AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕ್​ ನಾಶಕ ಕ್ಷಿಪಣಿ ಪ್ರಯೋಗ ಯಶಸ್ವಿ: ಭೂಸೇನೆಯ ಬತ್ತಳಿಕೆಗೆ ಮತ್ತೊಂದು ಅಸ್ತ್ರ

ದೆಹಲಿ: ಕಡಿಮೆ ಅಂತರದಲ್ಲಿರುವ ಟ್ಯಾಂಕ್​ಗಳನ್ನು ನಾಶಪಡಿಸುವ, ಸೈನಿಕರು ಹೊತ್ತೊಯ್ಯಬಲ್ಲ ಕ್ಷಿಪಣಿ ಉಡಾವಣಾ ಉಪಕರಣಗಳಿಂದ ಹಾರಿಬಿಡಬಹುದಾದ ಗೈಡೆಡ್ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation – DRDO) ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿತು. ಇಂಥದ್ದೊಂದು ಸುಧಾರಿತ ಹಾಗೂ ಹಗುರ ಟ್ಯಾಂಕ್​ ನಾಶಕ ಕ್ಷಿಪಣಿ ಬೇಕೆಂದು ಭಾರತೀಯ ಸೇನೆಯು ಹಲವು ವರ್ಷಗಳಿಂದ ಬೇಡಿಕೆಯಿಟ್ಟಿತ್ತು. ಟ್ಯಾಂಕ್​ ಒಂದರ ಪ್ರತಿಕೃತಿಯನ್ನು ಕನಿಷ್ಠ ರೇಂಜ್​ನಲ್ಲಿ ಇರಿಸಿಕೊಂಡು ಸೈನಿಕರು ಹೊತ್ತೊಯ್ಯಬಲ್ಲ ಸಂಚಾರಿ ಲಾಂಚರ್ ಮೂಲಕ ಈ ಕ್ಷಿಪಣಿಯನ್ನು […]

ಟ್ಯಾಂಕ್​ ನಾಶಕ ಕ್ಷಿಪಣಿ ಪ್ರಯೋಗ ಯಶಸ್ವಿ: ಭೂಸೇನೆಯ ಬತ್ತಳಿಕೆಗೆ ಮತ್ತೊಂದು ಅಸ್ತ್ರ
ಡಿಆರ್​ಡಿಒ ಬುಧವಾರ ನಡೆಸಿದ ಟ್ಯಾಂಕ್ ನಿರೋಧಕ ಕ್ಷಿಪಣೆಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 21, 2021 | 9:06 PM

ದೆಹಲಿ: ಕಡಿಮೆ ಅಂತರದಲ್ಲಿರುವ ಟ್ಯಾಂಕ್​ಗಳನ್ನು ನಾಶಪಡಿಸುವ, ಸೈನಿಕರು ಹೊತ್ತೊಯ್ಯಬಲ್ಲ ಕ್ಷಿಪಣಿ ಉಡಾವಣಾ ಉಪಕರಣಗಳಿಂದ ಹಾರಿಬಿಡಬಹುದಾದ ಗೈಡೆಡ್ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation – DRDO) ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿತು. ಇಂಥದ್ದೊಂದು ಸುಧಾರಿತ ಹಾಗೂ ಹಗುರ ಟ್ಯಾಂಕ್​ ನಾಶಕ ಕ್ಷಿಪಣಿ ಬೇಕೆಂದು ಭಾರತೀಯ ಸೇನೆಯು ಹಲವು ವರ್ಷಗಳಿಂದ ಬೇಡಿಕೆಯಿಟ್ಟಿತ್ತು.

ಟ್ಯಾಂಕ್​ ಒಂದರ ಪ್ರತಿಕೃತಿಯನ್ನು ಕನಿಷ್ಠ ರೇಂಜ್​ನಲ್ಲಿ ಇರಿಸಿಕೊಂಡು ಸೈನಿಕರು ಹೊತ್ತೊಯ್ಯಬಲ್ಲ ಸಂಚಾರಿ ಲಾಂಚರ್ ಮೂಲಕ ಈ ಕ್ಷಿಪಣಿಯನ್ನು ಉಡಾಯಿಸಲಾಯಿತು. ನೇರ ದಾಳಿಯ ರೀತಿಯಲ್ಲಿಯೇ ಟ್ಯಾಂಕ್​ಗೆ ಕ್ಷಿಪಣಿ ಅಪ್ಪಳಿಸಿತು. ಕ್ಷಿಪಣಿಯ ಹೊಡೆತಕ್ಕೆ ಟ್ಯಾಂಕ್ ಛಿತ್ರವಾಯಿತು. ಕ್ಷಿಪಣಿಯನ್ನು ರೂಪಿಸಿದ್ದ ಉದ್ದೇಶಗಳು ಸಂಪೂರ್ಣವಾಗಿ ಈಡೇರಿವೆ. ಗರಿಷ್ಠ ರೇಂಜ್​ ಪರೀಕ್ಷೆಗಳಲ್ಲಿ ಕ್ಷಿಪಣಿಯ ಪ್ರಯೋಗ ಈಗಾಗಲೇ ಯಶಸ್ವಿಯಾಗಿದೆ ಎಂದು ಡಿಆರ್​ಡಿಒ ಹೇಳಿದೆ.

ಅತಿಸೂಕ್ಷ್ಮ ಇನ್​ಫ್ರಾರೆಡ್​ ಇಮೇಜಿಂಗ್ ಸೀಕರ್ ತಂತ್ರಜ್ಞಾನ ಅಳವಡಿಸಿರುವ ಈ ಕ್ಷಿಪಣಿಯು ಅತ್ಯಾಧುನಿಕ ಏವಿಯಾನಿಕ್ಸ್​ನೊಂದಿಗೆ​ (ವೈಮಾನಿಕ ವಿನ್ಯಾಸ) ಸಜ್ಜಾಗಿದೆ. ಈ ಯಶಸ್ವಿ ಪರೀಕ್ಷೆಯ ನಂತರ ಭಾರತವು ದೇಶೀ ನಿರ್ಮಿತ 3ನೇ ತಲೆಮಾರಿನ, ಸೈನಿಕನೊಬ್ಬ ಹೊತ್ತೊಯ್ಯಬಲ್ಲಷ್ಟು ಹಗುರವಾದ ಗುರಿ ನಿರ್ದೇಶಿತ ಟ್ಯಾಂಕ್ ನಿರೋಧ ಕ್ಷಿಪಣಿ ರೂಪಿಸಿದ ವಿಶ್ವದ ಕೆಲವೇ ದೇಶಗಳಲ್ಲಿ ಒಂದು ಎನಿಸಿಕೊಂಡಿದೆ.

ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್​ಡಿಒ ವಿಜ್ಞಾನಿಗಳು ಮತ್ತು ರಕ್ಷಣಾ ಉದ್ದಿಮೆಗಳನ್ನು ಅಭಿನಂದಿಸಿದ್ದಾರೆ.

(DRDO successfully flight tests indigenously developed mpatgm for minimum range anti tank missile)

ಇದನ್ನೂ ಓದಿ: Explainer | Arjun Mark 1A Tank: ಭೂಸೇನೆಗೆ ಅರ್ಜುನ್​ ಟ್ಯಾಂಕ್ ಸೇರ್ಪಡೆ: ಏನು ವೈಶಿಷ್ಟ್ಯ? ಏಕೆ ಮುಖ್ಯ?

ಇದನ್ನೂ ಓದಿ: PM Modi in Tamil Nadu: ಅರ್ಜುನ್ ಟ್ಯಾಂಕ್ ಸೇನೆಗೆ ಹಸ್ತಾಂತರ; ತಮಿಳುನಾಡು ರೈತರ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಅಬ್ಬಬ್ಬಾ...ಒಂದೇ ಬೈಕ್​​ ನಲ್ಲಿ 5 ಜನ ಸವಾರಿ, ಈ ವಿಡಿಯೋ ನೋಡ್ರಿ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ
ಗಮನಸೆಳೆದ ಶತಾಯುಷಿ ಅಜ್ಜಿಯ 100ನೇ ಬರ್ತಡೇ ಸಂಭ್ರಮಾಚರಣೆ