಾಜೀವ್
|

Updated on: Aug 22, 2025 | 2:27 PM

Share

ನವದೆಹಲಿ, ಆಗಸ್ಟ್​ 22: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ(Rekha Gupta) ಭಾಗವಹಿಸಿದ್ದ ಕಾರ್ಯಕ್ರಮಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಅವರ ವಿರುದ್ಧ ಘೋಷಣೆ ಕೂಗಿರುವ ಘಟನೆ ನವದೆಹಲಿಯಲ್ಲಿ ನಡೆದಿದೆ. ದೆಹಲಿಯ ಗಾಂಧಿ ನಗರದ ಅಜೀತ್ ನಗರದ ಪ್ರವೀಣ್ ಶರ್ಮಾ (60) ಎಂಬ ವ್ಯಕ್ತಿ, ಟಿವಿ ಕೇಬಲ್ ವ್ಯವಹಾರ ನಡೆಸುತ್ತಿದ್ದು, ಕಳೆದ 40 ವರ್ಷಗಳಿಂದ ಬಿಜೆಪಿ ಕಾರ್ಯಕರ್ತನೆಂದು ಹೇಳಿಕೊಳ್ಳುತ್ತಿದ್ದಾರೆ.

ಇಂದು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡುತ್ತಿದ್ದಾಗ ಶಾಸಕ ಶ್ರೀ ಅರವಿಂದರ್ ಸಿಂಗ್ ಲವ್ಲಿ ವಿರುದ್ಧ ಘೋಷಣೆಗಳನ್ನು ಕೂಗಿದರು. ಪ್ರವೀಣ್ ಶರ್ಮಾ ತಮ್ಮ ಧ್ವನಿ ಮುಖ್ಯಮಂತ್ರಿಯನ್ನು ತಲುಪಬೇಕೆಂದು ಬಯಸಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರವೀಣ್ ಶರ್ಮಾ ಬ್ಯಾರಿಕೇಡ್‌ಗಳ ಹಿಂದೆ, ಒಂದು ಬದಿಯಲ್ಲಿ ನಿಂತಿದ್ದರು ಮತ್ತು ಅವರನ್ನು ಪೊಲೀಸರು ತಕ್ಷಣವೇ ಹಿಡಿದಿದ್ದಾರೆ. ಭದ್ರತೆಯ ಉಲ್ಲಂಘಿಸಲಾಗಿಲ್ಲ ಎಂದು ಪೊಲೀಸ್ ಅಧಿಕಾರಿ ಹೇಳಿದರು. ರಾಷ್ಟ್ರ ರಾಜಧಾನಿಯ ಸಿವಿಲ್ ಲೈನ್ಸ್ ನಿವಾಸದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಭೆಯಲ್ಲಿ ರೇಖಾ ಗುಪ್ತಾ ಮೇಲೆ ದಾಳಿ ನಡೆದ ಕೆಲವು ದಿನಗಳ ನಂತರ ಈ ಬೆಳವಣಿಗೆ ನಡೆದಿದೆ .

ಮತ್ತಷ್ಟು ಓದಿ: Rekha Gupta Attacked: ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಮೇಲೆ ಹಲ್ಲೆ

ರಾಜೇಶ್ ಭಾಯಿ ಖಿಮ್ಜಿ ಸಕರೈಯಾ ಎಂಬ ವ್ಯಕ್ತಿ ಮೊದಲು ಕೆಲವು ಕಾಗದಪತ್ರಗಳನ್ನು ಮುಖ್ಯಮಂತ್ರಿಯವರಿಗೆ ಹಸ್ತಾಂತರಿಸಿ, ನಂತರ ಕೂಗುತ್ತಾ ಸಿಂಗೆ ಹೊಡೆದು, ಕೂದಲು ಹಿಡಿದು ಎಳೆದಿದ್ದಾನೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತಕ್ಷಣವೇ ಆತನನ್ನು ಬಂಧಿಸಲಾಯಿತು. ಪೊಲೀಸ್ ಮೂಲಗಳ ಪ್ರಕಾರ, ರಾಜೇಶ್ ಸಕಾರಿಯ ಅವರ ಸಂಬಂಧಿಕರೊಬ್ಬರು ಜೈಲಿನಲ್ಲಿದ್ದಾರೆ ಮತ್ತು ಅವರು ತಮ್ಮ ಬಿಡುಗಡೆಗಾಗಿ ಅರ್ಜಿಯೊಂದಿಗೆ ಬಂದಿದ್ದರು.

ಈ ಪ್ರಕರಣವು ಪ್ರಸ್ತುತ ನ್ಯಾಯಾಲಯದಲ್ಲಿ ಬಾಕಿ ಇದೆ. ಅವರ ಕುಟುಂಬವು ಅವರ ಹಿನ್ನೆಲೆಯ ಬಗ್ಗೆಯೂ ಬೆಳಕು ಚೆಲ್ಲಿದೆ. ಪೊಲೀಸರು ಅವರನ್ನು ಬಂಧಿಸುವ ಮೊದಲು ಕಾರ್ಯಕ್ರಮದಲ್ಲಿದ್ದ ಇತರರು ಅವರನ್ನು ಥಳಿಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಹೇಳಿದ್ದಾರೆ.

ಘಟನೆಯ ಒಂದು ದಿನದ ನಂತರ, ಕೇಂದ್ರ ಗೃಹ ಸಚಿವಾಲಯ ನಡೆಸಿದ ಪರಿಶೀಲನೆಯ ನಂತರ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಅವರ ಭದ್ರತಾ ವ್ಯಾಪ್ತಿಯನ್ನು ಹೆಚ್ಚಿಸಲಾಯಿತು.ಝಡ್ ಶ್ರೇಣಿಯ ಭದ್ರತೆಯನ್ನು ಕಲ್ಪಿಸಲಾಯಿತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ