AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ಯಾಂಕ್​ ನಾಶಕ ಕ್ಷಿಪಣಿ ಪ್ರಯೋಗ ಯಶಸ್ವಿ: ಭೂಸೇನೆಯ ಬತ್ತಳಿಕೆಗೆ ಮತ್ತೊಂದು ಅಸ್ತ್ರ

ದೆಹಲಿ: ಕಡಿಮೆ ಅಂತರದಲ್ಲಿರುವ ಟ್ಯಾಂಕ್​ಗಳನ್ನು ನಾಶಪಡಿಸುವ, ಸೈನಿಕರು ಹೊತ್ತೊಯ್ಯಬಲ್ಲ ಕ್ಷಿಪಣಿ ಉಡಾವಣಾ ಉಪಕರಣಗಳಿಂದ ಹಾರಿಬಿಡಬಹುದಾದ ಗೈಡೆಡ್ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation – DRDO) ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿತು. ಇಂಥದ್ದೊಂದು ಸುಧಾರಿತ ಹಾಗೂ ಹಗುರ ಟ್ಯಾಂಕ್​ ನಾಶಕ ಕ್ಷಿಪಣಿ ಬೇಕೆಂದು ಭಾರತೀಯ ಸೇನೆಯು ಹಲವು ವರ್ಷಗಳಿಂದ ಬೇಡಿಕೆಯಿಟ್ಟಿತ್ತು. ಟ್ಯಾಂಕ್​ ಒಂದರ ಪ್ರತಿಕೃತಿಯನ್ನು ಕನಿಷ್ಠ ರೇಂಜ್​ನಲ್ಲಿ ಇರಿಸಿಕೊಂಡು ಸೈನಿಕರು ಹೊತ್ತೊಯ್ಯಬಲ್ಲ ಸಂಚಾರಿ ಲಾಂಚರ್ ಮೂಲಕ ಈ ಕ್ಷಿಪಣಿಯನ್ನು […]

ಟ್ಯಾಂಕ್​ ನಾಶಕ ಕ್ಷಿಪಣಿ ಪ್ರಯೋಗ ಯಶಸ್ವಿ: ಭೂಸೇನೆಯ ಬತ್ತಳಿಕೆಗೆ ಮತ್ತೊಂದು ಅಸ್ತ್ರ
ಡಿಆರ್​ಡಿಒ ಬುಧವಾರ ನಡೆಸಿದ ಟ್ಯಾಂಕ್ ನಿರೋಧಕ ಕ್ಷಿಪಣೆಯ ಪರೀಕ್ಷಾರ್ಥ ಉಡಾವಣೆ ಯಶಸ್ವಿಯಾಗಿದೆ
TV9 Web
| Edited By: |

Updated on: Jul 21, 2021 | 9:06 PM

Share

ದೆಹಲಿ: ಕಡಿಮೆ ಅಂತರದಲ್ಲಿರುವ ಟ್ಯಾಂಕ್​ಗಳನ್ನು ನಾಶಪಡಿಸುವ, ಸೈನಿಕರು ಹೊತ್ತೊಯ್ಯಬಲ್ಲ ಕ್ಷಿಪಣಿ ಉಡಾವಣಾ ಉಪಕರಣಗಳಿಂದ ಹಾರಿಬಿಡಬಹುದಾದ ಗೈಡೆಡ್ ಕ್ಷಿಪಣಿಯನ್ನು ಭಾರತೀಯ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (Defence Research and Development Organisation – DRDO) ಬುಧವಾರ ಯಶಸ್ವಿಯಾಗಿ ಪ್ರಯೋಗಿಸಿತು. ಇಂಥದ್ದೊಂದು ಸುಧಾರಿತ ಹಾಗೂ ಹಗುರ ಟ್ಯಾಂಕ್​ ನಾಶಕ ಕ್ಷಿಪಣಿ ಬೇಕೆಂದು ಭಾರತೀಯ ಸೇನೆಯು ಹಲವು ವರ್ಷಗಳಿಂದ ಬೇಡಿಕೆಯಿಟ್ಟಿತ್ತು.

ಟ್ಯಾಂಕ್​ ಒಂದರ ಪ್ರತಿಕೃತಿಯನ್ನು ಕನಿಷ್ಠ ರೇಂಜ್​ನಲ್ಲಿ ಇರಿಸಿಕೊಂಡು ಸೈನಿಕರು ಹೊತ್ತೊಯ್ಯಬಲ್ಲ ಸಂಚಾರಿ ಲಾಂಚರ್ ಮೂಲಕ ಈ ಕ್ಷಿಪಣಿಯನ್ನು ಉಡಾಯಿಸಲಾಯಿತು. ನೇರ ದಾಳಿಯ ರೀತಿಯಲ್ಲಿಯೇ ಟ್ಯಾಂಕ್​ಗೆ ಕ್ಷಿಪಣಿ ಅಪ್ಪಳಿಸಿತು. ಕ್ಷಿಪಣಿಯ ಹೊಡೆತಕ್ಕೆ ಟ್ಯಾಂಕ್ ಛಿತ್ರವಾಯಿತು. ಕ್ಷಿಪಣಿಯನ್ನು ರೂಪಿಸಿದ್ದ ಉದ್ದೇಶಗಳು ಸಂಪೂರ್ಣವಾಗಿ ಈಡೇರಿವೆ. ಗರಿಷ್ಠ ರೇಂಜ್​ ಪರೀಕ್ಷೆಗಳಲ್ಲಿ ಕ್ಷಿಪಣಿಯ ಪ್ರಯೋಗ ಈಗಾಗಲೇ ಯಶಸ್ವಿಯಾಗಿದೆ ಎಂದು ಡಿಆರ್​ಡಿಒ ಹೇಳಿದೆ.

ಅತಿಸೂಕ್ಷ್ಮ ಇನ್​ಫ್ರಾರೆಡ್​ ಇಮೇಜಿಂಗ್ ಸೀಕರ್ ತಂತ್ರಜ್ಞಾನ ಅಳವಡಿಸಿರುವ ಈ ಕ್ಷಿಪಣಿಯು ಅತ್ಯಾಧುನಿಕ ಏವಿಯಾನಿಕ್ಸ್​ನೊಂದಿಗೆ​ (ವೈಮಾನಿಕ ವಿನ್ಯಾಸ) ಸಜ್ಜಾಗಿದೆ. ಈ ಯಶಸ್ವಿ ಪರೀಕ್ಷೆಯ ನಂತರ ಭಾರತವು ದೇಶೀ ನಿರ್ಮಿತ 3ನೇ ತಲೆಮಾರಿನ, ಸೈನಿಕನೊಬ್ಬ ಹೊತ್ತೊಯ್ಯಬಲ್ಲಷ್ಟು ಹಗುರವಾದ ಗುರಿ ನಿರ್ದೇಶಿತ ಟ್ಯಾಂಕ್ ನಿರೋಧ ಕ್ಷಿಪಣಿ ರೂಪಿಸಿದ ವಿಶ್ವದ ಕೆಲವೇ ದೇಶಗಳಲ್ಲಿ ಒಂದು ಎನಿಸಿಕೊಂಡಿದೆ.

ಈ ಸಾಧನೆಗಾಗಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಡಿಆರ್​ಡಿಒ ವಿಜ್ಞಾನಿಗಳು ಮತ್ತು ರಕ್ಷಣಾ ಉದ್ದಿಮೆಗಳನ್ನು ಅಭಿನಂದಿಸಿದ್ದಾರೆ.

(DRDO successfully flight tests indigenously developed mpatgm for minimum range anti tank missile)

ಇದನ್ನೂ ಓದಿ: Explainer | Arjun Mark 1A Tank: ಭೂಸೇನೆಗೆ ಅರ್ಜುನ್​ ಟ್ಯಾಂಕ್ ಸೇರ್ಪಡೆ: ಏನು ವೈಶಿಷ್ಟ್ಯ? ಏಕೆ ಮುಖ್ಯ?

ಇದನ್ನೂ ಓದಿ: PM Modi in Tamil Nadu: ಅರ್ಜುನ್ ಟ್ಯಾಂಕ್ ಸೇನೆಗೆ ಹಸ್ತಾಂತರ; ತಮಿಳುನಾಡು ರೈತರ ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ