DRDO Scientist: ಪಾಕ್ ಮಹಿಳೆಯ ಮೋಹಕ್ಕೆ ಬಿದ್ದು, ಭಾರತ ಕ್ಷಿಪಣಿ ರಹಸ್ಯಗಳನ್ನು ಬಹಿರಂಗಪಡಿಸಿದ DRDO ವಿಜ್ಞಾನಿ: ಎಟಿಎಸ್ ವರದಿ

ಡಿಆರ್‌ಡಿಒ ವಿಜ್ಞಾನಿ  ಪ್ರದೀಪ್ ಕುರುಲ್ಕರ್ ಅವರು ಪಾಕಿಸ್ತಾನಕ್ಕೆ ಭಾರತದ ರಕ್ಷಣಾ ವಿಚಾರಗಳ ಬಗ್ಗೆ ಮಾಹಿತಿಗಳನ್ನು ನೀಡಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ ತಿಳಿಸಿದೆ

DRDO Scientist: ಪಾಕ್ ಮಹಿಳೆಯ ಮೋಹಕ್ಕೆ ಬಿದ್ದು, ಭಾರತ ಕ್ಷಿಪಣಿ ರಹಸ್ಯಗಳನ್ನು ಬಹಿರಂಗಪಡಿಸಿದ DRDO ವಿಜ್ಞಾನಿ: ಎಟಿಎಸ್ ವರದಿ
ಸಾಂದರ್ಭಿಕ ಚಿತ್ರ
Follow us
|

Updated on:Jul 08, 2023 | 12:13 PM

ಪುಣೆ: ಡಿಆರ್‌ಡಿಒ (Defence Research and Development Organisation) ವಿಜ್ಞಾನಿ  ಪ್ರದೀಪ್ ಕುರುಲ್ಕರ್ ಅವರು ಪಾಕಿಸ್ತಾನಕ್ಕೆ ಭಾರತದ ರಕ್ಷಣಾ ವಿಚಾರಗಳ ಬಗ್ಗೆ ಮಾಹಿತಿಗಳನ್ನು ನೀಡಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ ತಿಳಿಸಿದೆ, ಪಾಕಿಸ್ತಾನ ಭಾರತ ರಕ್ಷಣಾ ವಿಚಾರಗಳನ್ನು ತಿಳಿದುಕೊಳ್ಳಲು ಜಾರಾ ದಾಸ್‌ಗುಪ್ತಾ ಎಂಬ ಹೆಸರಿನ ಮಹಿಳೆಯನ್ನು ( ಹೆಸರು ಬದಲಾಯಿಸಿಕೊಂಡಿದ್ದಾರೆ)ಬಳಸಿಕೊಂಡಿದ್ದಾರೆ, ಪಾಕಿಸ್ತಾನದ ಮಹಿಳೆಯೊಂದಿಗೆ ಸ್ನೇಹ ಬೆಳೆಸಿಕೊಂಡು ಪ್ರದೀಪ್ ಕುರುಲ್ಕರ್ ಭಾರತದ ಕ್ಷಿಪಣಿ ರಕ್ಷಣಾ ಯೋಜನೆಗಳ ಬಗ್ಗೆ ಹಂಚಿಕೊಂಡಿದ್ದಾರೆ ಎಂದು ಪುಣೆ ಪೊಲೀಸರು ತಿಳಿಸಿದ್ದಾರೆ.

ಪುಣೆಯಲ್ಲಿರುವ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆಯ (ಡಿಆರ್‌ಡಿಒ) ಲ್ಯಾಬ್​​ನ ನಿರ್ದೇಶಕರಾಗಿದ್ದ ಪ್ರದೀಪ್ ಕುರುಲ್ಕರ್ ವಿರುದ್ಧ ಮಹಾರಾಷ್ಟ್ರ ಪೊಲೀಸರ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಕಳೆದ ವಾರ ನ್ಯಾಯಾಲಯಕ್ಕೆ ಚಾರ್ಜ್‌ಶೀಟ್ ಸಲ್ಲಿಸಿದೆ. ಮೇ 3ರಂದು ಅಧಿಕೃತ ರಹಸ್ಯ ಕಾಯಿದೆಯಡಿ ಗೂಢಚರ್ಯೆ ಆರೋಪದ ಮೇಲೆ ಪ್ರದೀಪ್ ಕುರುಲ್ಕರ್ ಬಂಧಿಸಲಾಗಿದ್ದು, ಇದೀಗ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಪ್ರದೀಪ್ ಕುರುಲ್ಕರ್ ಮತ್ತು ‘ಜಾರಾ ದಾಸ್‌ಗುಪ್ತ’ ವಾಟ್ಸಾಪ್ ಕಾಲ್ ಮತ್ತು ವೀಡಿಯೊ ಕರೆಗಳ ಮೂಲಕ ಸಂಪರ್ಕದಲ್ಲಿದ್ದರು ಎಂದು ಆರೋಪಪಟ್ಟಿಯಲ್ಲಿ ತಿಳಿಸಲಾಗಿದೆ. ಜಾರಾ ದಾಸ್‌ಗುಪ್ತ ತಾನು ಯುಕೆ ಮೂಲದ ಸಾಫ್ಟ್‌ವೇರ್ ಇಂಜಿನಿಯರ್ ಎಂದು ಹೇಳಿಕೊಂಡಿದ್ದು, ಅಶ್ಲೀಲ ಸಂದೇಶಗಳು ಮತ್ತು ವೀಡಿಯೊಗಳನ್ನು ಕಳುಹಿಸುವ ಮೂಲಕ ಪ್ರದೀಪ್ ಕುರುಲ್ಕರ್​​ ಜತೆಗೆ ಸ್ನೇಹ ಬೆಳೆಸಿಕೊಂಡಿದ್ದಳು. ತನಿಖೆಯ ವೇಳೆ ಆಕೆಯ ಐಪಿ ವಿಳಾಸದ ಮೂಲಕ ಪಾಕಿಸ್ತಾನದ ಮಹಿಳೆ ಎಂದು ಪತ್ತೆ ಹಚ್ಚಲಾಗಿದೆ ಎಂದು ಎಟಿಎಸ್ ಆರೋಪಪಟ್ಟಿಯಲ್ಲಿ ತಿಳಿಸಿದೆ.

ಇದನ್ನೂ  ಓದಿ: Honeytrap: ‘ಮಾರುಕಟ್ಟೆಗೆ ಹೊಸ ಹುಡುಗಿ ಬಂದಿದ್ದಾಳೆ’ ಎಂಬ ಸಂದೇಶಕ್ಕೆ ಸೋತು, ಹನಿಟ್ರ್ಯಾಪ್​​ಗೆ ಸಿಲುಕಿಕೊಂಡ ಉದ್ಯಮಿ

ಬ್ರಹ್ಮೋಸ್ ಲಾಂಚರ್, ಡ್ರೋನ್, ಯುಸಿವಿ, ಅಗ್ನಿ ಕ್ಷಿಪಣಿ ಲಾಂಚರ್ ಮತ್ತು ಮಿಲಿಟರಿ ಬ್ರಿಡ್ಜಿಂಗ್ ಸಿಸ್ಟಮ್ ಸೇರಿದಂತೆ ಇತರ ವಿಷಯಗಳ ಬಗ್ಗೆ ರಹಸ್ಯ ಮತ್ತು ಸೂಕ್ಷ್ಮ ಮಾಹಿತಿಯನ್ನು ಪಡೆಯಲು ಈಕೆ ಪ್ರಯತ್ನಿಸಿದ್ದಾಳೆ ಎಂದು ಹೇಳಿದ್ದಾರೆ. ಆಕೆಯ ಮಾತಿಗೆ ಮರುಳಾಗಿ ಕುರುಲ್ಕರ್, ಡಿಆರ್‌ಡಿಒದ ವರ್ಗೀಕೃತ ಮತ್ತು ಸೂಕ್ಷ್ಮ ಮಾಹಿತಿಯನ್ನು ತನ್ನ ವೈಯಕ್ತಿಕ ಫೋನ್‌ನಲ್ಲಿ ಸಂಗ್ರಹಿಸಿ ಅದನ್ನು ಜಾರಾ ಅವರೊಂದಿಗೆ ಹಂಚಿಕೊಂಡಿದ್ದಾರೆ ಎಂದು ಎಟಿಎಸ್ ತನ್ನ ತನಿಖಾ ವರದಿಯಲ್ಲಿ ಹೇಳಲಾಗಿದೆ. ಎಟಿಎಸ್ ಪ್ರಕಾರ ಇಬ್ಬರೂ ಜೂನ್ 2022ರಿಂದ ಡಿಸೆಂಬರ್ 2022 ರವರೆಗೆ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ.

ಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:52 am, Sat, 8 July 23

ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ