AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್​​ಸ್ಟರ್ ಎನ್‌ಕೌಂಟರ್​: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಪೊಲೀಸ್

Anil Dujana Encounter:ದುಜಾನಾ ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸಂಘಟಿತ ಕ್ರಿಮಿನಲ್ ಗ್ಯಾಂಗ್ ಅನ್ನು ನಡೆಸುತ್ತಿದ್ದನು. ಈತನ ವಿರುದ್ಧ 18 ಕೊಲೆಗಳು, ಸುಲಿಗೆ, ದರೋಡೆ, ಭೂಹಗರಣ, ಉಚ್ಚಾಟನೆ ಸೇರಿದಂತೆ 62 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಉತ್ತರ ಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್​​ಸ್ಟರ್ ಎನ್‌ಕೌಂಟರ್​: ಅನಿಲ್ ದುಜಾನಾಗೆ ಗುಂಡಿಕ್ಕಿ ಹತ್ಯೆಗೈದ ಪೊಲೀಸ್
ಅನಿಲ್ ದುಜಾನಾ
ರಶ್ಮಿ ಕಲ್ಲಕಟ್ಟ
|

Updated on:May 04, 2023 | 4:12 PM

Share

ಉತ್ತರ ಪ್ರದೇಶದ (Uttar Pradesh) ಮೀರತ್ ಜಿಲ್ಲೆಯಲ್ಲಿ ಗುರುವಾರ ಮಧ್ಯಾಹ್ನ ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ (STF) ಗ್ಯಾಂಗ್​​ಸ್ಟರ್​​ ಅನಿಲ್ ದುಜಾನಾನನ್ನು (Gangster Anil Dujana) ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದೆ. ಗ್ಯಾಂಗ್‌ಸ್ಟರ್ ಅನಿಲ್ ದುಜಾನಾ ಗೌತಮ್ ಬುದ್ಧ ನಗರ ಜಿಲ್ಲೆಯ ಬಾದಲ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ದುಜಾನಾ ಗ್ರಾಮದ ನಿವಾಸಿ. ದುಜಾನಾ ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಲ್ಲಿ ಸಂಘಟಿತ ಕ್ರಿಮಿನಲ್ ಗ್ಯಾಂಗ್ ಅನ್ನು ನಡೆಸುತ್ತಿದ್ದನು. ಈತನ ವಿರುದ್ಧ 18 ಕೊಲೆಗಳು, ಸುಲಿಗೆ, ದರೋಡೆ, ಭೂಹಗರಣ, ಉಚ್ಚಾಟನೆ ಸೇರಿದಂತೆ 62 ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ.

ಉತ್ತರ ಪ್ರದೇಶದಲ್ಲಿ ಮಾಫಿಯಾ ಮತ್ತು ಗ್ಯಾಂಗ್​​ಸ್ಟರ್​​ಗಳ ವಿರುದ್ಧದ ಕಾರ್ಯಾಚರಣೆಯ ಹಿನ್ನೆಲೆಯಲ್ಲಿ ಅನಿಲ್ ದುಜಾನಾ ಎನ್‌ಕೌಂಟರ್ ನಡೆದಿದೆ. ಝಾನ್ಸಿಯಲ್ಲಿ ಅತೀಕ್ ಅಹ್ಮದ್ ಅವರ ಪುತ್ರ ಅಸದ್ ಹತ್ಯೆಯ ನಂತರ ಯುಪಿ ಎಸ್‌ಟಿಎಫ್ ಎನ್‌ಕೌಂಟರ್‌ನಲ್ಲಿ ನಡೆಸಿದ ಎರಡನೇ ಹೈ ಪ್ರೊಫೈಲ್ ಹತ್ಯೆ ಇದಾಗಿದೆ. ಉಮೇಶ್ ಪಾಲ್ ಹತ್ಯೆಯಲ್ಲಿ ಅಸದ್ ವಾಂಟೆಂಡ್ ವ್ಯಕ್ತಿಯಾಗಿದ್ದ.

ಇದನ್ನೂ ಓದಿ:Bihar: ಬಿಹಾರದಲ್ಲಿ ಜಾತಿ ಆಧಾರಿತ ಸಮೀಕ್ಷೆಗೆ ಬ್ರೇಕ್​​ ಹಾಕಿದ ಪಾಟ್ನಾ ಹೈಕೋರ್ಟ್

ಡಿಸೆಂಬರ್ 2022 ರಲ್ಲಿ, ಅನಿಲ್ ದುಜಾನಾ ಅವರನ್ನು ದೆಹಲಿ ಪೊಲೀಸರು ಮಯೂರ್ ವಿಹಾರ್ ಪ್ರದೇಶದಿಂದ ಬಂಧಿಸಿದರು. ದುಜಾನಾ ಅವರ ತಲೆಗೆ 50,000 ರೂ ಬಹುಮಾನ ಘೋಷಿಸಿದ್ದು ಈತ ಉತ್ತರ ಪ್ರದೇಶದ ಮೋಸ್ಟ್ ವಾಂಟೆಡ್ ಕ್ರಿಮಿನಲ್‌ಗಳ ಪಟ್ಟಿಯಲ್ಲಿದ್ದನು.

ರಾಷ್ಟ್ರೀಯ ಭದ್ರತಾ ಕಾಯಿದೆ (ಎನ್‌ಎಸ್‌ಎ), ಗೂಂಡಾ ಕಾಯಿದೆ ಸೇರಿದಂತೆ ಹಲವು ಆರೋಪಗಳಲ್ಲಿ ಆತನ ವಿರುದ್ಧ ಪ್ರಕರಣ ದಾಖಲಾಗಿತ್ತು. ಹಲವು ಪ್ರಕರಣಗಳಲ್ಲಿ ಹಾಜರಾಗದ ಕಾರಣ ನ್ಯಾಯಾಲಯ ಅವರ ವಿರುದ್ಧ ಜಾಮೀನು ರಹಿತ ವಾರಂಟ್ ಜಾರಿ ಮಾಡಿತ್ತು. ದುಜಾನಾಗೆ ಬಾದಲ್ಪುರ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 3:54 pm, Thu, 4 May 23

Follow Us
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
ಬಾಗಲಕೋಟೆ ವಿವಿ ಘಟಿಕೋತ್ಸವ: ರೈತನ ಮಗಳಿಗೆ ಗೋಲ್ಡ್​​ ಮೆಡಲ್
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ