AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕ್​ ನಾಶಕ ಕ್ಷಿಪಣಿ ಪ್ರಯೋಗ ಯಶಸ್ವಿ: ಭೂಸೇನೆಯ ಬತ್ತಳಿಕೆಗೆ ಮತ್ತೊಂದು ಅಸ್ತ್ರ

ದೆಹಲಿ: ಕಡಿಮೆ ಅಂತರದಲ್ಲಿರುವ ಟ್ಯಾಂಕ್​ಗಳನ್ನು ನಾಶಪಡಿಸುವ, ಸೈನಿಕರು ಹೊತ್ತೊಯ್ಯಬಲ್ಲ ಕ್ಷಿಪಣಿ ಉಡಾವಣಾ ಉಪಕರಣಗಳಿಂದ ಹಾರಿಬಿಡಬಹುದಾದ ಗೈಡೆಡ್ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation – DRDO) ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿತು. ಇಂಥದ್ದೊಂದು ಸುಧಾರಿತ ಹಾಗೂ ಹಗುರ ಟ್ಯಾಂಕ್​ ನಾಶಕ ಕ್ಷಿಪಣಿ ಬೇಕೆಂದು ಭಾರತೀಯ ಸೇನೆಯು ಹಲವು ವರ್ಷಗಳಿಂದ ಬೇಡಿಕೆಯಿಟ್ಟಿತ್ತು. ಟ್ಯಾಂಕ್​ ಒಂದರ ಪ್ರತಿಕೃತಿಯನ್ನು ಕನಿಷ್ಠ ರೇಂಜ್​ನಲ್ಲಿ ಇರಿಸಿಕೊಂಡು ಸೈನಿಕರು ಹೊತ್ತೊಯ್ಯಬಲ್ಲ ಸಂಚಾರಿ ಲಾಂಚರ್ ಮೂಲಕ ಈ ಕ್ಷಿಪಣಿಯನ್ನು […]

ಟ್ಯಾಂಕ್​ ನಾಶಕ ಕ್ಷಿಪಣಿ ಪ್ರಯೋಗ ಯಶಸ್ವಿ: ಭೂಸೇನೆಯ ಬತ್ತಳಿಕೆಗೆ ಮತ್ತೊಂದು ಅಸ್ತ್ರ
ಡಿಆರ್​ಡಿಒ ಬುಧವಾರ ನಡೆಸಿದ ಟ್ಯಾಂಕ್ ನಿರೋಧಕ ಕ್ಷಿಪಣೆಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ
TV9 Web
| Edited By: |

Updated on: Jul 21, 2021 | 9:06 PM

Share

ದೆಹಲಿ: ಕಡಿಮೆ ಅಂತರದಲ್ಲಿರುವ ಟ್ಯಾಂಕ್​ಗಳನ್ನು ನಾಶಪಡಿಸುವ, ಸೈನಿಕರು ಹೊತ್ತೊಯ್ಯಬಲ್ಲ ಕ್ಷಿಪಣಿ ಉಡಾವಣಾ ಉಪಕರಣಗಳಿಂದ ಹಾರಿಬಿಡಬಹುದಾದ ಗೈಡೆಡ್ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation – DRDO) ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿತು. ಇಂಥದ್ದೊಂದು ಸುಧಾರಿತ ಹಾಗೂ ಹಗುರ ಟ್ಯಾಂಕ್​ ನಾಶಕ ಕ್ಷಿಪಣಿ ಬೇಕೆಂದು ಭಾರತೀಯ ಸೇನೆಯು ಹಲವು ವರ್ಷಗಳಿಂದ ಬೇಡಿಕೆಯಿಟ್ಟಿತ್ತು.

ಟ್ಯಾಂಕ್​ ಒಂದರ ಪ್ರತಿಕೃತಿಯನ್ನು ಕನಿಷ್ಠ ರೇಂಜ್​ನಲ್ಲಿ ಇರಿಸಿಕೊಂಡು ಸೈನಿಕರು ಹೊತ್ತೊಯ್ಯಬಲ್ಲ ಸಂಚಾರಿ ಲಾಂಚರ್ ಮೂಲಕ ಈ ಕ್ಷಿಪಣಿಯನ್ನು ಉಡಾಯಿಸಲಾಯಿತು. ನೇರ ದಾಳಿಯ ರೀತಿಯಲ್ಲಿಯೇ ಟ್ಯಾಂಕ್​ಗೆ ಕ್ಷಿಪಣಿ ಅಪ್ಪಳಿಸಿತು. ಕ್ಷಿಪಣಿಯ ಹೊಡೆತಕ್ಕೆ ಟ್ಯಾಂಕ್ ಛಿತ್ರವಾಯಿತು. ಕ್ಷಿಪಣಿಯನ್ನು ರೂಪಿಸಿದ್ದ ಉದ್ದೇಶಗಳು ಸಂಪೂರ್ಣವಾಗಿ ಈಡೇರಿವೆ. ಗರಿಷ್ಠ ರೇಂಜ್​ ಪರೀಕ್ಷೆಗಳಲ್ಲಿ ಕ್ಷಿಪಣಿಯ ಪ್ರಯೋಗ ಈಗಾಗಲೇ ಯಶಸ್ವಿಯಾಗಿದೆ ಎಂದು ಡಿಆರ್​ಡಿಒ ಹೇಳಿದೆ.

ಅತಿಸೂಕ್ಷ್ಮ ಇನ್​ಫ್ರಾರೆಡ್​ ಇಮೇಜಿಂಗ್ ಸೀಕರ್ ತಂತ್ರಜ್ಞಾನ ಅಳವಡಿಸಿರುವ ಈ ಕ್ಷಿಪಣಿಯು ಅತ್ಯಾಧುನಿಕ ಏವಿಯಾನಿಕ್ಸ್​ನೊಂದಿಗೆ​ (ವೈಮಾನಿಕ ವಿನ್ಯಾಸ) ಸಜ್ಜಾಗಿದೆ. ಈ ಯಶಸ್ವಿ ಪರೀಕ್ಷೆಯ ನಂತರ ಭಾರತವು ದೇಶೀ ನಿರ್ಮಿತ 3ನೇ ತಲೆಮಾರಿನ, ಸೈನಿಕನೊಬ್ಬ ಹೊತ್ತೊಯ್ಯಬಲ್ಲಷ್ಟು ಹಗುರವಾದ ಗುರಿ ನಿರ್ದೇಶಿತ ಟ್ಯಾಂಕ್ ನಿರೋಧ ಕ್ಷಿಪಣಿ ರೂಪಿಸಿದ ವಿಶ್ವದ ಕೆಲವೇ ದೇಶಗಳಲ್ಲಿ ಒಂದು ಎನಿಸಿಕೊಂಡಿದೆ.

ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್​ಡಿಒ ವಿಜ್ಞಾನಿಗಳು ಮತ್ತು ರಕ್ಷಣಾ ಉದ್ದಿಮೆಗಳನ್ನು ಅಭಿನಂದಿಸಿದ್ದಾರೆ.

(DRDO successfully flight tests indigenously developed mpatgm for minimum range anti tank missile)

ಇದನ್ನೂ ಓದಿ: Explainer | Arjun Mark 1A Tank: ಭೂಸೇನೆಗೆ ಅರ್ಜುನ್​ ಟ್ಯಾಂಕ್ ಸೇರ್ಪಡೆ: ಏನು ವೈಶಿಷ್ಟ್ಯ? ಏಕೆ ಮುಖ್ಯ?

ಇದನ್ನೂ ಓದಿ: PM Modi in Tamil Nadu: ಅರ್ಜುನ್ ಟ್ಯಾಂಕ್ ಸೇನೆಗೆ ಹಸ್ತಾಂತರ; ತಮಿಳುನಾಡು ರೈತರ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!