AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಚಕುಲದಲ್ಲಿ ಡಿಆರ್‌ಡಿಒ ಹೈ-ಪವರ್ ಬಾಂಬ್ ಪರೀಕ್ಷೆ: ನಿವಾಸಿಗಳಿಗೆ ಮನೆಯೊಳಗೆ ಇರುವಂತೆ ಸೂಚನೆ

ಡಿಆರ್​ಡಿಒ ಹರಿಯಾಣದ ಪಂಚಕುಲದಲ್ಲಿ ಮೇ 31 ರಂದು ಅತ್ಯಂತ ಶಕ್ತಿಶಾಲಿ ಬಾಂಬ್ ಪರೀಕ್ಷೆ ನಡೆಸಲಿದೆ. ರಾಮಗಢ ಸುತ್ತಮುತ್ತಲಿನ ಹಳ್ಳಿಗಳ ನಿವಾಸಿಗಳಿಗೆ ಪರೀಕ್ಷಾ ಅವಧಿಯಲ್ಲಿ ಮನೆಯೊಳಗೇ ಇರಲು ಸೂಚಿಸಲಾಗಿದೆ. 2 ಕಿಲೋಮೀಟರ್ ವ್ಯಾಪ್ತಿಯನ್ನು ಅಪಾಯಕಾರಿ ವಲಯವೆಂದು ಘೋಷಿಸಲಾಗಿದ್ದು, ಸಾರ್ವಜನಿಕರು ಸುರಕ್ಷತಾ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಮನವಿ ಮಾಡಲಾಗಿದೆ. ಇದು ಭಾರತದ ರಕ್ಷಣಾ ವ್ಯವಸ್ಥೆಯ ಬಲವರ್ಧನೆಗಾಗಿ ನಡೆಸುವ ಯೋಜಿತ ಪರೀಕ್ಷೆಯಾಗಿದೆ.

ಪಂಚಕುಲದಲ್ಲಿ ಡಿಆರ್‌ಡಿಒ ಹೈ-ಪವರ್ ಬಾಂಬ್ ಪರೀಕ್ಷೆ: ನಿವಾಸಿಗಳಿಗೆ ಮನೆಯೊಳಗೆ ಇರುವಂತೆ  ಸೂಚನೆ
ಸಾಂದರ್ಭಿಕ ಚಿತ್ರ Image Credit source: India TV
ನಯನಾ ರಾಜೀವ್
|

Updated on:May 30, 2026 | 11:47 AM

Share

ಪಂಚಕುಲ, ಮೇ 30: ಭಾರತದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮೇ 31 ರಂದು ಹರಿಯಾಣದ ಪಂಚಕುಲ ಜಿಲ್ಲೆಯ ರಾಮಗಢದಲ್ಲಿ ಅತ್ಯಂತ ಶಕ್ತಿಶಾಲಿ ಬಾಂಬ್ ಪರೀಕ್ಷಾರ್ಥ ಪ್ರಯೋಗವನ್ನು ನಡೆಸಲು ಸಜ್ಜಾಗಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಸುತ್ತಮುತ್ತಲಿನ ಹಳ್ಳಿಗಳ ನಿವಾಸಿಗಳಿಗೆ ಪರೀಕ್ಷಾ ಅವಧಿಯಲ್ಲಿ ಮನೆಯೊಳಗೇ ಇರುವಂತೆ ಸ್ಥಳೀಯ ಆಡಳಿತ ಕಟ್ಟುನಿಟ್ಟಿನ ಸೂಚನೆ ನೀಡಿದೆ.

ಮದ್ದುಗುಂಡುಗಳು ಮತ್ತು ಶಸ್ತ್ರಾಸ್ತ್ರ ವ್ಯವಸ್ಥೆಗಳ ಪರೀಕ್ಷೆಯಲ್ಲಿ ಪರಿಣತಿ ಹೊಂದಿರುವ ಡಿಆರ್‌ಡಿಒದ ಪ್ರಮುಖ ಪ್ರಯೋಗಾಲಯವಾದ ಟರ್ಮಿನಲ್ ಬ್ಯಾಲಿಸ್ಟಿಕ್ಸ್ ಸಂಶೋಧನಾ ಪ್ರಯೋಗಾಲಯ (TBRL) ಈ ಹೈ-ಪವರ್ ಬಾಂಬ್ ಪರೀಕ್ಷೆಯನ್ನು ನಡೆಸುತ್ತಿದೆ.

2 ಕಿಲೋಮೀಟರ್ ವ್ಯಾಪ್ತಿ ಅಪಾಯಕಾರಿ ವಲಯ ಡಿಆರ್‌ಡಿಒ ವಿಜ್ಞಾನಿಗಳು ಹಂಚಿಕೊಂಡಿರುವ ಮಾಹಿತಿಯ ಪ್ರಕಾರ, ಈ ಸ್ಫೋಟವು ಎಷ್ಟು ಶಕ್ತಿಶಾಲಿಯಾಗಿರಲಿದೆ ಎಂದರೆ, ಬಾಂಬ್‌ನ ತೀಕ್ಷ್ಣ ತುಣುಕುಗಳು (Splinters) ಗಾಳಿಯಲ್ಲಿ ಬರೋಬ್ಬರಿ 1.5 ಕಿಲೋಮೀಟರ್‌ಗಳಷ್ಟು ದೂರದವರೆಗೆ ಚಿಮ್ಮುವ ಸಾಧ್ಯತೆ ಇದೆ.

ಸುರಕ್ಷತೆಯ ದೃಷ್ಟಿಯಿಂದ ಅಧಿಕಾರಿಗಳು ಸ್ಫೋಟ ನಡೆಯುವ ಸ್ಥಳದ ಸುತ್ತಲಿನ 2 ಕಿಲೋಮೀಟರ್ ವ್ಯಾಪ್ತಿಯನ್ನು ಸ್ಪ್ಲಿಂಟರ್ ಅಪಾಯದ ವಲಯ ಎಂದು ಘೋಷಿಸಿದ್ದಾರೆ. ಈ ಅವಧಿಯಲ್ಲಿ ಸಾರ್ವಜನಿಕರಿಗೆ ಈ ವಲಯದೊಳಗೆ ಪ್ರವೇಶವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಸುರಕ್ಷತಾ ಸಲಹೆಗಳು ಮತ್ತು ಹಳ್ಳಿಗಳ ಪಟ್ಟಿ TBRL ತಂತ್ರಜ್ಞಾನ ನಿರ್ದೇಶಕ ಸಿ. ಸರ್ಕಾರ್ ಅವರು ಪಂಚಕುಲ ಜಿಲ್ಲಾಧಿಕಾರಿಗೆ ಕಳುಹಿಸಿರುವ ಅಧಿಕೃತ ಪತ್ರದ ಪ್ರಕಾರ, ಈ ಕೆಳಗಿನ ಗ್ರಾಮಗಳ ನಿವಾಸಿಗಳು ಪರೀಕ್ಷೆಯ ಸಮಯದಲ್ಲಿ ಜಾಗರೂಕರಾಗಿರಬೇಕು ಮತ್ತು ಅನಗತ್ಯ ಓಡಾಟವನ್ನು ಸಂಪೂರ್ಣವಾಗಿ ನಿಲ್ಲಿಸಬೇಕು.

ಭಾನು ಮತ್ತು ಬಿಲ್ಲಾ ಗ್ರಾಮಗಳು, ಆಸ್ರೆವಾಲಿ, ನಗ್ಗಲ್, ಮೋಗಿನಂದ್, ಕಿಶನ್‌ಗಢ, ಟಿಎಂವಿ ಕಾಲೋನಿ ಮತ್ತು ರಾಮಗಢ ಮುನ್ಸಿಪಲ್ ವ್ಯಾಪ್ತಿಯ ಪ್ರದೇಶಗಳಿಗೆ ಸೂಚನೆ ನೀಡಲಾಗಿದೆ.

ಮತ್ತಷ್ಟು ಓದಿ: ಡಿಆರ್​​​ಡಿಒ ಅಭಿವೃದ್ಧಿಪಡಿಸುತ್ತಿರುವ ಶಸ್ತ್ರಾಸ್ತ್ರಗಳು ಮತ್ತವುಗಳ ಸಾಮರ್ಥ್ಯ; ಇಲ್ಲಿದೆ ಪಟ್ಟಿ

ವಾಯುಪಡೆ ಅಧಿಕಾರಿಗಳ ಮೇಲ್ವಿಚಾರಣೆ ಈ ಇಡೀ ಪರೀಕ್ಷಾರ್ಥ ಪ್ರಯೋಗವನ್ನು ಕಟ್ಟುನಿಟ್ಟಾದ ಅಂತರರಾಷ್ಟ್ರೀಯ ಭದ್ರತಾ ಮಾನದಂಡಗಳ ಅಡಿಯಲ್ಲಿ ನಡೆಸಲಾಗುತ್ತಿದ್ದು, ಭಾರತೀಯ ವಾಯುಪಡೆಯ (IAF) ಹಿರಿಯ ಅಧಿಕಾರಿಗಳು ಇದರ ನೇರ ಮೇಲ್ವಿಚಾರಣೆ ವಹಿಸಲಿದ್ದಾರೆ.

ಇದು ಭಾರತೀಯ ರಕ್ಷಣಾ ವ್ಯವಸ್ಥೆಯ ಬಲವರ್ಧನೆಗಾಗಿ ನಡೆಯುವ ನಿಯಮಿತ ಮತ್ತು ಯೋಜಿತ ಪರೀಕ್ಷೆಯಾಗಿದೆ. ಹೀಗಾಗಿ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ. ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ, ಅಧಿಕಾರಿಗಳು ನೀಡುವ ಸುರಕ್ಷತಾ ಸೂಚನೆಗಳನ್ನು ಚಾಚೂ ತಪ್ಪದೆ ಪಾಲಿಸಬೇಕು ಎಂದು ವಿನಂತಿಸಲಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 11:46 am, Sat, 30 May 26

Follow Us
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮೈಸೂರಿನಲ್ಲಿ ರಾಜೇಂದ್ರ ಕಲಾ ಮಂದಿರದಲ್ಲಿ TV9 ಎಕ್ಸ್ ಪೋ
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಮಹಿಳಾ PSI ವರ್ಗಾವಣೆ ಆಗಿದ್ದಕ್ಕೆ ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು!
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
ಬೆಟ್ಟದ ರಂಗನಾಥ ಸ್ವಾಮಿ ದೇವಾಲಯದಲ್ಲಿ ಹೆಚ್.ಡಿ. ಕುಮಾರಸ್ವಾಮಿ ವಿಶೇಷ ಪೂಜೆ
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು
‘ಹಳ್ಳಿ ಪವರ್ ರಿಯಾಲಿಟಿ ಶೋ’: ವಾಡೆ ಮನೆಗೆ ಗ್ರಹಪ್ರವೇಶ ಮಾಡಿದ ಸ್ಪರ್ಧಿಗಳು