AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

NEET: 18 ವರ್ಷದ ಮಗಳೊಂದಿಗೆ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡ ಅಪ್ಪ

ಅಪ್ಪ ಮಗಳು ಜತೆಯಾಗಿಯೇ ಓದುತ್ತಿದ್ದರು. ಅಪ್ಪನಿಗೆ ಓದಿದ್ದು ಬೇಗ ಅರ್ಥವಾಗುತ್ತಿತ್ತು. ಅಪ್ಪ ಪರೀಕ್ಷೆ ಬರೆದು ಪಾಸಾಗಿ  ಸೀಟು ಸಿಕ್ಕಿ ನನಗೆ ಸೀಟು ಸಿಗದಿದ್ದರೇ ಎಂಬ ಚಿಂತೆ ಮಗಳಿಗೆ ಇತ್ತು. ಈಗ ಇಬ್ಬರಿಗೂ ಸೀಟು ಸಿಕ್ಕಿರುವುದು ಖುಷಿ ಕೊಟ್ಟಿದೆ ಎಂದ ಅಮ್ಮ

NEET: 18 ವರ್ಷದ ಮಗಳೊಂದಿಗೆ ನೀಟ್ ಪರೀಕ್ಷೆ ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡ ಅಪ್ಪ
ಮುರುಗಯ್ಯನ್ ಮತ್ತು ಮಗಳು ಶೀತಲ್
TV9 Web
| Edited By: |

Updated on:Feb 04, 2022 | 7:40 AM

Share

ಕೊಚ್ಚಿ: ಕೇರಳದ (Kerala) ಎರ್ನಾಕುಳಂ ಜಿಲ್ಲೆಯ ತ್ರಿಪ್ಪೂಣಿತುರಲ್ಲಿ ಆರ್. ಮುರುಗಯ್ಯನ್ ಎಂಬ 54ರ ಹರೆಯದ ವ್ಯಕ್ತಿ 18 ವರ್ಷದ ಮಗಳೊಂದಿಗೆ ನೀಟ್ ಪರೀಕ್ಷೆ (NEET Exam) ಬರೆದು ಎಂಬಿಬಿಎಸ್ ಸೀಟು ಗಿಟ್ಟಿಸಿಕೊಂಡಿದ್ದಾರೆ. ಬಿಪಿಸಿಎಲ್ ಕೊಚ್ಚಿ ರಿಫೈನರಿ ಮುಖ್ಯ ವ್ಯವಸ್ಥಾಪಕರಾಗಿರುವ ಲೆಫ್ಟಿನೆಂಟ್ ಕರ್ನಲ್ ಮುರುಗಯ್ಯನ್, ಮಗಳು ಶೀತಲ್ ಜತೆ ಓದಿ ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಮುರುಗಯ್ಯನ್ ಅವರಿಗೆ ಚೆನ್ನೈನ ಶ್ರೀಲಲಿತಾಂಬಿಕಾ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಲಭಿಸಿದ್ದು, ಪುತ್ರಿ ಶೀತಲ್ ಅವರಿಗೆ ಪಾಂಡಿಚೇರಿಯ ವಿನಾಯಕ ಮಿಷನ್ ವೈದ್ಯಕೀಯ ಕಾಲೇಜಿನಲ್ಲಿ ಸೀಟು ಸಿಕ್ಕಿದೆ. ಮುರುಗಯ್ಯನ್ ಅವರು ಎಂಜಿನಿಯರಿಂಗ್, ಕಾನೂನು ಮತ್ತು ವ್ಯವಹಾರ ಆಡಳಿತದಲ್ಲಿ ಪದವಿಗಳನ್ನು ಹೊಂದಿದ್ದಾರೆ. ಚಿಕ್ಕವಯಸ್ಸಿನಲ್ಲೇ ವೈದ್ಯನಾಗಬೇಕು ಎಂದು ನಾನು ಬಯಸಿದ್ದೆ. ಆದರೆ ಮನೆಯವರ ಒತ್ತಾಯಕ್ಕೆ ಮಣಿದು ಇಂಜಿನಿಯರ್ ಆದೆ. ಗರಿಷ್ಠ ವಯೋಮಿತಿ ಇಲ್ಲದೆ ಯಾರು ಬೇಕಾದರೂ ನೀಟ್ ಪರೀಕ್ಷೆಗೆ ಹಾಜರಾಗಬಹುದು ಎಂಬ ಸುಪ್ರೀಂಕೋರ್ಟ್ (Supreme Court) ತೀರ್ಪಿನೊಂದಿಗೆ ಮುರುಗಯ್ಯನವರ ಡಾಕ್ಟರ್ ಆಗುವ ಆಸೆ ಮತ್ತೆ ಚಿಗುರಿತ್ತು. ರಿಫೈನರಿಯಲ್ಲಿ ಕೆಲಸ ಮುಗಿಸಿ ಬಂದು ಮುರುಗಯ್ಯನವರು ಮಗಳ ಜೊತೆ ನೀಟ್ ಪರೀಕ್ಷೆಗೆ ತಯಾರಿಮಾಡುತ್ತಿದ್ದರು. ಪತ್ನಿ ಮಾಲತಿ ಅವರಿಗೆ ಸಂಪೂರ್ಣ ಬೆಂಬಲ ನೀಡಿದರು.

ತಮಿಳುನಾಡಿನ ತಂಜಾವೂರು ಮೂಲದ ಮುರುಗಯ್ಯನವರು 21 ವರ್ಷಗಳಿಂದ ತ್ರಿಪ್ಪೂಣಿತುರದ ಮಾಲತಿ ನಿಲಯದಲ್ಲಿ ವಾಸಿಸುತ್ತಿದ್ದಾರೆ. ಮುಂದಿನ ಸೀಟು ಹಂಚಿಕೆ ಆದ ನಂತರವೇ ಯಾವ ಕಾಲೇಜಿಗೆ ಸೇರಬೇಕೆಂದು ನಿರ್ಧರಿಸಲಾಗುವುದು ಎಂದು ಮುರುಗಯ್ಯ ಹೇಳಿದ್ದಾರೆ.

ಅಪ್ಪ ಮಗಳು ಜತೆಯಾಗಿಯೇ ಓದುತ್ತಿದ್ದರು. ಅಪ್ಪನಿಗೆ ಓದಿದ್ದು ಬೇಗ ಅರ್ಥವಾಗುತ್ತಿತ್ತು. ಅಪ್ಪ ಪರೀಕ್ಷೆ ಬರೆದು ಪಾಸಾಗಿ  ಸೀಟು ಸಿಕ್ಕಿ ನನಗೆ ಸೀಟು ಸಿಗದಿದ್ದರೇ ಎಂಬ ಚಿಂತೆ ಮಗಳಿಗೆ ಇತ್ತು. ಈಗ ಇಬ್ಬರಿಗೂ ಸೀಟು ಸಿಕ್ಕಿರುವುದು ಖುಷಿ ಕೊಟ್ಟಿದೆ. ಮುಂದಿನ ಸೀಟು ಹಂಚಿಕೆಗೆ ಕಾಯುತ್ತಿದ್ದೇವೆ, ಒಂದೇ ಕಾಲೇಜು ಸಿಕ್ಕರೂ ಸಿಗಬಹುದು ಎಂದು ಮಾತೃಭೂಮಿ ನ್ಯೂಸ್ ಜತೆ ಮಾತನಾಡಿದ ಮುರುಗಯ್ಯನವರ ಪತ್ನಿ ಮಾಲತಿ ಹೇಳಿದ್ದಾರೆ.

ಇದನ್ನೂ ಓದಿ: ತಮಿಳುನಾಡು: ನೀಟ್ ವೈದ್ಯಕೀಯ ಪರೀಕ್ಷೆಯಿಂದ ರಾಜ್ಯಕ್ಕೆ ವಿನಾಯಿತಿ ನೀಡುವ ಮಸೂದೆ ಹಿಂದಿರುಗಿಸಿದ ರಾಜ್ಯಪಾಲ

Published On - 7:40 am, Fri, 4 February 22

S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?