AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕ್​ ನಾಶಕ ಕ್ಷಿಪಣಿ ಪ್ರಯೋಗ ಯಶಸ್ವಿ: ಭೂಸೇನೆಯ ಬತ್ತಳಿಕೆಗೆ ಮತ್ತೊಂದು ಅಸ್ತ್ರ

ದೆಹಲಿ: ಕಡಿಮೆ ಅಂತರದಲ್ಲಿರುವ ಟ್ಯಾಂಕ್​ಗಳನ್ನು ನಾಶಪಡಿಸುವ, ಸೈನಿಕರು ಹೊತ್ತೊಯ್ಯಬಲ್ಲ ಕ್ಷಿಪಣಿ ಉಡಾವಣಾ ಉಪಕರಣಗಳಿಂದ ಹಾರಿಬಿಡಬಹುದಾದ ಗೈಡೆಡ್ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation – DRDO) ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿತು. ಇಂಥದ್ದೊಂದು ಸುಧಾರಿತ ಹಾಗೂ ಹಗುರ ಟ್ಯಾಂಕ್​ ನಾಶಕ ಕ್ಷಿಪಣಿ ಬೇಕೆಂದು ಭಾರತೀಯ ಸೇನೆಯು ಹಲವು ವರ್ಷಗಳಿಂದ ಬೇಡಿಕೆಯಿಟ್ಟಿತ್ತು. ಟ್ಯಾಂಕ್​ ಒಂದರ ಪ್ರತಿಕೃತಿಯನ್ನು ಕನಿಷ್ಠ ರೇಂಜ್​ನಲ್ಲಿ ಇರಿಸಿಕೊಂಡು ಸೈನಿಕರು ಹೊತ್ತೊಯ್ಯಬಲ್ಲ ಸಂಚಾರಿ ಲಾಂಚರ್ ಮೂಲಕ ಈ ಕ್ಷಿಪಣಿಯನ್ನು […]

ಟ್ಯಾಂಕ್​ ನಾಶಕ ಕ್ಷಿಪಣಿ ಪ್ರಯೋಗ ಯಶಸ್ವಿ: ಭೂಸೇನೆಯ ಬತ್ತಳಿಕೆಗೆ ಮತ್ತೊಂದು ಅಸ್ತ್ರ
ಡಿಆರ್​ಡಿಒ ಬುಧವಾರ ನಡೆಸಿದ ಟ್ಯಾಂಕ್ ನಿರೋಧಕ ಕ್ಷಿಪಣೆಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ
TV9 Web
| Edited By: |

Updated on: Jul 21, 2021 | 9:06 PM

Share

ದೆಹಲಿ: ಕಡಿಮೆ ಅಂತರದಲ್ಲಿರುವ ಟ್ಯಾಂಕ್​ಗಳನ್ನು ನಾಶಪಡಿಸುವ, ಸೈನಿಕರು ಹೊತ್ತೊಯ್ಯಬಲ್ಲ ಕ್ಷಿಪಣಿ ಉಡಾವಣಾ ಉಪಕರಣಗಳಿಂದ ಹಾರಿಬಿಡಬಹುದಾದ ಗೈಡೆಡ್ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation – DRDO) ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿತು. ಇಂಥದ್ದೊಂದು ಸುಧಾರಿತ ಹಾಗೂ ಹಗುರ ಟ್ಯಾಂಕ್​ ನಾಶಕ ಕ್ಷಿಪಣಿ ಬೇಕೆಂದು ಭಾರತೀಯ ಸೇನೆಯು ಹಲವು ವರ್ಷಗಳಿಂದ ಬೇಡಿಕೆಯಿಟ್ಟಿತ್ತು.

ಟ್ಯಾಂಕ್​ ಒಂದರ ಪ್ರತಿಕೃತಿಯನ್ನು ಕನಿಷ್ಠ ರೇಂಜ್​ನಲ್ಲಿ ಇರಿಸಿಕೊಂಡು ಸೈನಿಕರು ಹೊತ್ತೊಯ್ಯಬಲ್ಲ ಸಂಚಾರಿ ಲಾಂಚರ್ ಮೂಲಕ ಈ ಕ್ಷಿಪಣಿಯನ್ನು ಉಡಾಯಿಸಲಾಯಿತು. ನೇರ ದಾಳಿಯ ರೀತಿಯಲ್ಲಿಯೇ ಟ್ಯಾಂಕ್​ಗೆ ಕ್ಷಿಪಣಿ ಅಪ್ಪಳಿಸಿತು. ಕ್ಷಿಪಣಿಯ ಹೊಡೆತಕ್ಕೆ ಟ್ಯಾಂಕ್ ಛಿತ್ರವಾಯಿತು. ಕ್ಷಿಪಣಿಯನ್ನು ರೂಪಿಸಿದ್ದ ಉದ್ದೇಶಗಳು ಸಂಪೂರ್ಣವಾಗಿ ಈಡೇರಿವೆ. ಗರಿಷ್ಠ ರೇಂಜ್​ ಪರೀಕ್ಷೆಗಳಲ್ಲಿ ಕ್ಷಿಪಣಿಯ ಪ್ರಯೋಗ ಈಗಾಗಲೇ ಯಶಸ್ವಿಯಾಗಿದೆ ಎಂದು ಡಿಆರ್​ಡಿಒ ಹೇಳಿದೆ.

ಅತಿಸೂಕ್ಷ್ಮ ಇನ್​ಫ್ರಾರೆಡ್​ ಇಮೇಜಿಂಗ್ ಸೀಕರ್ ತಂತ್ರಜ್ಞಾನ ಅಳವಡಿಸಿರುವ ಈ ಕ್ಷಿಪಣಿಯು ಅತ್ಯಾಧುನಿಕ ಏವಿಯಾನಿಕ್ಸ್​ನೊಂದಿಗೆ​ (ವೈಮಾನಿಕ ವಿನ್ಯಾಸ) ಸಜ್ಜಾಗಿದೆ. ಈ ಯಶಸ್ವಿ ಪರೀಕ್ಷೆಯ ನಂತರ ಭಾರತವು ದೇಶೀ ನಿರ್ಮಿತ 3ನೇ ತಲೆಮಾರಿನ, ಸೈನಿಕನೊಬ್ಬ ಹೊತ್ತೊಯ್ಯಬಲ್ಲಷ್ಟು ಹಗುರವಾದ ಗುರಿ ನಿರ್ದೇಶಿತ ಟ್ಯಾಂಕ್ ನಿರೋಧ ಕ್ಷಿಪಣಿ ರೂಪಿಸಿದ ವಿಶ್ವದ ಕೆಲವೇ ದೇಶಗಳಲ್ಲಿ ಒಂದು ಎನಿಸಿಕೊಂಡಿದೆ.

ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್​ಡಿಒ ವಿಜ್ಞಾನಿಗಳು ಮತ್ತು ರಕ್ಷಣಾ ಉದ್ದಿಮೆಗಳನ್ನು ಅಭಿನಂದಿಸಿದ್ದಾರೆ.

(DRDO successfully flight tests indigenously developed mpatgm for minimum range anti tank missile)

ಇದನ್ನೂ ಓದಿ: Explainer | Arjun Mark 1A Tank: ಭೂಸೇನೆಗೆ ಅರ್ಜುನ್​ ಟ್ಯಾಂಕ್ ಸೇರ್ಪಡೆ: ಏನು ವೈಶಿಷ್ಟ್ಯ? ಏಕೆ ಮುಖ್ಯ?

ಇದನ್ನೂ ಓದಿ: PM Modi in Tamil Nadu: ಅರ್ಜುನ್ ಟ್ಯಾಂಕ್ ಸೇನೆಗೆ ಹಸ್ತಾಂತರ; ತಮಿಳುನಾಡು ರೈತರ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ