AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸರ್ಕಾರಿ ನೌಕರರು ವಾರಕ್ಕೆ ಒಂದು ದಿನ ಖಾದಿ ಬಟ್ಟೆ ಧರಿಸುವುದು ಕಡ್ಡಾಯ

ಡಿಸೆಂಬರ್ 7 ರಂದು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ತನ್ನ ಎಲ್ಲಾ ಉದ್ಯೋಗಿಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೆ ತರುವ ನಿರ್ಣಯವನ್ನು ಹೊರಡಿಸಿದ್ದು, ನಾವು ರಾಜ್ಯದ ಪ್ರತಿನಿಧಿಗಳು ಸೂಕ್ತವಲ್ಲದ ಡ್ರೇಸ್ ಕೋಡ್ ಜನರ ಮನಸ್ಸಿನಲ್ಲಿ ಸರ್ಕಾರದ ಮೇಲಿನ ಚಿತ್ರಣವನ್ನು ಕೆಟ್ಟದಾಗಿ ಪ್ರತಿಬಿಂಬಿಸಬಹುದು. ಹೀಗಾಗಿ ಖಾದಿ ಧರಿಸುವಂತೆ ಸೂಚಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಸರ್ಕಾರಿ ನೌಕರರು ವಾರಕ್ಕೆ ಒಂದು ದಿನ ಖಾದಿ ಬಟ್ಟೆ ಧರಿಸುವುದು ಕಡ್ಡಾಯ
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ
preethi shettigar
| Updated By: ಸಾಧು ಶ್ರೀನಾಥ್​|

Updated on:Dec 12, 2020 | 12:31 PM

Share

ಮುಂಬೈ: ಸರ್ಕಾರಿ ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ ಔಪಚಾರಿಕ ವಸ್ತ್ರಸಂಹಿತೆಯ ಕೆಲವು ನಿಯಮಗಳನ್ನು ಮಹಾರಾಷ್ಟ್ರ ಸರ್ಕಾರ ಜಾರಿಗೆ ತಂದಿದ್ದು, ಅದರಂತೆ ವಾರಕ್ಕೊಮ್ಮೆ ಖಾದಿ ಬಟ್ಟೆ ಧರಿಸುವುದು ಕಡ್ಡಾಯ ಎಂದು ಸೂಚಿಸಲಾಗಿದೆ.

ಜೀನ್ಸ್ ಪ್ಯಾಂಟ್, ಟೀ ಶರ್ಟ್​ ಮತ್ತು ಚಪ್ಪಲಿಗಳನ್ನು ವಾರದಲ್ಲಿ ಒಂದು ದಿನ ತ್ಯಾಗ ಮಾಡುವಂತೆ ತಿಳಿಸಲಾಗಿದ್ದು, ಅದಕ್ಕೆ ಬದಲಾಗಿ ಖಾದಿ ಬಟ್ಟೆಯನ್ನು ಧರಿಸುವಂತೆ ಸೂಚಿಸಲಾಗಿದೆ. ಅದರಂತೆ ಶುಕ್ರವಾರದಂದು ಖಾದಿ ಬಟ್ಟೆ ಧರಿಸುವುದು ಬಹುತೇಕ ಖಚಿತವಾಗಿದೆ.

ಡಿಸೆಂಬರ್ 7 ರಂದು ರಾಜ್ಯ ಸರ್ಕಾರದ ಸಾಮಾನ್ಯ ಆಡಳಿತ ವಿಭಾಗವು ತನ್ನ ಎಲ್ಲಾ ಉದ್ಯೋಗಿಗಳಿಗೆ ಕಟ್ಟುನಿಟ್ಟಾದ ಡ್ರೆಸ್ ಕೋಡ್ ಜಾರಿಗೆ ತರುವ ನಿರ್ಣಯವನ್ನು ಹೊರಡಿಸಿದ್ದು, ನಾವು ರಾಜ್ಯದ ಪ್ರತಿನಿಧಿಗಳು ಸೂಕ್ತವಲ್ಲದ ಡ್ರೇಸ್ ಕೋಡ್ ಜನರ ಮನಸ್ಸಿನಲ್ಲಿ ಸರ್ಕಾರದ ಮೇಲಿನ ಚಿತ್ರಣವನ್ನು ಕೆಟ್ಟದಾಗಿ ಪ್ರತಿಬಿಂಬಿಸಬಹುದು. ಈ ಕಾರಣಕ್ಕಾಗಿಯೇ ಖಾದಿ ಧರಿಸುವಂತೆ ಸೂಚಿಸಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ತಿಳಿಸಿದೆ.

ಸರ್ಕಾರಿ ಕಚೇರಿಗಳಲ್ಲಿ ಕೆಲಸ ಮಾಡುವ ಬಹಳಷ್ಟು ಅಧಿಕಾರಿಗಳು, ನೌಕರರು, ವಿಶೇಷವಾಗಿ ಗುತ್ತಿಗೆ ಪಡೆದವರು ಅಥವಾ ಸಲಹೆಗಾರರಾಗಿ ನೇಮಕಗೊಂಡವರು ಕಚೇರಿಗೆ ಬರುವಾಗ ಸರ್ಕಾರಿ ಪ್ರತಿನಿಧಿಗಳು ಎಂದು ಗುರುತಿಸಿಕೊಳ್ಳುವಂತಹ ಬಟ್ಟೆಗಳನ್ನು ಧರಿಸುವುದಿಲ್ಲ ಇದರ ಪರಿಣಾಮವಾಗಿ ಸಮಾಜದಲ್ಲಿ ಸರ್ಕಾರಿ ಅಧಿಕಾರಿಗಳ ಚಿತ್ರಣವು ಇತ್ತೀಚೆಗೆ ಬದಲಾಗಿದೆ ಎಂದು ಸರ್ಕಾರ ತಿಳಿಸಿದೆ.

ಸರ್ಕಾರಿ ಅಧಿಕಾರಿಯ ಬಟ್ಟೆ ಅಶುದ್ಧವಾಗಿದ್ದರೆ ಅಥವಾ ಸೂಚನೆಗೆ ವಿರುದ್ಧವಾಗಿದ್ದರೆ ಅದು ಅವನ ಅಥವಾ ಅವಳ ಒಟ್ಟಾರೆ ಕೆಲಸದ ಮೇಲೆ ಪರೋಕ್ಷವಾಗಿ ಪರಿಣಾಮ ಬೀರುತ್ತದೆ ಎಂದು ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ದೇಶ್​ಪಾಂಡೆ ಹೇಳಿದ್ದಾರೆ.

ಬಹುಮತ ಸಾಬೀತು ಪಡಿಸಿದ ಠಾಕ್ರೆ ಮಹಾ ಮೈತ್ರಿ ಸರ್ಕಾರ

Published On - 12:31 pm, Sat, 12 December 20

ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು