AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET: 18 ವರ್ಷದ ಮಗಳೊಂದಿಗೆ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡ ಅಪ್ಪ

ಅಪ್ಪ ಮಗಳು ಜತೆಯಾಗಿಯೇ ಓದುತ್ತಿದ್ದರು. ಅಪ್ಪನಿಗೆ ಓದಿದ್ದು ಬೇಗ ಅರ್ಥವಾಗುತ್ತಿತ್ತು. ಅಪ್ಪ ಪರೀಕ್ಷೆ ಬರೆದು ಪಾಸಾಗಿ  ಸೀಟು ಸಿಕ್ಕಿ ನನಗೆ ಸೀಟು ಸಿಗದಿದ್ದರೇ ಎಂಬ ಚಿಂತೆ ಮಗಳಿಗೆ ಇತ್ತು. ಈಗ ಇಬ್ಬರಿಗೂ ಸೀಟು ಸಿಕ್ಕಿರುವುದು ಖುಷಿ ಕೊಟ್ಟಿದೆ ಎಂದ ಅಮ್ಮ

NEET: 18 ವರ್ಷದ ಮಗಳೊಂದಿಗೆ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡ ಅಪ್ಪ
ಮುರುಗಯ್ಯನ್ ಮತ್ತು ಮಗಳು ಶೀತಲ್
TV9 Web
| Edited By: |

Updated on:Feb 04, 2022 | 7:40 AM

Share

ಕೊಚ್ಚಿ: ಕೇರಳದ (Kerala) ಎರ್ನಾಕುಳಂ ಜಿಲ್ಲೆಯ ತ್ರಿಪ್ಪೂಣಿತುರಲ್ಲಿ ಆರ್. ಮುರುಗಯ್ಯನ್ ಎಂಬ 54ರ ಹರೆಯದ ವ್ಯಕ್ತಿ 18 ವರ್ಷದ ಮಗಳೊಂದಿಗೆ ನೀಟ್ ಪರೀಕ್ಷೆ (NEET Exam) ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡಿದ್ದಾರೆ. ಬಿಪಿಸಿಎಲ್ ಕೊಚ್ಚಿ ರಿಫೈನರಿ ಮುಖ್ಯ ವ್ಯವಸ್ಥಾಪಕರಾಗಿರುವ ಲೆಫ್ಟಿನೆಂಟ್ ಕರ್ನಲ್ ಮುರುಗಯ್ಯನ್, ಮಗಳು ಶೀತಲ್ ಜತೆ ಓದಿ ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಮುರುಗಯ್ಯನ್ ಅವರಿಗೆ ಚೆನ್ನೈನ ಶ್ರೀಲಲಿತಾಂಬಿಕಾ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಲಭಿಸಿದ್ದು, ಪುತ್ರಿ ಶೀತಲ್ ಅವರಿಗೆ ಪಾಂಡಿಚೇರಿಯ ವಿನಾಯಕ ಮಿಷನ್ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಕ್ಕಿದೆ. ಮುರುಗಯ್ಯನ್ ಅವರು ಎಂಜಿನಿಯರಿಂಗ್, ಕಾನೂನು ಮತ್ತು ವ್ಯವಹಾರ ಆಡಳಿತದಲ್ಲಿ ಪದವಿಗಳನ್ನು ಹೊಂದಿದ್ದಾರೆ. ಚಿಕ್ಕವಯಸ್ಸಿನಲ್ಲೇ ವೈದ್ಯನಾಗಬೇಕು ಎಂದು ನಾನು ಬಯಸಿದ್ದೆ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ಇಂಜಿನಿಯರ್ ಆದೆ. ಗರಿಷ್ಠ ವಯೋಮಿತಿ ಇಲ್ಲದೆ ಯಾರು ಬೇಕಾದರೂ ನೀಟ್ ಪರೀಕ್ಷೆಗೆ ಹಾಜರಾಗಬಹುದು ಎಂಬ ಸುಪ್ರೀಂಕೋರ್ಟ್ (Supreme Court) ತೀರ್ಪಿನೊಂದಿಗೆ ಮುರುಗಯ್ಯನವರ ಡಾಕ್ಟರ್ ಆಗುವ ಆಸೆ ಮತ್ತೆ ಚಿಗುರಿತ್ತು. ರಿಫೈನರಿಯಲ್ಲಿ ಕೆಲಸ ಮುಗಿಸಿ ಬಂದು ಮುರುಗಯ್ಯನವರು ಮಗಳ ಜೊತೆ ನೀಟ್ ಪರೀಕ್ಷೆಗೆ ತಯಾರಿಮಾಡುತ್ತಿದ್ದರು. ಪತ್ನಿ ಮಾಲತಿ ಅವರಿಗೆ ಸಂಪೂರ್ಣ ಬೆಂಬಲ ನೀಡಿದರು.

ತಮಿಳುನಾಡಿನ ತಂಜಾವೂರು ಮೂಲದ ಮುರುಗಯ್ಯನವರು 21 ವರ್ಷಗಳಿಂದ ತ್ರಿಪ್ಪೂಣಿತುರದ ಮಾಲತಿ ನಿಲಯದಲ್ಲಿ ವಾಸಿಸುತ್ತಿದ್ದಾರೆ. ಮುಂದಿನ ಸೀಟು ಹಂಚಿಕೆ ಆದ ನಂತರವೇ ಯಾವ ಕಾಲೇಜಿಗೆ ಸೇರಬೇಕೆಂದು ನಿರ್ಧರಿಸಲಾಗುವುದು ಎಂದು ಮುರುಗಯ್ಯ ಹೇಳಿದ್ದಾರೆ.

ಅಪ್ಪ ಮಗಳು ಜತೆಯಾಗಿಯೇ ಓದುತ್ತಿದ್ದರು. ಅಪ್ಪನಿಗೆ ಓದಿದ್ದು ಬೇಗ ಅರ್ಥವಾಗುತ್ತಿತ್ತು. ಅಪ್ಪ ಪರೀಕ್ಷೆ ಬರೆದು ಪಾಸಾಗಿ  ಸೀಟು ಸಿಕ್ಕಿ ನನಗೆ ಸೀಟು ಸಿಗದಿದ್ದರೇ ಎಂಬ ಚಿಂತೆ ಮಗಳಿಗೆ ಇತ್ತು. ಈಗ ಇಬ್ಬರಿಗೂ ಸೀಟು ಸಿಕ್ಕಿರುವುದು ಖುಷಿ ಕೊಟ್ಟಿದೆ. ಮುಂದಿನ ಸೀಟು ಹಂಚಿಕೆಗೆ ಕಾಯುತ್ತಿದ್ದೇವೆ, ಒಂದೇ ಕಾಲೇಜು ಸಿಕ್ಕರೂ ಸಿಗಬಹುದು ಎಂದು ಮಾತೃಭೂಮಿ ನ್ಯೂಸ್ ಜತೆ ಮಾತನಾಡಿದ ಮುರುಗಯ್ಯನವರ ಪತ್ನಿ ಮಾಲತಿ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ನೀಟ್ ವೈದ್ಯಕೀಯ ಪರೀಕ್ಷೆಯಿಂದ ರಾಜ್ಯಕ್ಕೆ ವಿನಾಯಿತಿ ನೀಡುವ ಮಸೂದೆ ಹಿಂದಿರುಗಿಸಿದ ರಾಜ್ಯಪಾಲ

Published On - 7:40 am, Fri, 4 February 22

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ