AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೂತುಕುಡಿಯಲ್ಲಿ ಡಿಆರ್​ಐ ಕಾರ್ಯಾಚರಣೆ; ಭಾರೀ ಮೊತ್ತದ ಚೀನೀ ಪಟಾಕಿಗಳು ಜಪ್ತಿ; ನಾಲ್ವರ ಬಂಧನ

DRI Seizes Chinese Firecrackers Worth Rs 5 Cr, 4 Arrested: ದೀಪಾವಳಿ ಹಬ್ಬದ ಸಡಗರದ ಮಧ್ಯೆಯೇ ಚೀನಾ ಪಟಾಕಿ ಕಳ್ಳಸಾಗಣೆ ದಂಧೆಗೆ ಡಿಆರ್​ಐ ಅಧಿಕಾರಿಗಳು ಶಾಕ್ ನೀಡಿದ್ದಾರೆ. ಬಂದರಿಗೆ ಅಕ್ರಮವಾಗಿ ತಂದಿದ್ದ ಬರೋಬ್ಬರಿ 5 ಕೋಟಿ ರೂಪಾಯಿ ಮೌಲ್ಯದ ಚೀನಾ ಪಟಾಕಿಗಳನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಈ ದಂಧೆಯ ಹಿಂದಿದ್ದ ಪ್ರಮುಖ ನಾಲ್ವರನ್ನು ಬಂಧಿಸಿದ್ದಾರೆ.

ತೂತುಕುಡಿಯಲ್ಲಿ ಡಿಆರ್​ಐ ಕಾರ್ಯಾಚರಣೆ; ಭಾರೀ ಮೊತ್ತದ ಚೀನೀ ಪಟಾಕಿಗಳು ಜಪ್ತಿ; ನಾಲ್ವರ ಬಂಧನ
ಚೀನೀ ಪಟಾಕಿ
ಹರೀಶ್ ಜಿ.ಆರ್​.
| Edited By: |

Updated on: Oct 19, 2025 | 10:34 PM

Share

ಬೆಂಗಳೂರು, ಅಕ್ಟೋಬರ್ 19: ದೀಪಾವಳಿ ಹಬ್ಬ ಆರಂಭವಾಗುತ್ತಿದ್ದಂತೆಯೇ ಭಾರತದಲ್ಲಿ ಚೀನಾ ಪಟಾಕಿಗಳ ಹಾವಳಿ ಹೆಚ್ಚಿರುತ್ತೆ. ಚೀನಾ ಪಟಾಕಿಗಳ ಕಳ್ಳಸಾಗಾಣಿಕೆ (fire crackers smuggling) ದಂಧೆಗೆ ಡಿಆರ್‌ಐ ಅಧಿಕಾರಿಗಳು ಶಾಕ್ ನೀಡಿದ್ದಾರೆ. ತೂತುಕುಡಿ ಬಂದರಿನಲ್ಲಿ ಡಿಆರ್​ಐ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ದೀಪಾವಳಿ ಹಿನ್ನೆಲೆಯಲ್ಲಿ ಅಕ್ರಮ ಪಟಾಕಿ ಆಮದನ್ನು ತಡೆಯಲು ಡಿಆರ್​ಐ ಆಪರೇಷನ್ ಫೈರ್ ಟ್ರೇಲ್ (Operation Fire Trail) ಕಾರ್ಯಾಚರಣೆ ನಡೆಸಿದ್ದು, ಚೀನಾದಿಂದ ಅಕ್ರಮವಾಗಿ ತಂದಿದ್ದ ಪಟಾಕಿ ಜಪ್ತಿ ಮಾಡಿದ್ದಾರೆ.

ತಮಿಳುನಾಡಿನ ತೂತುಕುಡಿ ಬಂದರಿನಲ್ಲಿ (Tuticorn port) 40 ಅಡಿಯ ಎರಡು ಕಂಟೈನರ್‌ಗಳನ್ನು ಡಿಆರ್​ಐ ಅಧಿಕಾರಿಗಳು ತಡೆದು ಪರಿಶೀಲಿಸಿದ್ದಾರೆ. ಎಂಜಿನಿಯರಿಂಗ್ ಸರಕುಗಳೆಂದು ಹೇಳಿಕೊಂಡಿದ್ದ ಎರಡು ಕಂಟೈನರ್​ಗಳಲ್ಲಿ ಬರೋಬ್ಬರಿ 83,520 ಚೀನೀ ಪಟಾಕಿಗಳು ಪತ್ತೆಯಾಗಿವೆ. ವಶಪಡಿಸಿಕೊಂಡ ಈ ಚೀನಿ ಪಟಾಕಿಗಳ ಮೌಲ್ಯ ₹5.01 ಕೋಟಿ ಎಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ‘ನಮಕ್ ಹರಾಮ್’ಗಳ ಮತಗಳು ಬೇಕಿಲ್ಲ: ಬಿಹಾರದಲ್ಲಿ ಗಿರಿರಾಜ್ ಸಿಂಗ್ ಗುಡುಗು; ಮುಸ್ಲಿಮರನ್ನು ಕುಟುಕಿದ ಮಾಡಿದ ಕೇಂದ್ರ ಸಚಿವ

ಚೀನಾ ಪಟಾಕಿ ಆಮದು: ಏಕೆ ಅಕ್ರಮ?

ವಿದೇಶಿ ವ್ಯಾಪಾರ ನೀತಿಯ ಅಡಿಯಲ್ಲಿ ಪಟಾಕಿಗಳ ಆಮದನ್ನು ಸಂಪೂರ್ಣ ಭಾರತದಲ್ಲಿ ನಿರ್ಬಂಧಿಸಲಾಗಿದೆ. ಪಟಾಕಿ ಆಮದಿಗೆ DGFT ಹಾಗೂ PESO ನಿಂದ ಕಡ್ಡಾಯ ಪರವಾನಗಿ ಬೇಕು. ಈ ಅಕ್ರಮ ಆಮದು ಈ ಕಾನೂನುಗಳನ್ನು ಉಲ್ಲಂಘಿಸಿರುವುದು ಮಾತ್ರವಲ್ಲದೆ, ಚೀನಾ ಪಟಾಕಿಗಳ ಅತಿಹೆಚ್ಚು ದಹನಶೀಲತೆಯಿಂದಾಗಿ ಸಾರ್ವಜನಿಕ ಸುರಕ್ಷತೆ ಮತ್ತು ಬಂದರು ಮೂಲಸೌಕರ್ಯಕ್ಕೆ ಗಂಭೀರ ಅಪಾಯವನ್ನುಂಟು ಮಾಡುತ್ತಿತ್ತು. ಕಳ್ಳಸಾಗಣೆಯನ್ನು ತಡೆಯಲು ಡಿಆರ್‌ಐ ಬದ್ಧವಾಗಿದೆ ಎಂದು ಹಣಕಾಸು ಸಚಿವಾಲಯ ತಿಳಿಸಿದೆ.

ದಂಧೆಯ ಹಿಂದಿದ್ದ 4 ಆರೋಪಿಗಳ ಬಂಧನ

ಈ ಅಕ್ರಮ ಕಳ್ಳಸಾಗಣೆ ದಂಧೆಯ ಹಿಂದಿದ್ದವರನ್ನು ಡಿಆರ್‌ಐ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ತೂತುಕುಡಿಯಲ್ಲಿ ಆಮದುದಾರನನ್ನು ಬಂಧಿಸಿದ ಬಳಿಕ, ತನಿಖೆಯಿಂದ ದೊರೆತ ಮಾಹಿತಿ ಮೇರೆಗೆ ಚೆನ್ನೈ ಮತ್ತು ತೂತುಕುಡಿಯಿಂದ ಇಬ್ಬರು ಮುಂಬೈ ಮೂಲದವರು ಸೇರಿದಂತೆ ಇನ್ನೂ ಮೂವರನ್ನು ಬಂಧಿಸಲಾಗಿದೆ. ಈ ನಾಲ್ವರು ಆರೋಪಿಗಳನ್ನೂ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇದನ್ನೂ ಓದಿ: ಅಯೋಧ್ಯೆಗೆ ಬೆಳಕಿನ ಮೆರಗು ಕೊಟ್ಟ ದೀಪಾರತಿ; 2 ಗಿನ್ನೆಸ್ ದಾಖಲೆಗಳ ನಿರ್ಮಾಣ

ಒಟ್ಟಿನಲ್ಲಿ, ಡಿಆರ್‌ಐ ಈ ದೊಡ್ಡ ಕಳ್ಳಸಾಗಣೆ ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ. ಆಮದು ನಿಯಮಗಳನ್ನು ಉಲ್ಲಂಘಿಸಿ, ಸಾರ್ವಜನಿಕ ಸುರಕ್ಷತೆಗೆ ಅಪಾಯ ತಂದೊಡ್ಡುವ ಇಂತಹ ಕೃತ್ಯಗಳ ವಿರುದ್ಧ ಡಿಆರ್‌ಐ ತನ್ನ ಕಾರ್ಯಾಚರಣೆಯನ್ನು ತೀವ್ರಗೊಳಿಸುವುದಾಗಿ ಹೇಳಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ